HomeUncategorizedತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ ನಿಧನ

ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ ನಿಧನ

- Advertisement -
- Advertisement -

ತೆಲಂಗಾಣ ಸಶಸ್ತ್ರ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯ ಕಮ್ಯುನಿಸ್ಟ್ ನಾಯಕಿ ಮಲ್ಲು ಸ್ವರಾಜ್ಯಂ ಅವರು ಮಾರ್ಚ್ 19ರ ಶನಿವಾರದಂದು ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿದೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ಆಂಧ್ರ ಪ್ರದೇಶ ವಿಧಾನಸಭೆಯ ಮಾಜಿ ಸದಸ್ಯೆಯೂ ಆಗಿರುವ ಅವರು ನ್ಯುಮೋನಿಯಾ ಚಿಕಿತ್ಸೆಗಾಗಿ ಮಾರ್ಚ್ 1 ರಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಮಲ್ಲು ಸ್ವರಾಜ್ಯಂ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿಯ ಸದಸ್ಯರಾಗಿದ್ದರು. ಕೊನೆಯವರೆಗೂ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದರು. 1931ರಲ್ಲಿ ಅವಿಭಜಿತ ನಲ್ಗೊಂಡ ಜಿಲ್ಲೆಯ ತುಂಗತಾರ್ತಿಯ ಕರಿವಿರಾಲ ಕೊತಗುಡೆಂ ಗ್ರಾಮದಲ್ಲಿ ಭೂಮಾಲಿಕ ಕುಟುಂಬದಲ್ಲಿ ಜನಿಸಿದ್ದ ಅವರು ತನ್ನ ಹದಿಹರೆಯದಲ್ಲಿ ಕಮ್ಯುನಿಸ್ಟ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅವರ ಸಹೋದರ ಭೀಮರೆಡ್ಡಿ ನರಸಿಂಹ ರೆಡ್ಡಿಯವರಿಂದ ಪ್ರೇರಿತರಾಗಿ ಸ್ವರಾಜ್ಯಂ ಅವರು 1946 ರಿಂದ 1951 ರವರೆಗೆ ತೆಲಂಗಾಣ ಜನರ ಸಶಸ್ತ್ರ ಹೋರಾಟದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

ಅವರು ಕ್ರಾಂತಿಕಾರಿ ಗೀತೆಗಳನ್ನು ಹಾಡುವ ಮೂಲಕ ಜನರನ್ನು ಹೋರಾಟಕ್ಕೆ ಸಜ್ಜುಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿಸುತ್ತಿದ್ದರು. ಶಸ್ತ್ರಾಸ್ತ್ರಗಳನ್ನು ಎತ್ತಿದ್ದ ಅವರು ಹೋರಾಟಗಳಲ್ಲಿ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸಶಸ್ತ್ರ ಹೋರಾಟದಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಮತ್ತೊಬ್ಬ ಪ್ರಸಿದ್ಧ ಕಾಂಗ್ರೆಸ್ ನಾಯಕ ಮಲ್ಲು ವೆಂಕಟ ನರಸಿಂಹ ರೆಡ್ಡಿ ಅವರನ್ನು ಸ್ವರಾಜ್ಯ ವಿವಾಹವಾಗಿದ್ದರು. ಸಿಪಿಐ(ಎಂ) ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ತುಂಗತುರ್ಥಿ ವಿಧಾನಸಭಾ ಕ್ಷೇತ್ರದಿಂದ ಸಂಯುಕ್ತ ಆಂಧ್ರಪ್ರದೇಶದ ವಿಧಾನಸಭೆಗೆ ಎರಡು 1978 ಮತ್ತು 1983ರಲ್ಲಿ ಚುನಾಯಿತರಾಗಿದ್ದರು.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಸ್ವರಾಜ್ಯಂ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಅವರು ಅಸಾಧಾರಣ ಕಮ್ಯುನಿಸ್ಟ್ ಕ್ರಾಂತಿಕಾರಿಯಾಗಿದ್ದಾರೆ. 1946 ರಿಂದ 1951 ರವರೆಗಿನ ತೆಲಂಗಾಣದ ಸಶಸ್ತ್ರ ಹೋರಾಟದಲ್ಲಿ ಹೈದರಾಬಾದಿನ ನಿಜಾಮನ ‘ರಜಾಕರ’, ನಿರ್ದಯ ಜಮೀನ್ದಾರರ ಕೂಲಿ ಸೈನಿಕರ ಖಾಸಗಿ ಸೈನ್ಯವನ್ನು ನಿರ್ಭಯವಾಗಿ ಎದುರಿಸಿ, ಅವರಿಗೆ ಸವಾಲು ಹಾಕುತ್ತಿದ್ದರು” ಅವರು ಹೇಳಿದ್ದಾರೆ.

