Homeಮುಖಪುಟದ್ವೇಷ ಭಾಷಣ: ಮುಸ್ಲಿಮ್ ಮುಖಂಡರೊಂದಿಗೆ ಸಭೆ; ತೆಕ್ಕಾರಿನ ದೇವಸ್ಥಾನದ ಆಡಳಿತ ಮಂಡಳಿಯಿಂದ ವಿಷಾದ ಪತ್ರ

ದ್ವೇಷ ಭಾಷಣ: ಮುಸ್ಲಿಮ್ ಮುಖಂಡರೊಂದಿಗೆ ಸಭೆ; ತೆಕ್ಕಾರಿನ ದೇವಸ್ಥಾನದ ಆಡಳಿತ ಮಂಡಳಿಯಿಂದ ವಿಷಾದ ಪತ್ರ

- Advertisement -
- Advertisement -

ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜಾ ದ್ವೇಷ ಭಾಷಣ

ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ವೇದಿಕೆಯಲ್ಲಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಗ್ರಾಮದ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸ್ಥಳೀಯ ಮುಸ್ಲಿಮ್ ಮುಖಂಡರ ಜತೆ ದೇವಸ್ಥಾನದ ಆಡಳಿತ ಮಂಡಳಿಯು ಸಭೆ ನಡೆಸಿ, ವಿಷಾದ ಪತ್ರ ಬರೆದಿದೆ.

ಶ್ರೀ ಗೋಪಾಲಕೃಷ್ ಭಟ್ರಬೈಲು, ದೇವರ ಗುಡ್ಡೆ ಸೇವಾ ಟ್ರಸ್ಟ್ ಅಧ್ಯಕ್ಷರು ಸರಳೀಕಟ್ಟೆ ಮುಸ್ಲಿಮ್ ಒಕ್ಕೂಟದವರಿಗೆ ಪತ್ರ ಬರೆದು ದ್ವೇಷ ಭಾಷಣದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಹಿಂದಿನ ಹಾಗೆಯೇ ಸೌಹಾರ್ದಯುತವಾದ ಬದುಕು ನಡೆಯಬೇಕಾಗಿದೆ. ಮುಸ್ಲಿಮರ ಸಹಕಾರವನ್ನು ದೇವಸ್ಥಾನ ಆಡಳಿತ ಮಂಡಳಿ ಸ್ವಾಗತಿಸುತ್ತದೆ. ಮುಂದೆಯೂ ಎಲ್ಲಾ ಸಮುದಾಯದವರು ಒಬ್ಬರಿಗೊಬ್ಬರು ಸಹಕಾರದೊಂದಿಗೆ ಬದುಕಬೇಕು ಎಂಬುದು ನಮ್ಮ ಆಶಯ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದಕ್ಕೆ ಸ್ಪಷ್ಠೀಕರಣ ನೀಡುವ ಸಲುವಾಗಿ ಹಿಂದೂ – ಮುಸ್ಲಿಮ್ ಮುಖಂಡರ ಸಭೆ ನಡೆಸಲಾಯಿತು. ಸಭೆಯಲ್ಲಿ ಘಟನೆ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿಯು ತೀವ್ರ ವಿಷಾದ ವ್ಯಕ್ತಪಡಿಸಿತು ಎನ್ನಲಾಗಿದೆ.

ಸ್ಥಳೀಯ ಮುಸ್ಲಿಮರು ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಬೇಕಾದ ಎಲ್ಲಾ ರೀತಿಯ ಸಹಾಯ ಸಹಕಾರಗಳನ್ನು ಮಾಡಿದ್ದರು. ಮುನೀರ್ ಎಂಬವರು ಮರವನ್ನು ನೀಡಿದ್ದರು, ಅಬ್ಬಾಸ್ ಎಂಬವರು ವೇದಿಕೆ ನಿರ್ಮಿಸಲು ಸ್ಥಳವನ್ನು ನೀಡಿದ್ದರು, ಭಕ್ತಾದಿಗಳಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಟಿ.ಎಚ್.ಉಸ್ತಾದರ ಮಕ್ಕಳ ಒಡೆತನದ ಜಮೀನಿನಲ್ಲಿ ನೀಡಲಾಗಿತ್ತು, ನೀರಿನ ವ್ಯವಸ್ಥೆಗೆ ಮತ್ತು ಅನ್ನ ಸಂತರ್ಪಣೆಗೆ ಮುಸ್ಲಿಮರ ಜಾಗವನ್ನೇ ಬಳಸಲಾಗಿತ್ತು. ಇದಲ್ಲದೆ ಆರ್ಥಿಕವಾಗಿಯೂ ಗ್ರಾಮದ ಮುಸ್ಲಿಮರು ದೇವಸ್ಥಾನಕ್ಕೆ ಸಹಾಯವನ್ನು ನೀಡಿದ್ದರು. ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಸ್ಥಳೀಯ ಮುಸ್ಲಿಮರು ಬ್ಯಾನರ್ ಗಳನ್ನು ಅಳವಡಿಸಿದ್ದರ ಬಗ್ಗೆ ಮುಸ್ಲಿಮ್ ಒಕ್ಕೂಟದ ಪ್ರತಿನಿಧಿಗಳು ಸಭೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಗಮನ ಸೆಳೆದರು.

