Homeರಾಷ್ಟ್ರೀಯತೆಲಂಗಾಣ | ಮರ ಕಡಿದ ಆರೋಪ: ಆದಿವಾಸಿ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಅರಣ್ಯಾಧಿಕಾರಿ

ತೆಲಂಗಾಣ | ಮರ ಕಡಿದ ಆರೋಪ: ಆದಿವಾಸಿ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಅರಣ್ಯಾಧಿಕಾರಿ

- Advertisement -
- Advertisement -

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಚೆನ್ನೂರು ಮಂಡಲದ ಶಿವಲಿಂಗಪುರ ಮತ್ತು ಅಕ್ಕೆಪಲ್ಲಿ ಗ್ರಾಮದ ಮಹಿಳೆಯರು ಕಾಡಿನಲ್ಲಿ ಮರಗಳನ್ನು ಕಡಿದಿದ್ದಾರೆ ಎಂದು ಆರೋಪಿಸಿ ಶನಿವಾರದಂದು ಅರಣ್ಯಾಧಿಕಾರಿಗಳು  ಐವರು ಆದಿವಾಸಿ ಮಹಿಳೆಯರನ್ನು ಬಲವಂತವಾಗಿ ಚೆನ್ನೂರು ಅರಣ್ಯ ಶಿಬಿರದ ಕಚೇರಿಯಲ್ಲಿ ಬಂಧಿಸಿಟ್ಟು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯರನ್ನು ಎರಡು ಗಂಟೆಗಳ ಕಾಲ ಕ್ಯಾಂಪ್ ಕಚೇರಿಯಲ್ಲಿ ಬೀಗ ಹಾಕಲಾಗಿದ್ದು, ಇದನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ ಕೂಡಾ ನಡೆಸಲಾಗಿದೆ ಎಂದು ವರದಿಯಾಗಿದೆ. 25 ವರ್ಷಕ್ಕೂ ಹೆಚ್ಚು ಕಾಲ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದು, ಸರಕಾರಿ ಜಮೀನಿನಲ್ಲಿ ಮರ ಕಡಿಯುತ್ತೇವೆ ಎಂದು ಅರಣ್ಯಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಲವು ಮಹಿಳೆಯರು ಪೋಡು ಜಮೀನುಗಳಲ್ಲಿ ಅರಣ್ಯ ಇಲಾಖೆ ನೆಟ್ಟಿದ್ದ ಮರಗಳನ್ನು ಕಡಿದಿದ್ದು, ಇದಕ್ಕಾಗಿ ಮಹಿಳೆಯರನ್ನು ಕಚೇರಿಯೊಳಗೆ ಹಾಕಿ ಬೀಗ ಹಾಕಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ತಮ್ಮ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ, ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದಾಗಿ ಸಂಜೆ ವೇಳೆಗೆ ಮಹಿಳೆಯರನ್ನು ಬಿಡುಗಡೆ ಮಾಡಲಾಯಿತು ಎಂದು ವರದಿ ಉಲ್ಲೇಖಿಸಿವೆ.

ಇದನ್ನೂ ಓದಿ: “ಆದಿವಾಸಿಗಳ ಬದುಕನ್ನು ಅಧ್ಯಯನ ಮಾಡುತ್ತಾ ದಲಿತಳಾದ ನನ್ನ ಬದುಕಿನ ಜೊತೆಗೂ ಸಮೀಕರಿಸಿಕೊಳ್ಳಲು ಸಾಧ್ಯವಾಯ್ತು”: ಕೆ.ಪಿ ಅಶ್ವಿನಿ

ಘಟನೆಯನ್ನು ವಿರೋಧಿಸಿ ಗ್ರಾಮಸ್ಥರು ಅರಣ್ಯ ಕ್ಯಾಂಪ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ತಾವು ಸಾಗುವಳಿ ಮಾಡುತ್ತಿರುವ ಜಮೀನಿನ ದಾಖಲೆಗಳನ್ನು ನೀಡಬೇಕು ಎಂದು ಚೆನ್ನೂರು ಶಾಸಕ ಬಾಲ್ಕ ಸುಮನ್ ಅವರಿಗೆ ಒತ್ತಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆದಿವಾಸಿಗಳು ಎಚ್ಚರಿಸಿದ್ದಾರೆ.

