Homeಮುಖಪುಟತೆಲಂಗಾಣ: ಜಾತಿ ವಿರೋಧಿ ಹೋರಾಟಗಾರ ನರೇಶ್ ಮೇಲೆ ಆರ್‌ಎಸ್‌ಎಸ್ ಗೂಂಡಾಗಳಿಂದ ಹಲ್ಲೆ

ತೆಲಂಗಾಣ: ಜಾತಿ ವಿರೋಧಿ ಹೋರಾಟಗಾರ ನರೇಶ್ ಮೇಲೆ ಆರ್‌ಎಸ್‌ಎಸ್ ಗೂಂಡಾಗಳಿಂದ ಹಲ್ಲೆ

- Advertisement -
- Advertisement -

ನಾಸ್ತಿಕ ಸಂಘಟನೆ ”ಭಾರತ ನಾಸ್ತಿಕ ಸಮಾಜ”ದ ಬೈರಿ ನರೇಶ್, ಅವರ ಮೇಲೆ ಹಿಂದು ಸಂಘಟನೆಯ ಗುಂಪೊಂದು ಹಲ್ಲೆ ನಡೆಸಿದ ಘಟನೆ ಸೋಮವಾರ ತೆಲಂಗಾಣದ ಹನಮಕೊಂಡ ಜಿಲ್ಲೆಯಲ್ಲಿ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾತಿ ವಿರೋಧಿ ಹೋರಾಟಗಾರ ಮತ್ತು ನಾಸ್ತಿಕ ಸಂಘಟನೆಯ ತೆಲಂಗಾಣ ಘಟಕದ ಮುಖ್ಯಸ್ಥ ನರೇಶ್ ಅವರು ಹಿಂದೂ ದೇವರಾದ ಅಯಪ್ಪನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಳೆದ ವರ್ಷ ಅವರನ್ನು ಬಂಧಿಸಲಾಗಿತ್ತು. ಸದ್ಯ ನರೇಶ್ ಜಾಮೀನಿನ ಮೇಲೆ ಹೊರಗಿದ್ದಾರೆ.

ಜಾತಿ ವಿರೋಧಿ ಹೋರಾಟಗಾರ ಮತ್ತು ನಾಸ್ತಿಕ ಸಂಘಟನೆಯ ತೆಲಂಗಾಣ ಘಟಕದ ಮುಖ್ಯಸ್ಥ ನರೇಶ್

ಅವರು ಹನಮಕೊಂಡ ಜಿಲ್ಲೆಯ ಗೋಪಾಲಪುರಂನಲ್ಲಿರುವ ಕಾನೂನು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರ ಮೇಲೆ ಗುಂಪೊಂದು ಹಲ್ಲೆ ನಡೆಸಬಹುದು ಎನ್ನುವ ಬಗ್ಗೆ ನನಗೆ ಮಾಹಿತಿ ಬಂದಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.

”ನನ್ನ ಹಿತೈಷಿಯೊಬ್ಬರು ನನ್ನನ್ನು ಸಂಪರ್ಕಿಸಿದರು ಮತ್ತು ಹೊರಗೆ ಕೆಲವು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಇದ್ದಾರೆ ಎಂದು ಹೇಳಿದರು” ಎಂದು ನರೇಶ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.

”ನನ್ನ ಮೇಲೆ ದಾಳಿ ನಡೆಯುತ್ತದೆ ಎಂಬುದು ಗೊತ್ತಾದಾಗ, ನಾನು ಭಯದಿಂದ ಪೊಲೀಸರನ್ನು ಸಂಪರ್ಕಿಸಿದೆ. ಪೊಲೀಸರು ನನಗೆ ರಕ್ಷಣೆ ನೀಡಿದರು ಮತ್ತು ಸುರಕ್ಷಿತವಾಗಿ ಅವರು ನನ್ನನ್ನು ಅಲ್ಲಿಂದ ಕರೆದೊಯ್ಯಲು ವಾಹನದ ವ್ಯವಸ್ಥೆ ಕೂಡ ಮಾಡಿದರು. ಆದರೆ ಮಾರ್ಗಮಧ್ಯೆ, ದಾಳಿಕೋರರು ಪೊಲೀಸ್ ವಾಹನವನ್ನು ನಿಲ್ಲಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢ: ಮದುವೆಗೆ ಒಪ್ಪದ ಅಪ್ರಾಪ್ತೆಯ ಕೂದಲಿಡಿದು ಎಳೆದಾಡಿ, ನಡುರಸ್ತೆಯಲ್ಲಿ ಹಲ್ಲೆ

ದಾಳಿ ನಡೆಸಿರುವ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂದ್ದು, ಪೊಲೀಸರು ಅವರನ್ನು ಎಳೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದರೂ ಸಹ ಆ ಗುಂಪು ಪೊಲೀಸ್ ವ್ಯಾನ್‌ನ ಒಳಗೆ ನುಗ್ಗಿ ನರೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ವೀಡಿಯೊದಲ್ಲಿ ಕಂಡುಬರುವ ಎಲ್ಲಾ ದಾಳಿಕೋರರನ್ನು ಬಂಧಿಸಲಾಗಿದೆ ಎಂದು ವಾರಂಗಲ್ ಪೊಲೀಸ್ ಕಮಿಷನರ್ ಎವಿ ರಂಗನಾಥ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಒಬಿಸಿ ಸಮುದಾಯಕ್ಕೆ ಸೇರಿದ ನರೇಶ್ ಅವರು, ಡಿಸೆಂಬರ್‌ನಲ್ಲಿ ವಿಕಾರಾಬಾದ್ ಜಿಲ್ಲೆಯ ಸಾರ್ವಜನಿಕ ಸಭೆಯೊಂದರಲ್ಲಿ ಮಾಡಿದ ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿತ್ತು. ನಂತರ ಆ ಭಾಷಣದಿಂದ ಹಿಂದುತ್ವವಾದಿಗಳು ಉದ್ವಿಗ್ನಗೊಳ್ಳುವಂತೆ ಮಾಡಿತ್ತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ನರೇಶ್ ತಮ್ಮ ಭಾಷಣದಲ್ಲಿ ಅಯ್ಯಪ್ಪನ ಜನ್ಮವನ್ನು ಲೈಂಗಿಕವಾಗಿ ಅಸ್ಪಷ್ಟ ರೀತಿಯಲ್ಲಿ ವಿವರಿಸಿದ್ದರು. ಆಗ ನರೇಶ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯದ ಹಲವು ಕಡೆ ಹಿಂದೂ ಭಕ್ತರು ಪ್ರತಿಭಟನೆ ನಡೆಸಿದರು. ಡಿಸೆಂಬರ್ 31 ರಂದು, ಪೊಲೀಸರು ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ನಂಬಿಕೆಗಳನ್ನು ಅತಿರೇಕಗೊಳಿಸುವುದು ಮತ್ತು ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿರು. ನಂತರ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರು ಜಾಮೀನಿನದ ಮೇಲೆ ಹೊರಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...