Homeಮುಖಪುಟತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

- Advertisement -
- Advertisement -

ಕಾಂಗ್ರೆಸ್ ಚುನಾವಣಾ ಭರವಸೆಯನ್ನು ಒಂದು ವರ್ಷದೊಳಗೆ ಈಡೇರಿಸಲಾಗಿದೆ ಎಂದು ಪ್ರತಿಪಾದಿಸಿರುವ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆಯನ್ನು ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಐತಿಹಾಸಿಕವಾಗಿ ತಳಮಟ್ಟದಲ್ಲಿರುವ ಹಿಂದುಳಿದ ವರ್ಗಗಳಿಂದ “ಅವರನ್ನು ಎಣಿಕೆ ಮಾಡಬೇಕು” ಎಂಬ ಬೇಡಿಕೆ ಇದೆ ಎಂದು ಹೇಳಿದ್ದಾರೆ.

“ಯಾವುದೇ ನೀತಿ ಜಾರಿಗೆ ಬರಲು, ಅದನ್ನು ಬೆಂಬಲಿಸಲು ದತ್ತಾಂಶ ಇರಬೇಕು. ಜಾತಿ ಸಮೀಕ್ಷೆಯ ಅಂಕಿ-ಅಂಶವನ್ನು ರಾಜ್ಯದಲ್ಲಿ ಸಾಮಾಜಿಕ-ರಾಜಕೀಯ ಬದಲಾವಣೆಗಳನ್ನು ತರಲು ಬಳಸಲಾಗುತ್ತದೆ. ಇದು ತೆಲಂಗಾಣದ ಒಂದು ಐತಿಹಾಸಿಕ ಕ್ಷಣ.” ಎಂದು ಸಿಎಂ ರೆಡ್ಡಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತದಾದ್ಯಂತ ಕೊನೆಯ ಜಾತಿ ಜನಗಣತಿಯನ್ನು 1931 ರಲ್ಲಿ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ. “ಭಾರತದ ಸ್ವಾತಂತ್ರ್ಯದ 75 ವರ್ಷಗಳ ನಂತರ, ಯಾರೂ ಹಿಂದುಳಿದ ವರ್ಗಗಳನ್ನು ಎಣಿಸಲು ಪ್ರಯತ್ನಿಸಲಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ವಿವಿಧ ಜಾತಿಗಳನ್ನು ಎಣಿಸುವುದಾಗಿ ಭರವಸೆ ನೀಡಿದರು. ನಾವು ಆ ಭರವಸೆಯನ್ನು ಈಡೇರಿಸಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಈ ಸಮೀಕ್ಷೆಯು “ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮಾರ್ಗಸೂಚಿಯಾಗಿ” ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ರಾಜ್ಯದ ಸಾಮಾಜಿಕ-ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ವರದಿಯ ಮಾಹಿತಿಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.33 ರಷ್ಟಿದ್ದಾರೆ ಎಂದು ರೆಡ್ಡಿ ಹೇಳಿದ್ದಾರೆ. ತೆಲಂಗಾಣ

ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳು (SC) ಜನಸಂಖ್ಯೆಯಲ್ಲಿ ಶೇ. 17.43 ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳು (ST) ಶೇ. 10.45 ರಷ್ಟಿದ್ದಾರೆ. ಇತರ ಜಾತಿಗಳು (OC) ಜನಸಂಖ್ಯೆಯ ಶೇ. 15.79 ರಷ್ಟಿವೆ. ಸಂಪೂರ್ಣ ಸಂಖ್ಯೆಯಲ್ಲಿ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ (BC) ಜನಸಂಖ್ಯೆಯು 1,99,85,767 ಆಗಿದ್ದು, ಇದರಲ್ಲಿ 35,76,588 BC ಮುಸ್ಲಿಮರು ಸೇರಿದ್ದಾರೆ. ಎಸ್‌ಸಿ ಜನಸಂಖ್ಯೆ 61,84,319 ಮತ್ತು ಎಸ್‌ಟಿ ಜನಸಂಖ್ಯೆ 37,05,929. ಹಾಗೂ ಇತರ ಜಾತಿಗಳ ಜನಸಂಖ್ಯೆ 44,21,115 ಇವೆ.

ಜಾತಿ ಸಮೀಕ್ಷೆ ವರದಿ ಹೊರಬಂದಾಗಿನಿಂದ ತೆಲಂಗಾಣದ ವಿರೋಧ ಪಕ್ಷಗಳಾದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದ್ದು, ಹಿಂದುಳಿದ ವರ್ಗದ ಜನಸಂಖ್ಯೆಯನ್ನು “ಕಡಿಮೆ ಎಣಿಕೆ” ಮಾಡಲಾಗಿದೆ ಎಂದು ಹೇಳಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗ ಮುಸ್ಲಿಂ ಸೇರಿದಂತೆ ಹಿಂದುಳಿದ ಜಾತಿಗಳ ಜನಸಂಖ್ಯೆಯು 60% ಕ್ಕಿಂತ ಹೆಚ್ಚಿರಬೇಕಿತ್ತು ಎಂದು ಎರಡೂ ಪಕ್ಷಗಳು ಹೇಳಿಕೊಳ್ಳುತ್ತಿವೆ.

ವಿಧಾನಸಭೆಯಲ್ಲಿ ಮಾತನಾಡಿದ ಬಿಆರ್‌ಎಸ್ ನಾಯಕ ತಲಾಸಾನಿ ಶ್ರೀನಿವಾಸ್ ಯಾದವ್, “2011 ರ ಜನಗಣತಿಯ ತುಲನಾತ್ಮಕ ಅಂಕಿಅಂಶಗಳನ್ನು ನೋಡಿದರೆ ಹಿಂದುಳಿದ ವರ್ಗಗಳ ಕಡಿಮೆ ಎಣಿಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂಓದಿ:  ‘ಕುಂಭಮೇಳದ ಕಾಲ್ತುಳಿತ ಅಷ್ಟು ದೊಡ್ಡದಲ್ಲ..’; ಅಖಿಲೇಶ್ ಯಾದವ್ ಆರೋಪಕ್ಕೆ ಹೇಮಾ ಮಾಲಿನಿ ಪ್ರತಿಕ್ರಿಯೆ

‘ಕುಂಭಮೇಳದ ಕಾಲ್ತುಳಿತ ಅಷ್ಟು ದೊಡ್ಡದಲ್ಲ..’; ಅಖಿಲೇಶ್ ಯಾದವ್ ಆರೋಪಕ್ಕೆ ಹೇಮಾ ಮಾಲಿನಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...