HomeಮುಖಪುಟIT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

IT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

- Advertisement -
- Advertisement -

ಚುನಾವಣಾ ಆಯೋಗಕ್ಕೆ ಎಸ್‌ಬಿಐ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈ ಮಾಹಿತಿ ಪ್ರಕಾರ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ 6 ತಿಂಗಳ ನಂತರ 30 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಸುದ್ದಿಯಲ್ಲಿತ್ತು.  ಉತ್ತರಾಖಂಡದ ಸಿಲ್ಕ್ಯಾರಾ-ಬರ್ಕೋಟ್ ಸುರಂಗದೊಳಗೆ 41 ಕಾರ್ಮಿಕರು 17 ದಿನಗಳ ಕಾಲ ಸಿಕ್ಕಿಬಿದ್ದಿದ್ದರು. ಈ ಸುರಂಗದ ಕಾಮಗಾರಿಯನ್ನು ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ವಹಿಸಿಕೊಂಡಿತ್ತು.

ಒಟ್ಟಾರೆಯಾಗಿ, ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೂರು ವರ್ಷಗಳ ಅವಧಿಯಲ್ಲಿ 55 ಕೋಟಿ ರೂ.ವರೆಗಿನ ಬಾಂಡ್‌ಗಳನ್ನು ಖರೀದಿಸಿದೆ ಎಂದು ಮಾರ್ಚ್ 14ರಂದು ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ದಾಖಲೆಗಳಲ್ಲಿ ಬಹಿರಂಗವಾಗಿದೆ. ನವಯುಗ ಇಂಜಿನಿಯರಿಂಗ್ ಕಂಪೆನಿ ಲಿಮಿಟೆಡ್ ವಿಶಾಖಪಟ್ಟಣಂನಲ್ಲಿ ಸ್ಥಾಪನೆಯಾಗಿದ್ದು, ಹೈದರಾಬಾದ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ನವಯುಗವು ಐಟಿ ಇಲಾಖೆ ತನ್ನ ಕಚೇರಿಗಳ ಮೇಲೆ ದಾಳಿ ನಡೆಸಿದ ಆರು ತಿಂಗಳ ನಂತರ, ಏಪ್ರಿಲ್ 18, 2019ರಂದು ತಲಾ ರೂ 1 ಕೋಟಿ ಮುಖಬೆಲೆಯ 30 ಬಾಂಡ್‌ಗಳನ್ನು ಖರೀದಿಸಿದೆ.

ತೆರಿಗೆ ಉಲ್ಲಂಘನೆ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ 2018ರ ಅಕ್ಟೋಬರ್‌ನಲ್ಲಿ ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿರುವ ನವಯುಗ ಕಚೇರಿಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿತ್ತು. 2012ರಲ್ಲೂ ಕಂಪನಿ ಮೇಲೆ ದಾಳಿ ನಡೆಸಲಾಗಿತ್ತು. ಜುಲೈ 2018ರಲ್ಲಿ ‘ಕಂಪನಿಗಳ ರಿಜಿಸ್ಟ್ರಾರ್ ಅಧಿಕಾರಿಗಳು’ ಹೈದರಾಬಾದ್‌ನ ನವಯುಗದ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸುಮಾರು 47 ಸಂಸ್ಥೆಗಳು ಒಂದೇ ವಿಳಾಸದಲ್ಲಿ ನೋಂದಾಯಿಸಲ್ಪಟ್ಟಿರುವುದು ಬಯಲಾಗಿತ್ತು.

ನವಯುಗ ಅಕ್ಟೋಬರ್ 10, 2022ರಂದು ತಲಾ 1 ಕೋಟಿ ಮೌಲ್ಯದ 25 ಬಾಂಡ್‌ಗಳನ್ನು ಖರೀದಿಸಿದೆ. ತೆಲಂಗಾಣದ ಕಾಳೇಶ್ವರಂ ಲಿಫ್ಟ್ ನೀರಾವರಿ ಯೋಜನೆ ಮತ್ತು ಪೋಲಾವರಂ ಯೋಜನೆಯಲ್ಲಿ ಬ್ಯಾರೇಜ್ ನಿರ್ಮಾಣ ಸೇರಿದಂತೆ ದೇಶದಾದ್ಯಂತ ಕಂಪನಿಯು ಹಲವು ಸರ್ಕಾರಿ ಗುತ್ತಿಗೆಗಳನ್ನು ಪಡೆದುಕೊಂಡಿದೆ. ಸೆಪ್ಟೆಂಬರ್ 2019ರಲ್ಲಿ ಜಗನ್ ಮೋಹನ್ ರೆಡ್ಡಿ ಸರ್ಕಾರವು ನವಯುಗಕ್ಕೆ ನೀಡಿದ್ದ 3,200 ಕೋಟಿ ರೂಪಾಯಿಗಳ ಪೋಲವರಂ ಗುತ್ತಿಗೆಯನ್ನು ರದ್ದುಗೊಳಿಸಿದೆ. ನವಯುಗವು ಅಸ್ಸಾಂನಲ್ಲಿ ಬ್ರಹ್ಮಪುತ್ರಕ್ಕೆ ಅಡ್ಡಲಾಗಿ ಧೋಲಾ-ಸಾಡಿಯಾ ಸೇತುವೆಯನ್ನು ನಿರ್ಮಿಸುತ್ತಿದೆ, ಇದು ಭಾರತದ ಅತಿ ಉದ್ದದ ನದಿ ಸೇತುವೆ ಎಂದು ಹೇಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೇ 2017ರಲ್ಲಿ ಸೇತುವೆಯನ್ನು ಉದ್ಘಾಟಿಸಿದ್ದರು.

ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹತ್ವದ ವಿಷಯಗಳು ಬಹಿರಂಗಗೊಂಡಿತ್ತು. ಕೋಟ್ಯಾಂತರ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಂಪೆನಿಗಳು, ಅದಕ್ಕೆ ಪ್ರತಿಯಾಗಿ ಲಾಭ ಪಡೆದಿರುವುದು ಬಯಲಾಗಿತ್ತು.

ಇದನ್ನು ಓದಿ: 4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...