Homeರಾಷ್ಟ್ರೀಯತೆಲಂಗಾಣ | ಮರ ಕಡಿದ ಆರೋಪ: ಆದಿವಾಸಿ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಅರಣ್ಯಾಧಿಕಾರಿ

ತೆಲಂಗಾಣ | ಮರ ಕಡಿದ ಆರೋಪ: ಆದಿವಾಸಿ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಅರಣ್ಯಾಧಿಕಾರಿ

- Advertisement -
- Advertisement -

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಚೆನ್ನೂರು ಮಂಡಲದ ಶಿವಲಿಂಗಪುರ ಮತ್ತು ಅಕ್ಕೆಪಲ್ಲಿ ಗ್ರಾಮದ ಮಹಿಳೆಯರು ಕಾಡಿನಲ್ಲಿ ಮರಗಳನ್ನು ಕಡಿದಿದ್ದಾರೆ ಎಂದು ಆರೋಪಿಸಿ ಶನಿವಾರದಂದು ಅರಣ್ಯಾಧಿಕಾರಿಗಳು  ಐವರು ಆದಿವಾಸಿ ಮಹಿಳೆಯರನ್ನು ಬಲವಂತವಾಗಿ ಚೆನ್ನೂರು ಅರಣ್ಯ ಶಿಬಿರದ ಕಚೇರಿಯಲ್ಲಿ ಬಂಧಿಸಿಟ್ಟು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯರನ್ನು ಎರಡು ಗಂಟೆಗಳ ಕಾಲ ಕ್ಯಾಂಪ್ ಕಚೇರಿಯಲ್ಲಿ ಬೀಗ ಹಾಕಲಾಗಿದ್ದು, ಇದನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ ಕೂಡಾ ನಡೆಸಲಾಗಿದೆ ಎಂದು ವರದಿಯಾಗಿದೆ. 25 ವರ್ಷಕ್ಕೂ ಹೆಚ್ಚು ಕಾಲ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದು, ಸರಕಾರಿ ಜಮೀನಿನಲ್ಲಿ ಮರ ಕಡಿಯುತ್ತೇವೆ ಎಂದು ಅರಣ್ಯಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಲವು ಮಹಿಳೆಯರು ಪೋಡು ಜಮೀನುಗಳಲ್ಲಿ ಅರಣ್ಯ ಇಲಾಖೆ ನೆಟ್ಟಿದ್ದ ಮರಗಳನ್ನು ಕಡಿದಿದ್ದು, ಇದಕ್ಕಾಗಿ ಮಹಿಳೆಯರನ್ನು ಕಚೇರಿಯೊಳಗೆ ಹಾಕಿ ಬೀಗ ಹಾಕಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ತಮ್ಮ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ, ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದಾಗಿ ಸಂಜೆ ವೇಳೆಗೆ ಮಹಿಳೆಯರನ್ನು ಬಿಡುಗಡೆ ಮಾಡಲಾಯಿತು ಎಂದು ವರದಿ ಉಲ್ಲೇಖಿಸಿವೆ.

ಇದನ್ನೂ ಓದಿ: “ಆದಿವಾಸಿಗಳ ಬದುಕನ್ನು ಅಧ್ಯಯನ ಮಾಡುತ್ತಾ ದಲಿತಳಾದ ನನ್ನ ಬದುಕಿನ ಜೊತೆಗೂ ಸಮೀಕರಿಸಿಕೊಳ್ಳಲು ಸಾಧ್ಯವಾಯ್ತು”: ಕೆ.ಪಿ ಅಶ್ವಿನಿ

ಘಟನೆಯನ್ನು ವಿರೋಧಿಸಿ ಗ್ರಾಮಸ್ಥರು ಅರಣ್ಯ ಕ್ಯಾಂಪ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ತಾವು ಸಾಗುವಳಿ ಮಾಡುತ್ತಿರುವ ಜಮೀನಿನ ದಾಖಲೆಗಳನ್ನು ನೀಡಬೇಕು ಎಂದು ಚೆನ್ನೂರು ಶಾಸಕ ಬಾಲ್ಕ ಸುಮನ್ ಅವರಿಗೆ ಒತ್ತಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆದಿವಾಸಿಗಳು ಎಚ್ಚರಿಸಿದ್ದಾರೆ.

