HomeಮುಖಪುಟIT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

IT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

- Advertisement -
- Advertisement -

ಚುನಾವಣಾ ಆಯೋಗಕ್ಕೆ ಎಸ್‌ಬಿಐ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈ ಮಾಹಿತಿ ಪ್ರಕಾರ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ 6 ತಿಂಗಳ ನಂತರ 30 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಸುದ್ದಿಯಲ್ಲಿತ್ತು.  ಉತ್ತರಾಖಂಡದ ಸಿಲ್ಕ್ಯಾರಾ-ಬರ್ಕೋಟ್ ಸುರಂಗದೊಳಗೆ 41 ಕಾರ್ಮಿಕರು 17 ದಿನಗಳ ಕಾಲ ಸಿಕ್ಕಿಬಿದ್ದಿದ್ದರು. ಈ ಸುರಂಗದ ಕಾಮಗಾರಿಯನ್ನು ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ವಹಿಸಿಕೊಂಡಿತ್ತು.

ಒಟ್ಟಾರೆಯಾಗಿ, ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೂರು ವರ್ಷಗಳ ಅವಧಿಯಲ್ಲಿ 55 ಕೋಟಿ ರೂ.ವರೆಗಿನ ಬಾಂಡ್‌ಗಳನ್ನು ಖರೀದಿಸಿದೆ ಎಂದು ಮಾರ್ಚ್ 14ರಂದು ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ದಾಖಲೆಗಳಲ್ಲಿ ಬಹಿರಂಗವಾಗಿದೆ. ನವಯುಗ ಇಂಜಿನಿಯರಿಂಗ್ ಕಂಪೆನಿ ಲಿಮಿಟೆಡ್ ವಿಶಾಖಪಟ್ಟಣಂನಲ್ಲಿ ಸ್ಥಾಪನೆಯಾಗಿದ್ದು, ಹೈದರಾಬಾದ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ನವಯುಗವು ಐಟಿ ಇಲಾಖೆ ತನ್ನ ಕಚೇರಿಗಳ ಮೇಲೆ ದಾಳಿ ನಡೆಸಿದ ಆರು ತಿಂಗಳ ನಂತರ, ಏಪ್ರಿಲ್ 18, 2019ರಂದು ತಲಾ ರೂ 1 ಕೋಟಿ ಮುಖಬೆಲೆಯ 30 ಬಾಂಡ್‌ಗಳನ್ನು ಖರೀದಿಸಿದೆ.

ತೆರಿಗೆ ಉಲ್ಲಂಘನೆ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ 2018ರ ಅಕ್ಟೋಬರ್‌ನಲ್ಲಿ ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿರುವ ನವಯುಗ ಕಚೇರಿಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿತ್ತು. 2012ರಲ್ಲೂ ಕಂಪನಿ ಮೇಲೆ ದಾಳಿ ನಡೆಸಲಾಗಿತ್ತು. ಜುಲೈ 2018ರಲ್ಲಿ ‘ಕಂಪನಿಗಳ ರಿಜಿಸ್ಟ್ರಾರ್ ಅಧಿಕಾರಿಗಳು’ ಹೈದರಾಬಾದ್‌ನ ನವಯುಗದ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸುಮಾರು 47 ಸಂಸ್ಥೆಗಳು ಒಂದೇ ವಿಳಾಸದಲ್ಲಿ ನೋಂದಾಯಿಸಲ್ಪಟ್ಟಿರುವುದು ಬಯಲಾಗಿತ್ತು.

ನವಯುಗ ಅಕ್ಟೋಬರ್ 10, 2022ರಂದು ತಲಾ 1 ಕೋಟಿ ಮೌಲ್ಯದ 25 ಬಾಂಡ್‌ಗಳನ್ನು ಖರೀದಿಸಿದೆ. ತೆಲಂಗಾಣದ ಕಾಳೇಶ್ವರಂ ಲಿಫ್ಟ್ ನೀರಾವರಿ ಯೋಜನೆ ಮತ್ತು ಪೋಲಾವರಂ ಯೋಜನೆಯಲ್ಲಿ ಬ್ಯಾರೇಜ್ ನಿರ್ಮಾಣ ಸೇರಿದಂತೆ ದೇಶದಾದ್ಯಂತ ಕಂಪನಿಯು ಹಲವು ಸರ್ಕಾರಿ ಗುತ್ತಿಗೆಗಳನ್ನು ಪಡೆದುಕೊಂಡಿದೆ. ಸೆಪ್ಟೆಂಬರ್ 2019ರಲ್ಲಿ ಜಗನ್ ಮೋಹನ್ ರೆಡ್ಡಿ ಸರ್ಕಾರವು ನವಯುಗಕ್ಕೆ ನೀಡಿದ್ದ 3,200 ಕೋಟಿ ರೂಪಾಯಿಗಳ ಪೋಲವರಂ ಗುತ್ತಿಗೆಯನ್ನು ರದ್ದುಗೊಳಿಸಿದೆ. ನವಯುಗವು ಅಸ್ಸಾಂನಲ್ಲಿ ಬ್ರಹ್ಮಪುತ್ರಕ್ಕೆ ಅಡ್ಡಲಾಗಿ ಧೋಲಾ-ಸಾಡಿಯಾ ಸೇತುವೆಯನ್ನು ನಿರ್ಮಿಸುತ್ತಿದೆ, ಇದು ಭಾರತದ ಅತಿ ಉದ್ದದ ನದಿ ಸೇತುವೆ ಎಂದು ಹೇಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೇ 2017ರಲ್ಲಿ ಸೇತುವೆಯನ್ನು ಉದ್ಘಾಟಿಸಿದ್ದರು.

ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹತ್ವದ ವಿಷಯಗಳು ಬಹಿರಂಗಗೊಂಡಿತ್ತು. ಕೋಟ್ಯಾಂತರ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಂಪೆನಿಗಳು, ಅದಕ್ಕೆ ಪ್ರತಿಯಾಗಿ ಲಾಭ ಪಡೆದಿರುವುದು ಬಯಲಾಗಿತ್ತು.

ಇದನ್ನು ಓದಿ: 4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...