ಪೋಡು ಎಂಬುದು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳು ಶತಮಾನಗಳಿಂದ ಮಾಡಲ್ಪಡುವ ಒಂದು ಸಾಂಪ್ರದಾಯಿಕ ಕೃಷಿ ಅಥವಾ ಪಾಳಿ ಕೃಷಿಯ ಒಂದು ಸಾಂಪ್ರದಾಯಿಕ ರೂಪವಾಗಿದೆ. ಅದಿಲಾಬಾದ್, ಮಂಚೇರಿಯಲ್, ಮಹಬೂಬ್‌ನಗರ ಮತ್ತು ಖಮ್ಮಂ ಜಿಲ್ಲೆಗಳ ಅರಣ್ಯ ಪ್ರದೇಶದ ಗಡಿಯಲ್ಲಿ ವಾಸಿಸುವ ನಿವಾಸಿಗಳು ಪೋಡು ಭೂಮಿಯನ್ನು ಸಾಗುವಳಿ ಮಾಡುತ್ತಿದೆ.

ಪೋಡು ಭೂಮಿಯಲ್ಲಿ ಸಾಗುವಳಿ ಹಕ್ಕು ಕೋರಿ ಸಾವಿರಾರು ಅರ್ಜಿಗಳು ವಿವಿಧ ಹಂತಗಳಲ್ಲಿ ಬಾಕಿ ಇವೆ. ಈ ಭೂಮಿಯನ್ನು ಅರಣ್ಯ ಇಲಾಖೆಯು ಸರ್ಕಾರಿ ಭೂಮಿ ಎಂದು ಹೇಳಿಕೊಂಡಿದೆ. ಪೋಡು ಭೂಮಿ ಹಕ್ಕು ವಿಚಾರವಾಗಿ ಅಧಿಕಾರಿಗಳು ಹಾಗೂ ಆದಿವಾಸಿಗಳ ನಡುವೆ ಹಲವು ವರ್ಷಗಳಿಂದ ಜಟಾಪಟಿ ನಡೆಯುತ್ತಲೇ ಇದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ನವೆಂಬರ್ 2021 ರಲ್ಲಿ, ತೆಲಂಗಾಣ ಸರ್ಕಾರವು ಅರ್ಹ ಹಕ್ಕುದಾರರಿಗೆ ಭೂಮಿಯ ಹಕ್ಕು ಪತ್ರಗಳನ್ನು ನೀಡುವುದಾಗಿ ಘೋಷಿಸಿತು, ಆದರೆ ಅದನ್ನು ಅದೇ ವರ್ಷ ಡಿಸೆಂಬರ್‌ನಲ್ಲಿ ಥಟ್ಟನೆ ನಿಲ್ಲಿಸಲಾಯಿತು. ಈ ವರ್ಷ ಜುಲೈ 7 ರಂದು ಮಂಚೇರಿಯಲ್ ಜಿಲ್ಲೆಯ ದಂಡೆಪಲ್ಲಿ ಮಂಡಲದ ಕೊಯಪೋಶಗುಡೆಂ ಗ್ರಾಮದಲ್ಲಿ ಅರಣ್ಯ ಇಲಾಖೆ ನೌಕರರು ವಿವಾದಿತ ಅರಣ್ಯ ಭೂಮಿಯಲ್ಲಿ ರೈತರು ನಿರ್ಮಿಸಿದ್ದ ಗುಡಿಸಲುಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದರು. ಇದನ್ನು ರೈತರು ವಿರೋಧಿಸಿದಾಗ ಅರಣ್ಯಾಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...