ಪ್ರಕರಣದ ಹಿನ್ನೆಲೆ

ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ನೂತನ ದೇವಸ್ಥಾನದ ಬ್ರಹ್ಮಕಲಶ (ಉದ್ಘಾಟನೆ) ಕಾರ್ಯಕ್ರಮದಲ್ಲಿ  ಸ್ಥಳೀಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಮುಸ್ಲಿಮರ ವಿರುದ್ದ ಕೋಮುದ್ವೇಷದ ಭಾಷಣ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಜನಪ್ರತಿನಿಧಿಯೇ ಶಾಂತಿ, ಸಾಮರಸ್ಯದ ಊರಿನಲ್ಲಿ  ಮತೀಯದ್ವೇಷ ಕಾರಿರುವುದಕ್ಕೆ ಗ್ರಾಮದ ಜನರು ಬೇಸರ ವ್ಯಕ್ತಪಡಿಸಿದ್ದರು.

ತೆಕ್ಕಾರು ಗ್ರಾಮದ ಭಟ್ರಬೈಲಿನ ದೇವರಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿದ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮವನ್ನು 2025 ಏಪ್ರಿಲ್ 25ರಿಂದ ಮೇ 3ರವರೆಗೆ ಆಯೋಜಿಸಲಾಗಿತ್ತು. ಕೊನೆಯ ದಿನವಾದ ಶನಿವಾರ (ಮೇ.3) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕ ಹರೀಶ್ ಪೂಂಜಾ, ಬ್ಯಾರಿ ಸಮುದಾಯದವರ (ಸ್ಥಳೀಯ ಮುಸ್ಲಿಮರು) ವಿರುದ್ಧ ದ್ವೇಷ ಭಾಷಣ ಮಾಡಿದ್ದರು.

“ಬ್ಯಾರಿಗಳ (ಮುಸ್ಲಿಮರ) ಆಕ್ರಮಣದಿಂದ ಅಯೋಧ್ಯೆಯ ರಾಮ ಮಂದಿರ ಮಸೀದಿಯಾದ ಬಳಿಕ ನಾವು 500 ವರ್ಷ ಕಾದೆವು. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು.. ಅಯೋಧ್ಯೆಯಲ್ಲಿ ರಾಮ ಹುಟ್ಟಿದ್ದು ಎಂದಾಗ ಅರ್ಥ ಮಾಡಿಕೊಳ್ಳಲಿಲ್ಲ. ನಾವು 500 ವರ್ಷ ಕಾದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಿದೆವು.” ಎಂದು ಪೂಂಜಾ ಹೇಳಿದ್ದರು.

