Homeರಾಷ್ಟ್ರೀಯತೆಲಂಗಾಣ | ಮರ ಕಡಿದ ಆರೋಪ: ಆದಿವಾಸಿ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಅರಣ್ಯಾಧಿಕಾರಿ

ತೆಲಂಗಾಣ | ಮರ ಕಡಿದ ಆರೋಪ: ಆದಿವಾಸಿ ಮಹಿಳೆಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಅರಣ್ಯಾಧಿಕಾರಿ

- Advertisement -
- Advertisement -

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಚೆನ್ನೂರು ಮಂಡಲದ ಶಿವಲಿಂಗಪುರ ಮತ್ತು ಅಕ್ಕೆಪಲ್ಲಿ ಗ್ರಾಮದ ಮಹಿಳೆಯರು ಕಾಡಿನಲ್ಲಿ ಮರಗಳನ್ನು ಕಡಿದಿದ್ದಾರೆ ಎಂದು ಆರೋಪಿಸಿ ಶನಿವಾರದಂದು ಅರಣ್ಯಾಧಿಕಾರಿಗಳು  ಐವರು ಆದಿವಾಸಿ ಮಹಿಳೆಯರನ್ನು ಬಲವಂತವಾಗಿ ಚೆನ್ನೂರು ಅರಣ್ಯ ಶಿಬಿರದ ಕಚೇರಿಯಲ್ಲಿ ಬಂಧಿಸಿಟ್ಟು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯರನ್ನು ಎರಡು ಗಂಟೆಗಳ ಕಾಲ ಕ್ಯಾಂಪ್ ಕಚೇರಿಯಲ್ಲಿ ಬೀಗ ಹಾಕಲಾಗಿದ್ದು, ಇದನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ ಕೂಡಾ ನಡೆಸಲಾಗಿದೆ ಎಂದು ವರದಿಯಾಗಿದೆ. 25 ವರ್ಷಕ್ಕೂ ಹೆಚ್ಚು ಕಾಲ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದು, ಸರಕಾರಿ ಜಮೀನಿನಲ್ಲಿ ಮರ ಕಡಿಯುತ್ತೇವೆ ಎಂದು ಅರಣ್ಯಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಲವು ಮಹಿಳೆಯರು ಪೋಡು ಜಮೀನುಗಳಲ್ಲಿ ಅರಣ್ಯ ಇಲಾಖೆ ನೆಟ್ಟಿದ್ದ ಮರಗಳನ್ನು ಕಡಿದಿದ್ದು, ಇದಕ್ಕಾಗಿ ಮಹಿಳೆಯರನ್ನು ಕಚೇರಿಯೊಳಗೆ ಹಾಕಿ ಬೀಗ ಹಾಕಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ತಮ್ಮ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ಪ್ರಶ್ನಿಸಿದ್ದಕ್ಕೆ, ಅಧಿಕಾರಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಮೋಕ್ಷ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದಾಗಿ ಸಂಜೆ ವೇಳೆಗೆ ಮಹಿಳೆಯರನ್ನು ಬಿಡುಗಡೆ ಮಾಡಲಾಯಿತು ಎಂದು ವರದಿ ಉಲ್ಲೇಖಿಸಿವೆ.

ಇದನ್ನೂ ಓದಿ: “ಆದಿವಾಸಿಗಳ ಬದುಕನ್ನು ಅಧ್ಯಯನ ಮಾಡುತ್ತಾ ದಲಿತಳಾದ ನನ್ನ ಬದುಕಿನ ಜೊತೆಗೂ ಸಮೀಕರಿಸಿಕೊಳ್ಳಲು ಸಾಧ್ಯವಾಯ್ತು”: ಕೆ.ಪಿ ಅಶ್ವಿನಿ

ಘಟನೆಯನ್ನು ವಿರೋಧಿಸಿ ಗ್ರಾಮಸ್ಥರು ಅರಣ್ಯ ಕ್ಯಾಂಪ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, ತಾವು ಸಾಗುವಳಿ ಮಾಡುತ್ತಿರುವ ಜಮೀನಿನ ದಾಖಲೆಗಳನ್ನು ನೀಡಬೇಕು ಎಂದು ಚೆನ್ನೂರು ಶಾಸಕ ಬಾಲ್ಕ ಸುಮನ್ ಅವರಿಗೆ ಒತ್ತಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಆದಿವಾಸಿಗಳು ಎಚ್ಚರಿಸಿದ್ದಾರೆ.

