Homeಮುಖಪುಟತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

- Advertisement -
- Advertisement -

ಕಾಂಗ್ರೆಸ್ ಚುನಾವಣಾ ಭರವಸೆಯನ್ನು ಒಂದು ವರ್ಷದೊಳಗೆ ಈಡೇರಿಸಲಾಗಿದೆ ಎಂದು ಪ್ರತಿಪಾದಿಸಿರುವ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆಯನ್ನು ಮಂಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಐತಿಹಾಸಿಕವಾಗಿ ತಳಮಟ್ಟದಲ್ಲಿರುವ ಹಿಂದುಳಿದ ವರ್ಗಗಳಿಂದ “ಅವರನ್ನು ಎಣಿಕೆ ಮಾಡಬೇಕು” ಎಂಬ ಬೇಡಿಕೆ ಇದೆ ಎಂದು ಹೇಳಿದ್ದಾರೆ.

“ಯಾವುದೇ ನೀತಿ ಜಾರಿಗೆ ಬರಲು, ಅದನ್ನು ಬೆಂಬಲಿಸಲು ದತ್ತಾಂಶ ಇರಬೇಕು. ಜಾತಿ ಸಮೀಕ್ಷೆಯ ಅಂಕಿ-ಅಂಶವನ್ನು ರಾಜ್ಯದಲ್ಲಿ ಸಾಮಾಜಿಕ-ರಾಜಕೀಯ ಬದಲಾವಣೆಗಳನ್ನು ತರಲು ಬಳಸಲಾಗುತ್ತದೆ. ಇದು ತೆಲಂಗಾಣದ ಒಂದು ಐತಿಹಾಸಿಕ ಕ್ಷಣ.” ಎಂದು ಸಿಎಂ ರೆಡ್ಡಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಭಾರತದಾದ್ಯಂತ ಕೊನೆಯ ಜಾತಿ ಜನಗಣತಿಯನ್ನು 1931 ರಲ್ಲಿ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ. “ಭಾರತದ ಸ್ವಾತಂತ್ರ್ಯದ 75 ವರ್ಷಗಳ ನಂತರ, ಯಾರೂ ಹಿಂದುಳಿದ ವರ್ಗಗಳನ್ನು ಎಣಿಸಲು ಪ್ರಯತ್ನಿಸಲಿಲ್ಲ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ವಿವಿಧ ಜಾತಿಗಳನ್ನು ಎಣಿಸುವುದಾಗಿ ಭರವಸೆ ನೀಡಿದರು. ನಾವು ಆ ಭರವಸೆಯನ್ನು ಈಡೇರಿಸಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಈ ಸಮೀಕ್ಷೆಯು “ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮಾರ್ಗಸೂಚಿಯಾಗಿ” ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ರಾಜ್ಯದ ಸಾಮಾಜಿಕ-ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ವರದಿಯ ಮಾಹಿತಿಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.33 ರಷ್ಟಿದ್ದಾರೆ ಎಂದು ರೆಡ್ಡಿ ಹೇಳಿದ್ದಾರೆ. ತೆಲಂಗಾಣ

ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳು (SC) ಜನಸಂಖ್ಯೆಯಲ್ಲಿ ಶೇ. 17.43 ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳು (ST) ಶೇ. 10.45 ರಷ್ಟಿದ್ದಾರೆ. ಇತರ ಜಾತಿಗಳು (OC) ಜನಸಂಖ್ಯೆಯ ಶೇ. 15.79 ರಷ್ಟಿವೆ. ಸಂಪೂರ್ಣ ಸಂಖ್ಯೆಯಲ್ಲಿ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ (BC) ಜನಸಂಖ್ಯೆಯು 1,99,85,767 ಆಗಿದ್ದು, ಇದರಲ್ಲಿ 35,76,588 BC ಮುಸ್ಲಿಮರು ಸೇರಿದ್ದಾರೆ. ಎಸ್‌ಸಿ ಜನಸಂಖ್ಯೆ 61,84,319 ಮತ್ತು ಎಸ್‌ಟಿ ಜನಸಂಖ್ಯೆ 37,05,929. ಹಾಗೂ ಇತರ ಜಾತಿಗಳ ಜನಸಂಖ್ಯೆ 44,21,115 ಇವೆ.

ಜಾತಿ ಸಮೀಕ್ಷೆ ವರದಿ ಹೊರಬಂದಾಗಿನಿಂದ ತೆಲಂಗಾಣದ ವಿರೋಧ ಪಕ್ಷಗಳಾದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದ್ದು, ಹಿಂದುಳಿದ ವರ್ಗದ ಜನಸಂಖ್ಯೆಯನ್ನು “ಕಡಿಮೆ ಎಣಿಕೆ” ಮಾಡಲಾಗಿದೆ ಎಂದು ಹೇಳಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗ ಮುಸ್ಲಿಂ ಸೇರಿದಂತೆ ಹಿಂದುಳಿದ ಜಾತಿಗಳ ಜನಸಂಖ್ಯೆಯು 60% ಕ್ಕಿಂತ ಹೆಚ್ಚಿರಬೇಕಿತ್ತು ಎಂದು ಎರಡೂ ಪಕ್ಷಗಳು ಹೇಳಿಕೊಳ್ಳುತ್ತಿವೆ.

ವಿಧಾನಸಭೆಯಲ್ಲಿ ಮಾತನಾಡಿದ ಬಿಆರ್‌ಎಸ್ ನಾಯಕ ತಲಾಸಾನಿ ಶ್ರೀನಿವಾಸ್ ಯಾದವ್, “2011 ರ ಜನಗಣತಿಯ ತುಲನಾತ್ಮಕ ಅಂಕಿಅಂಶಗಳನ್ನು ನೋಡಿದರೆ ಹಿಂದುಳಿದ ವರ್ಗಗಳ ಕಡಿಮೆ ಎಣಿಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂಓದಿ:  ‘ಕುಂಭಮೇಳದ ಕಾಲ್ತುಳಿತ ಅಷ್ಟು ದೊಡ್ಡದಲ್ಲ..’; ಅಖಿಲೇಶ್ ಯಾದವ್ ಆರೋಪಕ್ಕೆ ಹೇಮಾ ಮಾಲಿನಿ ಪ್ರತಿಕ್ರಿಯೆ

‘ಕುಂಭಮೇಳದ ಕಾಲ್ತುಳಿತ ಅಷ್ಟು ದೊಡ್ಡದಲ್ಲ..’; ಅಖಿಲೇಶ್ ಯಾದವ್ ಆರೋಪಕ್ಕೆ ಹೇಮಾ ಮಾಲಿನಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...