ಪೋಡು ಎಂಬುದು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳು ಶತಮಾನಗಳಿಂದ ಮಾಡಲ್ಪಡುವ ಒಂದು ಸಾಂಪ್ರದಾಯಿಕ ಕೃಷಿ ಅಥವಾ ಪಾಳಿ ಕೃಷಿಯ ಒಂದು ಸಾಂಪ್ರದಾಯಿಕ ರೂಪವಾಗಿದೆ. ಅದಿಲಾಬಾದ್, ಮಂಚೇರಿಯಲ್, ಮಹಬೂಬ್‌ನಗರ ಮತ್ತು ಖಮ್ಮಂ ಜಿಲ್ಲೆಗಳ ಅರಣ್ಯ ಪ್ರದೇಶದ ಗಡಿಯಲ್ಲಿ ವಾಸಿಸುವ ನಿವಾಸಿಗಳು ಪೋಡು ಭೂಮಿಯನ್ನು ಸಾಗುವಳಿ ಮಾಡುತ್ತಿದೆ.

ಪೋಡು ಭೂಮಿಯಲ್ಲಿ ಸಾಗುವಳಿ ಹಕ್ಕು ಕೋರಿ ಸಾವಿರಾರು ಅರ್ಜಿಗಳು ವಿವಿಧ ಹಂತಗಳಲ್ಲಿ ಬಾಕಿ ಇವೆ. ಈ ಭೂಮಿಯನ್ನು ಅರಣ್ಯ ಇಲಾಖೆಯು ಸರ್ಕಾರಿ ಭೂಮಿ ಎಂದು ಹೇಳಿಕೊಂಡಿದೆ. ಪೋಡು ಭೂಮಿ ಹಕ್ಕು ವಿಚಾರವಾಗಿ ಅಧಿಕಾರಿಗಳು ಹಾಗೂ ಆದಿವಾಸಿಗಳ ನಡುವೆ ಹಲವು ವರ್ಷಗಳಿಂದ ಜಟಾಪಟಿ ನಡೆಯುತ್ತಲೇ ಇದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ನವೆಂಬರ್ 2021 ರಲ್ಲಿ, ತೆಲಂಗಾಣ ಸರ್ಕಾರವು ಅರ್ಹ ಹಕ್ಕುದಾರರಿಗೆ ಭೂಮಿಯ ಹಕ್ಕು ಪತ್ರಗಳನ್ನು ನೀಡುವುದಾಗಿ ಘೋಷಿಸಿತು, ಆದರೆ ಅದನ್ನು ಅದೇ ವರ್ಷ ಡಿಸೆಂಬರ್‌ನಲ್ಲಿ ಥಟ್ಟನೆ ನಿಲ್ಲಿಸಲಾಯಿತು. ಈ ವರ್ಷ ಜುಲೈ 7 ರಂದು ಮಂಚೇರಿಯಲ್ ಜಿಲ್ಲೆಯ ದಂಡೆಪಲ್ಲಿ ಮಂಡಲದ ಕೊಯಪೋಶಗುಡೆಂ ಗ್ರಾಮದಲ್ಲಿ ಅರಣ್ಯ ಇಲಾಖೆ ನೌಕರರು ವಿವಾದಿತ ಅರಣ್ಯ ಭೂಮಿಯಲ್ಲಿ ರೈತರು ನಿರ್ಮಿಸಿದ್ದ ಗುಡಿಸಲುಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದರು. ಇದನ್ನು ರೈತರು ವಿರೋಧಿಸಿದಾಗ ಅರಣ್ಯಾಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...