ಪೋಡು ಎಂಬುದು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳು ಶತಮಾನಗಳಿಂದ ಮಾಡಲ್ಪಡುವ ಒಂದು ಸಾಂಪ್ರದಾಯಿಕ ಕೃಷಿ ಅಥವಾ ಪಾಳಿ ಕೃಷಿಯ ಒಂದು ಸಾಂಪ್ರದಾಯಿಕ ರೂಪವಾಗಿದೆ. ಅದಿಲಾಬಾದ್, ಮಂಚೇರಿಯಲ್, ಮಹಬೂಬ್‌ನಗರ ಮತ್ತು ಖಮ್ಮಂ ಜಿಲ್ಲೆಗಳ ಅರಣ್ಯ ಪ್ರದೇಶದ ಗಡಿಯಲ್ಲಿ ವಾಸಿಸುವ ನಿವಾಸಿಗಳು ಪೋಡು ಭೂಮಿಯನ್ನು ಸಾಗುವಳಿ ಮಾಡುತ್ತಿದೆ.

ಪೋಡು ಭೂಮಿಯಲ್ಲಿ ಸಾಗುವಳಿ ಹಕ್ಕು ಕೋರಿ ಸಾವಿರಾರು ಅರ್ಜಿಗಳು ವಿವಿಧ ಹಂತಗಳಲ್ಲಿ ಬಾಕಿ ಇವೆ. ಈ ಭೂಮಿಯನ್ನು ಅರಣ್ಯ ಇಲಾಖೆಯು ಸರ್ಕಾರಿ ಭೂಮಿ ಎಂದು ಹೇಳಿಕೊಂಡಿದೆ. ಪೋಡು ಭೂಮಿ ಹಕ್ಕು ವಿಚಾರವಾಗಿ ಅಧಿಕಾರಿಗಳು ಹಾಗೂ ಆದಿವಾಸಿಗಳ ನಡುವೆ ಹಲವು ವರ್ಷಗಳಿಂದ ಜಟಾಪಟಿ ನಡೆಯುತ್ತಲೇ ಇದೆ.

ಇದನ್ನೂ ಓದಿ: ದೇಶದ ಯಾವುದೇ ಮುಖ್ಯವಾಹಿನಿ ಮಾಧ್ಯಮದಲ್ಲಿ ದಲಿತ, ಆದಿವಾಸಿ, ಒಬಿಸಿ ಮುಖ್ಯಸ್ಥರಿಲ್ಲ: ವರದಿ

ನವೆಂಬರ್ 2021 ರಲ್ಲಿ, ತೆಲಂಗಾಣ ಸರ್ಕಾರವು ಅರ್ಹ ಹಕ್ಕುದಾರರಿಗೆ ಭೂಮಿಯ ಹಕ್ಕು ಪತ್ರಗಳನ್ನು ನೀಡುವುದಾಗಿ ಘೋಷಿಸಿತು, ಆದರೆ ಅದನ್ನು ಅದೇ ವರ್ಷ ಡಿಸೆಂಬರ್‌ನಲ್ಲಿ ಥಟ್ಟನೆ ನಿಲ್ಲಿಸಲಾಯಿತು. ಈ ವರ್ಷ ಜುಲೈ 7 ರಂದು ಮಂಚೇರಿಯಲ್ ಜಿಲ್ಲೆಯ ದಂಡೆಪಲ್ಲಿ ಮಂಡಲದ ಕೊಯಪೋಶಗುಡೆಂ ಗ್ರಾಮದಲ್ಲಿ ಅರಣ್ಯ ಇಲಾಖೆ ನೌಕರರು ವಿವಾದಿತ ಅರಣ್ಯ ಭೂಮಿಯಲ್ಲಿ ರೈತರು ನಿರ್ಮಿಸಿದ್ದ ಗುಡಿಸಲುಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದರು. ಇದನ್ನು ರೈತರು ವಿರೋಧಿಸಿದಾಗ ಅರಣ್ಯಾಧಿಕಾರಿಗಳು ಅವರನ್ನು ವಶಕ್ಕೆ ಪಡೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...