ಸ್ವರಾಜ್ಯಂ ಅವರು ತಮ್ಮ ವೈಯಕ್ತಿಕ ಉದಾಹರಣೆ ಮತ್ತು ರೋಮಾಂಚನಕಾರಿ ಭಾಷಣಗಳ ಮೂಲಕ ಹೋರಾಟದಲ್ಲಿ ಭಾಗವಹಿಸಲು ಅನೇಕ ಮಹಿಳೆಯರಿಗೆ ಸ್ಫೂರ್ತಿ ನೀಡಿದರು. “ನಾವು ಸ್ಪೂರ್ತಿದಾಯಕ ಕ್ರಾಂತಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ಕ್ರಾಂತಿಕಾರಿ ಉದ್ದೇಶವನ್ನು ಮುನ್ನಡೆಸುತ್ತಾ ಜನರ ಸೇವೆಯಲ್ಲಿ 75 ವರ್ಷಗಳಿಗಿಂತ ಹೆಚ್ಚು ಕಾಲ ಕಳೆದರು” ಎಂದು ಯೆಚೂರಿ ಹೇಳಿದ್ದಾರೆ.

ಇದನ್ನೂ ಓದಿ: UDF ತೊರೆದು ಕಮ್ಯುನಿಷ್ಟ್ ಒಕ್ಕೂಟ ಸೇರಿದ ಕೇರಳ ಕಾಂಗ್ರೆಸ್ (ಎಂ)!

ಹೋರಾಟಗಾರ್ತಿಯ ಸಾವಿಗೆ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸಂತಾಪ ಸೂಚಿಸಿದ್ದು, ಅವರು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ಎಂದು ಹೇಳಿದ್ದಾರೆ.

“ಸ್ವರಾಜ್ಯಂ ತನ್ನ ಜೀವನದುದ್ದಕ್ಕೂ ಜನರಿಗಾಗಿ ಅವಿಶ್ರಾಂತವಾಗಿ ದುಡಿದಿದ್ದು ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ. ಸ್ವರಾಜ್ಯಂನಂತಹ ಮಹಿಳಾ ನಾಯಕಿಯನ್ನು ಕಳೆದುಕೊಂಡಿರುವುದು ತೆಲಂಗಾಣಕ್ಕೆ ದೊಡ್ಡ ನಷ್ಟವಾಗಿದೆ” ಎಂದು ಹೇಳಿರುವ ಸಿಎಂ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಸಚಿವ ಜಿ. ಕಿಶನ್ ರೆಡ್ಡಿ ಕೂಡ ಸಂತಾಪ ಸೂಚಿಸಿದ್ದಾರೆ. “ಇಂದು ಮಲ್ಲು ಸ್ವರಾಜ್ಯಂ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ‘ತೆಲಂಗಾಣದ ಉಕ್ಕಿನ ಮಹಿಳೆ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಅವರು, ರಜಾಕರ ವಿರುದ್ಧ ತೆಲಂಗಾಣದ ಜನರಿಗಾಗಿ ಅವರು ಮಾಡಿದ ಹೋರಾಟವು ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...