HomeUncategorizedತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ ನಿಧನ

ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ ನಿಧನ

- Advertisement -
- Advertisement -

ತೆಲಂಗಾಣ ಸಶಸ್ತ್ರ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯ ಕಮ್ಯುನಿಸ್ಟ್ ನಾಯಕಿ ಮಲ್ಲು ಸ್ವರಾಜ್ಯಂ ಅವರು ಮಾರ್ಚ್ 19ರ ಶನಿವಾರದಂದು ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿದೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ಆಂಧ್ರ ಪ್ರದೇಶ ವಿಧಾನಸಭೆಯ ಮಾಜಿ ಸದಸ್ಯೆಯೂ ಆಗಿರುವ ಅವರು ನ್ಯುಮೋನಿಯಾ ಚಿಕಿತ್ಸೆಗಾಗಿ ಮಾರ್ಚ್ 1 ರಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಮಲ್ಲು ಸ್ವರಾಜ್ಯಂ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿಯ ಸದಸ್ಯರಾಗಿದ್ದರು. ಕೊನೆಯವರೆಗೂ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದರು. 1931ರಲ್ಲಿ ಅವಿಭಜಿತ ನಲ್ಗೊಂಡ ಜಿಲ್ಲೆಯ ತುಂಗತಾರ್ತಿಯ ಕರಿವಿರಾಲ ಕೊತಗುಡೆಂ ಗ್ರಾಮದಲ್ಲಿ ಭೂಮಾಲಿಕ ಕುಟುಂಬದಲ್ಲಿ ಜನಿಸಿದ್ದ ಅವರು ತನ್ನ ಹದಿಹರೆಯದಲ್ಲಿ ಕಮ್ಯುನಿಸ್ಟ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅವರ ಸಹೋದರ ಭೀಮರೆಡ್ಡಿ ನರಸಿಂಹ ರೆಡ್ಡಿಯವರಿಂದ ಪ್ರೇರಿತರಾಗಿ ಸ್ವರಾಜ್ಯಂ ಅವರು 1946 ರಿಂದ 1951 ರವರೆಗೆ ತೆಲಂಗಾಣ ಜನರ ಸಶಸ್ತ್ರ ಹೋರಾಟದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

ಅವರು ಕ್ರಾಂತಿಕಾರಿ ಗೀತೆಗಳನ್ನು ಹಾಡುವ ಮೂಲಕ ಜನರನ್ನು ಹೋರಾಟಕ್ಕೆ ಸಜ್ಜುಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿಸುತ್ತಿದ್ದರು. ಶಸ್ತ್ರಾಸ್ತ್ರಗಳನ್ನು ಎತ್ತಿದ್ದ ಅವರು ಹೋರಾಟಗಳಲ್ಲಿ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸಶಸ್ತ್ರ ಹೋರಾಟದಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಮತ್ತೊಬ್ಬ ಪ್ರಸಿದ್ಧ ಕಾಂಗ್ರೆಸ್ ನಾಯಕ ಮಲ್ಲು ವೆಂಕಟ ನರಸಿಂಹ ರೆಡ್ಡಿ ಅವರನ್ನು ಸ್ವರಾಜ್ಯ ವಿವಾಹವಾಗಿದ್ದರು. ಸಿಪಿಐ(ಎಂ) ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ತುಂಗತುರ್ಥಿ ವಿಧಾನಸಭಾ ಕ್ಷೇತ್ರದಿಂದ ಸಂಯುಕ್ತ ಆಂಧ್ರಪ್ರದೇಶದ ವಿಧಾನಸಭೆಗೆ ಎರಡು 1978 ಮತ್ತು 1983ರಲ್ಲಿ ಚುನಾಯಿತರಾಗಿದ್ದರು.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಸ್ವರಾಜ್ಯಂ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಅವರು ಅಸಾಧಾರಣ ಕಮ್ಯುನಿಸ್ಟ್ ಕ್ರಾಂತಿಕಾರಿಯಾಗಿದ್ದಾರೆ. 1946 ರಿಂದ 1951 ರವರೆಗಿನ ತೆಲಂಗಾಣದ ಸಶಸ್ತ್ರ ಹೋರಾಟದಲ್ಲಿ ಹೈದರಾಬಾದಿನ ನಿಜಾಮನ ‘ರಜಾಕರ’, ನಿರ್ದಯ ಜಮೀನ್ದಾರರ ಕೂಲಿ ಸೈನಿಕರ ಖಾಸಗಿ ಸೈನ್ಯವನ್ನು ನಿರ್ಭಯವಾಗಿ ಎದುರಿಸಿ, ಅವರಿಗೆ ಸವಾಲು ಹಾಕುತ್ತಿದ್ದರು” ಅವರು ಹೇಳಿದ್ದಾರೆ.