“ತೆಕ್ಕಾರಿನಲ್ಲಿ ಒಬ್ಬನೇ ಒಬ್ಬ ಬ್ಯಾರಿ (ಮುಸ್ಲಿಂ) ಇಲ್ಲದಿದ್ದಾಗಲೂ ನಮ್ಮ ಹಿರಿಯರು ಗೋಪಾಲಕೃಷ್ಣ ದೇವರನ್ನು ನಂಬಿಕೊಂಡು ಬಂದಿದ್ದರು. ಬಳಿಕ ಬ್ಯಾರಿಗಳ ಅಥವಾ ಟಿಪ್ಪುವಿನ ಆಕ್ರಮಣದಿಂದ ಗೋಪಾಲಕೃಷ್ಣ ದೇವಸ್ಥಾನ ಧ್ವಂಸಗೊಂಡು ನೆಲದಡಿಗೆ ಹೋದರೂ, ನಾವು ಹಿಂದೂ ಸಮಾಜ ನಿದ್ದೆಯಲ್ಲಿದ್ದೆವು, ನಾವು ಎದ್ದಿರಲಿಲ್ಲ. ಕಾಲಚಕ್ರ ಉರುಳಿ, ಉರುಳಿ ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆ ಆದ ಮರುವರ್ಷ, ಅಂದರೆ 2025ರಲ್ಲಿ ತೆಕ್ಕಾರಿನಲ್ಲಿ ಇರುವ ಅತ್ಯಲ್ಪ ಹಿಂದೂ ಸಮಾಜ ಒಂದಾಗಿ ಗೋಪಾಲಕೃಷ್ಣ ದೇವರನ್ನು ಪ್ರತಿಷ್ಠೆ ಮಾಡುವ ಸಂಕಲ್ಪ ಬಂತಲ್ವ ಅದಕ್ಕೆ ಗೋಪಾಲಕೃಷ್ಣ ದೇವರ ಪ್ರೇರಣೆ ಇದೆ” ಎಂದು ಅವರು ತಿಳಿಸಿದ್ದರು.

“ಇತಿಹಾಸವನ್ನು ಮತ್ತೊಮ್ಮೆ ನೀವು ಮರೆತ್ತದ್ದೇ ಆದರೆ, ನಿಮ್ಮ ಊರಿನಲ್ಲಿರುವುದು 150 ಹಿಂದೂಗಳ ಮನೆಗಳು, ಒಂದು ಸಾವಿರಕ್ಕಿಂತಲೂ ಅಧಿಕ ಇರುವುದು ಬ್ಯಾರಿಗಳು. ಇನ್ನು 10 ವರ್ಷ ಕಳೆದರೆ 1,200 ಇರುವ ಬ್ಯಾರಿಗಳ ಸಂಖ್ಯೆ 600ಕ್ಕೆ ಇಳಿಯುವುದಿಲ್ಲ. ಇನ್ನು 10 ವರ್ಷ ಕಳೆದರೆ ತೆಕ್ಕಾರಿನ ಬ್ಯಾರಿಗಳ ಸಂಖ್ಯೆ 5 ಸಾವಿರ ಆಗುತ್ತದೆ. 5 ಸಾವಿರದಿಂದ 10 ಸಾವಿರ ಆದರೂ, ಇಲ್ಲಿರುವ ಹಿಂದೂ ಸಮಾಜ ಸನಾತನವಾಗಿ ಸಾವಿರ ವರ್ಷ ಗೋಪಾಲಕೃಷ್ಣ ದೇವರನ್ನು ಆರಾಧನೆ ಮಾಡುತ್ತೇವೆ ಎನ್ನುವ ಸಂಕಲ್ಪ ಮಾಡುವ ದಿನ, ಇಂದಿನ ಬ್ರಹ್ಮಕಲಶೋತ್ಸವದ ದಿನ” ಎಂದಿದ್ದರು.

“ಬ್ಯಾರಿಗಳಲ್ಲಿ ಎಷ್ಟು ಜಾತಿ ಇದೆ ಎಂದು ಕೇಳಿದರೆ ಅಂಕಿ ಅಂಶ ಹೇಳುತ್ತದೆ, ಮೊನ್ನೆ ಸಿದ್ದರಾಮಯ್ಯ ಜನಗಣತಿ ಮಾಡಿದರು, ಅದರಲ್ಲಿ ಬ್ಯಾರಿಗಳಲ್ಲಿ ಜಾತಿ ಇದೆಯಾ ಕೇಳಿದರೆ, ಜಾತಿ ಇಲ್ಲ ಎಂದಿದ್ದಾರೆ. ಬ್ಯಾರಿಗಳಲ್ಲಿ ಕನಿಷ್ಠ 70-74 ಜಾತಿಗಳಿವೆ. ಆದರೆ, ನಮಗೆ ಯಾವ ಜಾತಿ ಎಂದು ಯಾರಿಗೂ ಗೊತ್ತಿಲ್ಲ. ನಮಗೆ ಗೊತ್ತಿರುವುದು ಏನು ಎಂದರೆ, ಉಸ್ಮಾನಾಕ, ಅಬ್ದುಲ್ಲಾಕ, ಇಬ್ರಾಹಿಂ ಎಲ್ಲಾ ಬ್ಯಾರಿ ಎಂದೇ ಗೊತ್ತಿರುವುದು. ಆದರೆ, ಹಿಂದೂ ಸಮಾಜದಲ್ಲಿ ನಾವು ಆ ರೀತಿಯಲ್ಲ. ಅವನು ಯಾರು..ಅವನು ಬ್ರಾಹ್ಮಣ, ಇವನು ಯಾರು..ಅವನು ಶೆಟ್ಟಿ, ಅವನು ಯಾರು.. ಅವನು ಬಿಲ್ಲವ, ಇವನು ಯಾರು..ಅವನು ಗೌಡ, ಇವನು ಯಾರು..ಅವನು ಕುಲಾಲ, ಈ ರೀತಿಯ ಜಾತಿ-ಜಾತಿ ನಮಗೆ ಮಾತ್ರ ಗೊತ್ತಿರುವುದಲ್ಲ, ಬ್ಯಾರಿಗಳಿಗೂ ಗೊತ್ತಿದೆ” ಎಂದು ಅವರು ತಿಳಿಸಿದ್ದರು.

