HomeUncategorizedತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ ನಿಧನ

ತೆಲಂಗಾಣ ಸಶಸ್ತ್ರ ಹೋರಾಟದ ಕಮಾಂಡರ್‌‌, ಹಿರಿಯ ಕಮ್ಯುನಿಷ್ಟ್‌ ನಾಯಕಿ ಮಲ್ಲು ಸ್ವರಾಜ್ಯಂ ನಿಧನ

- Advertisement -
- Advertisement -

ತೆಲಂಗಾಣ ಸಶಸ್ತ್ರ ಹೋರಾಟದಲ್ಲಿ ಭಾಗವಹಿಸಿದ್ದ ಹಿರಿಯ ಕಮ್ಯುನಿಸ್ಟ್ ನಾಯಕಿ ಮಲ್ಲು ಸ್ವರಾಜ್ಯಂ ಅವರು ಮಾರ್ಚ್ 19ರ ಶನಿವಾರದಂದು ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಹೇಳಿದೆ ಎಂದು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ಆಂಧ್ರ ಪ್ರದೇಶ ವಿಧಾನಸಭೆಯ ಮಾಜಿ ಸದಸ್ಯೆಯೂ ಆಗಿರುವ ಅವರು ನ್ಯುಮೋನಿಯಾ ಚಿಕಿತ್ಸೆಗಾಗಿ ಮಾರ್ಚ್ 1 ರಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಮಲ್ಲು ಸ್ವರಾಜ್ಯಂ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕೇಂದ್ರ ಸಮಿತಿಯ ಸದಸ್ಯರಾಗಿದ್ದರು. ಕೊನೆಯವರೆಗೂ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದರು. 1931ರಲ್ಲಿ ಅವಿಭಜಿತ ನಲ್ಗೊಂಡ ಜಿಲ್ಲೆಯ ತುಂಗತಾರ್ತಿಯ ಕರಿವಿರಾಲ ಕೊತಗುಡೆಂ ಗ್ರಾಮದಲ್ಲಿ ಭೂಮಾಲಿಕ ಕುಟುಂಬದಲ್ಲಿ ಜನಿಸಿದ್ದ ಅವರು ತನ್ನ ಹದಿಹರೆಯದಲ್ಲಿ ಕಮ್ಯುನಿಸ್ಟ್ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಅವರ ಸಹೋದರ ಭೀಮರೆಡ್ಡಿ ನರಸಿಂಹ ರೆಡ್ಡಿಯವರಿಂದ ಪ್ರೇರಿತರಾಗಿ ಸ್ವರಾಜ್ಯಂ ಅವರು 1946 ರಿಂದ 1951 ರವರೆಗೆ ತೆಲಂಗಾಣ ಜನರ ಸಶಸ್ತ್ರ ಹೋರಾಟದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಕ್ಯೂಬಾ ಕಮ್ಯುನಿಷ್ಟ್‌ ಪಕ್ಷದ ನಾಯಕತ್ವ ಬದಲಾವಣೆಗೆ ರೌಲ್‌ ಕ್ಯಾಸ್ಟ್ರೊ ಒಲವು

ಅವರು ಕ್ರಾಂತಿಕಾರಿ ಗೀತೆಗಳನ್ನು ಹಾಡುವ ಮೂಲಕ ಜನರನ್ನು ಹೋರಾಟಕ್ಕೆ ಸಜ್ಜುಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿಸುತ್ತಿದ್ದರು. ಶಸ್ತ್ರಾಸ್ತ್ರಗಳನ್ನು ಎತ್ತಿದ್ದ ಅವರು ಹೋರಾಟಗಳಲ್ಲಿ ಕಮಾಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸಶಸ್ತ್ರ ಹೋರಾಟದಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಮತ್ತೊಬ್ಬ ಪ್ರಸಿದ್ಧ ಕಾಂಗ್ರೆಸ್ ನಾಯಕ ಮಲ್ಲು ವೆಂಕಟ ನರಸಿಂಹ ರೆಡ್ಡಿ ಅವರನ್ನು ಸ್ವರಾಜ್ಯ ವಿವಾಹವಾಗಿದ್ದರು. ಸಿಪಿಐ(ಎಂ) ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ತುಂಗತುರ್ಥಿ ವಿಧಾನಸಭಾ ಕ್ಷೇತ್ರದಿಂದ ಸಂಯುಕ್ತ ಆಂಧ್ರಪ್ರದೇಶದ ವಿಧಾನಸಭೆಗೆ ಎರಡು 1978 ಮತ್ತು 1983ರಲ್ಲಿ ಚುನಾಯಿತರಾಗಿದ್ದರು.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಕೂಡ ಸ್ವರಾಜ್ಯಂ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಅವರು ಅಸಾಧಾರಣ ಕಮ್ಯುನಿಸ್ಟ್ ಕ್ರಾಂತಿಕಾರಿಯಾಗಿದ್ದಾರೆ. 1946 ರಿಂದ 1951 ರವರೆಗಿನ ತೆಲಂಗಾಣದ ಸಶಸ್ತ್ರ ಹೋರಾಟದಲ್ಲಿ ಹೈದರಾಬಾದಿನ ನಿಜಾಮನ ‘ರಜಾಕರ’, ನಿರ್ದಯ ಜಮೀನ್ದಾರರ ಕೂಲಿ ಸೈನಿಕರ ಖಾಸಗಿ ಸೈನ್ಯವನ್ನು ನಿರ್ಭಯವಾಗಿ ಎದುರಿಸಿ, ಅವರಿಗೆ ಸವಾಲು ಹಾಕುತ್ತಿದ್ದರು” ಅವರು ಹೇಳಿದ್ದಾರೆ.