ಸ್ವರಾಜ್ಯಂ ಅವರು ತಮ್ಮ ವೈಯಕ್ತಿಕ ಉದಾಹರಣೆ ಮತ್ತು ರೋಮಾಂಚನಕಾರಿ ಭಾಷಣಗಳ ಮೂಲಕ ಹೋರಾಟದಲ್ಲಿ ಭಾಗವಹಿಸಲು ಅನೇಕ ಮಹಿಳೆಯರಿಗೆ ಸ್ಫೂರ್ತಿ ನೀಡಿದರು. “ನಾವು ಸ್ಪೂರ್ತಿದಾಯಕ ಕ್ರಾಂತಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ಕ್ರಾಂತಿಕಾರಿ ಉದ್ದೇಶವನ್ನು ಮುನ್ನಡೆಸುತ್ತಾ ಜನರ ಸೇವೆಯಲ್ಲಿ 75 ವರ್ಷಗಳಿಗಿಂತ ಹೆಚ್ಚು ಕಾಲ ಕಳೆದರು” ಎಂದು ಯೆಚೂರಿ ಹೇಳಿದ್ದಾರೆ.

ಇದನ್ನೂ ಓದಿ: UDF ತೊರೆದು ಕಮ್ಯುನಿಷ್ಟ್ ಒಕ್ಕೂಟ ಸೇರಿದ ಕೇರಳ ಕಾಂಗ್ರೆಸ್ (ಎಂ)!

ಹೋರಾಟಗಾರ್ತಿಯ ಸಾವಿಗೆ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸಂತಾಪ ಸೂಚಿಸಿದ್ದು, ಅವರು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ಎಂದು ಹೇಳಿದ್ದಾರೆ.

“ಸ್ವರಾಜ್ಯಂ ತನ್ನ ಜೀವನದುದ್ದಕ್ಕೂ ಜನರಿಗಾಗಿ ಅವಿಶ್ರಾಂತವಾಗಿ ದುಡಿದಿದ್ದು ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ. ಸ್ವರಾಜ್ಯಂನಂತಹ ಮಹಿಳಾ ನಾಯಕಿಯನ್ನು ಕಳೆದುಕೊಂಡಿರುವುದು ತೆಲಂಗಾಣಕ್ಕೆ ದೊಡ್ಡ ನಷ್ಟವಾಗಿದೆ” ಎಂದು ಹೇಳಿರುವ ಸಿಎಂ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಸಚಿವ ಜಿ. ಕಿಶನ್ ರೆಡ್ಡಿ ಕೂಡ ಸಂತಾಪ ಸೂಚಿಸಿದ್ದಾರೆ. “ಇಂದು ಮಲ್ಲು ಸ್ವರಾಜ್ಯಂ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ‘ತೆಲಂಗಾಣದ ಉಕ್ಕಿನ ಮಹಿಳೆ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಅವರು, ರಜಾಕರ ವಿರುದ್ಧ ತೆಲಂಗಾಣದ ಜನರಿಗಾಗಿ ಅವರು ಮಾಡಿದ ಹೋರಾಟವು ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...