“ಒಂದು ಸರ್ಕಾರಿ ಜಾಗವಿದೆ, ಅದನ್ನು ಒಬ್ಬ ಬ್ಯಾರಿ ಅತಿಕ್ರಮಣ ಮಾಡಿ ಅಡಿಕೆ ಗಿಡ ನೆಟ್ಟಿದ್ದಾನೆ. ನೀವು ಏನಾದರು ಮಾಡಿ ಸಹಕಾರ ಮಾಡಿದರೆ ನಮಗೆ ದೇವಸ್ಥಾನ ಮಾಡಬಹುದು ಎಂದು ತೆಕ್ಕಾರಿನವರು ಹೇಳಿದ್ದರು. ಎಲ್ಲಾ ಯುವಕರು ಒಂದು ನೆನಪು ಇಟ್ಟುಕೊಳ್ಳಿ ಆವತ್ತು ಇದ್ದಿದ್ದು ಬಿಜೆಪಿ ಸರ್ಕಾರ. ಆವತ್ತು ನಾನು ತಹಶೀಲ್ದಾರ್‌ಗೆ ಕರೆ ಮಾಡಿ ಮರುದಿನ ಹೋಗಿ ಸ್ಥಳ ಮಹಜರು ಮಾಡಿ ವರದಿ ಕೊಡಿ ಎಂದು ಹೇಳಿದ್ದೆ. ನಾನು ಹೇಳಿದ ಮರುದಿನ ತಹಶೀಲ್ದಾರ್ ಬಂದು ಸ್ಥಳ ತನಿಖೆ ಮಾಡಿ ವರದಿ ಕೊಟ್ಟರು. ವರದಿ ಕೊಟ್ಟ ಬಳಿಕ ಡಿಸಿಯಾದ ರವಿ ಅವರಿಗೆ ಆ ಜಾಗದಲ್ಲಿ ಗೋಪಾಲಕೃಷ್ಣ ದೇವಸ್ಥಾನ ಇದೆ ಎಂದು ನಾನು ಹೇಳಿದ್ದೆ. ತಕ್ಷಣ ಆ ಜಾಗದ ಆರ್‌ಟಿಸಿಯನ್ನು ಗೋಪಾಲಕೃಷ್ಣ ದೇವರ ಹೆಸರಿಗೆ ಮಾಡಿ ಕೊಡಿ ಎಂದಿದ್ದೆ. 25 ಸೆಂಟ್ಸ್ ಜಾಗ ಗೋಪಾಲಕೃಷ್ಣ ದೇವರ ಹೆಸರಿಗೆ ಆಯ್ತು. ಇದು ನಾನು, ಡಿಸಿ ಸೇರಿದಂತೆ ಯಾರ ಸಾಧನೆಯೂ ಅಲ್ಲ, ಇತಿಹಾಸದಲ್ಲಿ ಈ ಮೊದಲು ಈ ರೀತಿ ಅಗಿಲ್ಲ, ಮುಂದೆಯೂ ಆಗಲ್ಲ” ಎಂದು ಪೂಂಜಾ ಹೇಳಿದ್ದರು.