ಸ್ವರಾಜ್ಯಂ ಅವರು ತಮ್ಮ ವೈಯಕ್ತಿಕ ಉದಾಹರಣೆ ಮತ್ತು ರೋಮಾಂಚನಕಾರಿ ಭಾಷಣಗಳ ಮೂಲಕ ಹೋರಾಟದಲ್ಲಿ ಭಾಗವಹಿಸಲು ಅನೇಕ ಮಹಿಳೆಯರಿಗೆ ಸ್ಫೂರ್ತಿ ನೀಡಿದರು. “ನಾವು ಸ್ಪೂರ್ತಿದಾಯಕ ಕ್ರಾಂತಿಕಾರಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ಕ್ರಾಂತಿಕಾರಿ ಉದ್ದೇಶವನ್ನು ಮುನ್ನಡೆಸುತ್ತಾ ಜನರ ಸೇವೆಯಲ್ಲಿ 75 ವರ್ಷಗಳಿಗಿಂತ ಹೆಚ್ಚು ಕಾಲ ಕಳೆದರು” ಎಂದು ಯೆಚೂರಿ ಹೇಳಿದ್ದಾರೆ.

ಇದನ್ನೂ ಓದಿ: UDF ತೊರೆದು ಕಮ್ಯುನಿಷ್ಟ್ ಒಕ್ಕೂಟ ಸೇರಿದ ಕೇರಳ ಕಾಂಗ್ರೆಸ್ (ಎಂ)!

ಹೋರಾಟಗಾರ್ತಿಯ ಸಾವಿಗೆ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸಂತಾಪ ಸೂಚಿಸಿದ್ದು, ಅವರು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ಎಂದು ಹೇಳಿದ್ದಾರೆ.

“ಸ್ವರಾಜ್ಯಂ ತನ್ನ ಜೀವನದುದ್ದಕ್ಕೂ ಜನರಿಗಾಗಿ ಅವಿಶ್ರಾಂತವಾಗಿ ದುಡಿದಿದ್ದು ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿದ್ದಾರೆ. ಸ್ವರಾಜ್ಯಂನಂತಹ ಮಹಿಳಾ ನಾಯಕಿಯನ್ನು ಕಳೆದುಕೊಂಡಿರುವುದು ತೆಲಂಗಾಣಕ್ಕೆ ದೊಡ್ಡ ನಷ್ಟವಾಗಿದೆ” ಎಂದು ಹೇಳಿರುವ ಸಿಎಂ ದುಃಖತಪ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಸಚಿವ ಜಿ. ಕಿಶನ್ ರೆಡ್ಡಿ ಕೂಡ ಸಂತಾಪ ಸೂಚಿಸಿದ್ದಾರೆ. “ಇಂದು ಮಲ್ಲು ಸ್ವರಾಜ್ಯಂ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ‘ತೆಲಂಗಾಣದ ಉಕ್ಕಿನ ಮಹಿಳೆ’ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಅವರು, ರಜಾಕರ ವಿರುದ್ಧ ತೆಲಂಗಾಣದ ಜನರಿಗಾಗಿ ಅವರು ಮಾಡಿದ ಹೋರಾಟವು ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...