Homeಮುಖಪುಟತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

- Advertisement -
- Advertisement -

ಕಾಂಗ್ರೆಸ್ ಚುನಾವಣಾ ಭರವಸೆಯನ್ನು ಒಂದು ವರ್ಷದೊಳಗೆ ಈಡೇರಿಸಲಾಗಿದೆ ಎಂದು ಪ್ರತಿಪಾದಿಸಿರುವ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆಯನ್ನು ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಐತಿಹಾಸಿಕವಾಗಿ ತಳಮಟ್ಟದಲ್ಲಿರುವ ಹಿಂದುಳಿದ ವರ್ಗಗಳಿಂದ “ಅವರನ್ನು ಎಣಿಕೆ ಮಾಡಬೇಕು” ಎಂಬ ಬೇಡಿಕೆ ಇದೆ ಎಂದು ಹೇಳಿದ್ದಾರೆ.

“ಯಾವುದೇ ನೀತಿ ಜಾರಿಗೆ ಬರಲು, ಅದನ್ನು ಬೆಂಬಲಿಸಲು ದತ್ತಾಂಶ ಇರಬೇಕು. ಜಾತಿ ಸಮೀಕ್ಷೆಯ ಅಂಕಿ-ಅಂಶವನ್ನು ರಾಜ್ಯದಲ್ಲಿ ಸಾಮಾಜಿಕ-ರಾಜಕೀಯ ಬದಲಾವಣೆಗಳನ್ನು ತರಲು ಬಳಸಲಾಗುತ್ತದೆ. ಇದು ತೆಲಂಗಾಣದ ಒಂದು ಐತಿಹಾಸಿಕ ಕ್ಷಣ.” ಎಂದು ಸಿಎಂ ರೆಡ್ಡಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತದಾದ್ಯಂತ ಕೊನೆಯ ಜಾತಿ ಜನಗಣತಿಯನ್ನು 1931 ರಲ್ಲಿ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ. “ಭಾರತದ ಸ್ವಾತಂತ್ರ್ಯದ 75 ವರ್ಷಗಳ ನಂತರ, ಯಾರೂ ಹಿಂದುಳಿದ ವರ್ಗಗಳನ್ನು ಎಣಿಸಲು ಪ್ರಯತ್ನಿಸಲಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ವಿವಿಧ ಜಾತಿಗಳನ್ನು ಎಣಿಸುವುದಾಗಿ ಭರವಸೆ ನೀಡಿದರು. ನಾವು ಆ ಭರವಸೆಯನ್ನು ಈಡೇರಿಸಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಈ ಸಮೀಕ್ಷೆಯು “ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮಾರ್ಗಸೂಚಿಯಾಗಿ” ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ರಾಜ್ಯದ ಸಾಮಾಜಿಕ-ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ವರದಿಯ ಮಾಹಿತಿಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.33 ರಷ್ಟಿದ್ದಾರೆ ಎಂದು ರೆಡ್ಡಿ ಹೇಳಿದ್ದಾರೆ. ತೆಲಂಗಾಣ

ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳು (SC) ಜನಸಂಖ್ಯೆಯಲ್ಲಿ ಶೇ. 17.43 ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳು (ST) ಶೇ. 10.45 ರಷ್ಟಿದ್ದಾರೆ. ಇತರ ಜಾತಿಗಳು (OC) ಜನಸಂಖ್ಯೆಯ ಶೇ. 15.79 ರಷ್ಟಿವೆ. ಸಂಪೂರ್ಣ ಸಂಖ್ಯೆಯಲ್ಲಿ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ (BC) ಜನಸಂಖ್ಯೆಯು 1,99,85,767 ಆಗಿದ್ದು, ಇದರಲ್ಲಿ 35,76,588 BC ಮುಸ್ಲಿಮರು ಸೇರಿದ್ದಾರೆ. ಎಸ್‌ಸಿ ಜನಸಂಖ್ಯೆ 61,84,319 ಮತ್ತು ಎಸ್‌ಟಿ ಜನಸಂಖ್ಯೆ 37,05,929. ಹಾಗೂ ಇತರ ಜಾತಿಗಳ ಜನಸಂಖ್ಯೆ 44,21,115 ಇವೆ.

ಜಾತಿ ಸಮೀಕ್ಷೆ ವರದಿ ಹೊರಬಂದಾಗಿನಿಂದ ತೆಲಂಗಾಣದ ವಿರೋಧ ಪಕ್ಷಗಳಾದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದ್ದು, ಹಿಂದುಳಿದ ವರ್ಗದ ಜನಸಂಖ್ಯೆಯನ್ನು “ಕಡಿಮೆ ಎಣಿಕೆ” ಮಾಡಲಾಗಿದೆ ಎಂದು ಹೇಳಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗ ಮುಸ್ಲಿಂ ಸೇರಿದಂತೆ ಹಿಂದುಳಿದ ಜಾತಿಗಳ ಜನಸಂಖ್ಯೆಯು 60% ಕ್ಕಿಂತ ಹೆಚ್ಚಿರಬೇಕಿತ್ತು ಎಂದು ಎರಡೂ ಪಕ್ಷಗಳು ಹೇಳಿಕೊಳ್ಳುತ್ತಿವೆ.

ವಿಧಾನಸಭೆಯಲ್ಲಿ ಮಾತನಾಡಿದ ಬಿಆರ್‌ಎಸ್ ನಾಯಕ ತಲಾಸಾನಿ ಶ್ರೀನಿವಾಸ್ ಯಾದವ್, “2011 ರ ಜನಗಣತಿಯ ತುಲನಾತ್ಮಕ ಅಂಕಿಅಂಶಗಳನ್ನು ನೋಡಿದರೆ ಹಿಂದುಳಿದ ವರ್ಗಗಳ ಕಡಿಮೆ ಎಣಿಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂಓದಿ:  ‘ಕುಂಭಮೇಳದ ಕಾಲ್ತುಳಿತ ಅಷ್ಟು ದೊಡ್ಡದಲ್ಲ..’; ಅಖಿಲೇಶ್ ಯಾದವ್ ಆರೋಪಕ್ಕೆ ಹೇಮಾ ಮಾಲಿನಿ ಪ್ರತಿಕ್ರಿಯೆ

‘ಕುಂಭಮೇಳದ ಕಾಲ್ತುಳಿತ ಅಷ್ಟು ದೊಡ್ಡದಲ್ಲ..’; ಅಖಿಲೇಶ್ ಯಾದವ್ ಆರೋಪಕ್ಕೆ ಹೇಮಾ ಮಾಲಿನಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...