 

“ಇಲ್ಲಿನ ಕಂತ್ರಿ (ದುಷ್ಟ) ಬ್ಯಾರಿಗಳು ಟ್ಯೂಬ್‌ಲೈಟ್ ಪುಡಿಗೈದಾಗ, ಸಂಖ್ಯೆ ಕಡಿಮೆ ಇದ್ದರೂ ಜನ ಸಾಗರ ಇರುವ ಗ್ರಾಮದ ರೀತಿ ತೆಕ್ಕಾರಿನವರು ಯಾರೂ ಎದೆಗುಂದಲಿಲ್ಲ. ಅಣ್ಣ ದಿನ ಬೆಳಗಾದರೆ ತೆಕ್ಕಾರಿನ ಕಂತ್ರಿ ಬ್ಯಾರಿಗಳು ಬಂದು ಟ್ಯೂಬ್ ಲೈಟ್‌ ಪುಡಿ ಮಾಡುತ್ತಿದ್ದಾರೆ, ಡೀಸೆಲ್ ಕದಿಯುತ್ತಿದ್ದಾರೆ ಎಂದು ನಮ್ಮ ಯುವಕರು ಹೇಳಿದ್ದಾರೆ. ನಾನು ಹೇಳಿದೆ ನೀವು ಏನೂ ತಲೆಬಿಸಿ ಮಾಡಿಕೊಳ್ಳಬೇಡಿ. ಬ್ರಹ್ಮಕಲಶ ಆಗಿ ನಾಡಿದ್ದು ದೊಡ್ಡ ಕಲಶ ಆಗುವ ಮುನ್ನ ಟ್ಯೂಬ್‌ಲೈಟ್ ಪುಡಿ ಮಾಡಿದವರಲ್ಲಿ ಯಾರಿಗಾದರು ಗೊತ್ತಾಗುತ್ತದೆ. ಗೋಪಾಲಕೃಷ್ಣ ದೇವರು ಎಲ್ಲಾದರು ತೋರಿಸುತ್ತಾರೆ, ನೀವು ಗಡಿಬಿಡಿ ಮಾಡಲು ಹೋಗಬೇಡಿ ಎಂದು ಹೇಳಿದೆ” ಎಂದಿದ್ದರು.

“ನಿಮಗಿದು ಗೊತ್ತಿರಲಿ, ನಮ್ಮ ದೇವಸ್ಥಾನದ ನಮ್ಮ ದೊಡ್ಡ ತಪ್ಪು ಯಾವುದೆಂದರೆ, ನಾವು ಎಲ್ಲರನ್ನು ಸೌಹಾರ್ದತೆಯಿಂದ ಕೊಂಡೊಯ್ಯಲು ನೋಡುವುದು. ನಾವು ಮಸೀದಿಗೆ ಏಕೆ ಆಹ್ವಾನ ಪತ್ರಿಕೆ ಕೊಡಬೇಕಿತ್ತು? ಮಸೀದಿಗೆ ಹೋಗಿ ಆಹ್ವಾನ ಪತ್ರಿಕೆ ಕೊಟ್ಟಿದ್ದಕ್ಕಲ್ವ ಟ್ಯೂಬ್ ಲೈಟ್ ಪುಡಿಯಾಗಿದ್ದು? ಆಹ್ವಾನ ಪತ್ರಿಕೆ ಕೊಟ್ಟಿಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. ನಮಗೂ ಅವರಿಗೂ (ಮುಸ್ಲಿಮರು) ಸಂಬಂಧ ಇಲ್ಲ. ನಾವು ಯಾವುದನ್ನೂ ಸರಿದೂಗಿಸಿಕೊಂಡು ಹೋಗುವ ಅಗತ್ಯ ಇಲ್ಲ. ನಾವು ಹಿಂದೂಗಳು ಹಿಂದೂಗಳೇ, ಅದರಲ್ಲಿ ಎರಡು ಮಾತಿಲ್ಲ. ಟ್ಯೂಬ್‌ಲೈಟ್‌ ಪುಡಿ ಮಾಡಿದ್ದು ನಾನೇ ಎಂದು, ಕಂತ್ರಿ ಬ್ಯಾರಿಯನ್ನು ತೆಕ್ಕಾರಿನ ಜನತೆಯ ಮುಂದೆ ಗೋಪಾಲಕೃಷ್ಣ ದೇವರು ತೋರಿಸಲಿ” ಎಂದು ಪೂಂಜಾ ತಿಳಿಸಿದ್ದರು.

ಕೋಮು ದ್ವೇಷ ಭಾಷಣದ ಆರೋಪ: ಪ್ರಕರಣ ರದ್ದು ಕೋರಿ ಶಾಸಕ ಹರೀಶ್‌ ಪೂಂಜ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....