Homeಮುಖಪುಟತೆಲಂಗಾಣ ವಿಧಾನಸಭಾ ಚುನಾವಣೆ: ಇಂದು ಮತದಾನ

ತೆಲಂಗಾಣ ವಿಧಾನಸಭಾ ಚುನಾವಣೆ: ಇಂದು ಮತದಾನ

- Advertisement -
- Advertisement -

ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 6ರವರೆಗೆ ಮುಂದುವರಿಯಲಿದೆ.

ತೆಲುಗು ರಾಜ್ಯದ 3.17 ಕೋಟಿ ಮತದಾರರು ರಾಷ್ಟ್ರೀಯ, ಪ್ರಾದೇಶಿಕ ಸೇರಿ 109 ಪಕ್ಷಗಳ 2,290 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆಯಲಿದ್ದಾರೆ. ಈ ಚುನಾವಣೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಯ ಕೆ ಚಂದ್ರಶೇಖರ ರಾವ್ ಅವರಂತಹ ಪ್ರಮುಖ ನಾಯಕರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಅಭ್ಯರ್ಥಿಗಳ ಪೈಕಿ 221 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಒಳಗೊಂಡಿದ್ದಾರೆ. 103 ಮಂದಿ ಶಾಸಕರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ರಾಜ್ಯದ್ಯಾಂತ 35, 665 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 12 ಸಾವಿರ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 2.8 ಲಕ್ಷ ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ. ಪೊಲೀಸರು ಬಿಗಿ ಬಂದೋ ಬಸ್ತ್ ಕೈಗೊಂಡಿದ್ದಾರೆ.

ತೆಲಂಗಾಣದಲ್ಲಿ ಪ್ರಪ್ರಥಮ ಬಾರಿಗೆ 80 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಹಕ್ಕು ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ. 27, 600 ಜನರು ಇದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶಗಳ ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ತಿಳಿಸಿದ್ದಾರೆ.

ಡಿಸೆಂಬರ್ 3ರಂದು ದೇಶದ ಇತರ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ಜೊತೆ ತೆಲಂಗಾಣದ ಮತ ಎಣಿಕೆಯೂ ನಡೆಯಲಿದೆ.

ಪಂಚರಾಜ್ಯ ಚುನಾವಣೆಯ ಕೊನೆಯ ಮತದಾನ :

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ಸೇರಿ ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ತೆಲಂಗಾಣ ಹೊರತು ಇತರ ನಾಲ್ಕು ರಾಜ್ಯಗಳಲ್ಲಿ ನವೆಂಬರ್ 7 ಮತ್ತು 26ರಂದು ಎರಡು ಹಂತಗಳಲ್ಲಿ ಈಗಾಗಲೇ ಮತದಾನ ನಡೆದಿದೆ. ಇಂದು ಕೊನೆಯದಾಗಿ ತೆಲಂಗಾಣದ ಮತದಾನ ನಡೆಯುತ್ತಿದೆ.

ಆಡಳಿತಾರೂಢ ಬಿಆರ್‌ಎಸ್ ಪಕ್ಷ ಎಲ್ಲಾ 119 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಕ್ರಮವಾಗಿ 111 ಮತ್ತು 8 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ಒಂದು ಸ್ಥಾನವನ್ನು ಬಿಟ್ಟು ಕೊಟ್ಟಿದೆ. ಉಳಿದ 118 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಗ್ಯಾರಂಟಿ ಕೊಟ್ಟ ಕಾಂಗ್ರೆಸ್‌ :

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ ಘೋಷಿಸಿದ್ದ ಅನ್ನಭಾಗ್ಯ, ಗೃಹಲಕ್ಷಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಈ ಐದು ಗ್ಯಾರಂಟಿಗಳು ಪಕ್ಷಕ್ಕೆ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರಣವಾಗಿತ್ತು.

ಇದೇ ಗ್ಯಾರಂಟಿ ದಾಳವನ್ನು ತೆಲುಗು ರಾಜ್ಯದಲ್ಲೂ ಕಾಂಗ್ರೆಸ್ ಉರುಳಿಸಿದೆ. ತೆಲಂಗಾಣದಲ್ಲೂ, ಪ್ರತಿ ತಿಂಗಳು ಅತ್ತೆಗೆ 4,000 ರೂ., ಸೊಸೆಗೆ 2,500 ರೂ. ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ), ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ, 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್, ಹೀಗೆ 6 ಗ್ಯಾರಂಟಿಗಳನ್ನು ಘೋಷಿಸಿದೆ.

ಬಿಆರ್‌ಎಸ್‌ ಭರವಸೆ ಏನು?

ಸಾಮಾಜಿಕ ಭದ್ರತಾ ಪಿಂಚಣಿ ಮೊತ್ತ ಏರಿಕೆ, ರೈತರಿಗೆ ‘ರೈತಬಂಧು’ ಹೂಡಿಕೆ ಯೋಜನೆಯಡಿ ಆರ್ಥಿಕ ನೆರವು, 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ, ಬಿಪಿಎಲ್‌ ವರ್ಗದ 93 ಲಕ್ಷ ಕುಟುಂಬಗಳಿಗೆ 5 ಲಕ್ಷ ರೂ.ಗಳ ಜೀವವಿಮೆ. ವಿಕಲಾಂಗರಿಗೆ ನೀಡುತ್ತಿರುವ ಪಿಂಚಣಿ ಮೊತ್ತ 4,016 ರೂ. ನಿಂದ ಮುಂದಿನ ಐದು ವರ್ಷಗಳಲ್ಲಿ 6,016 ರೂ.ಗೆ ಏರಿಕೆ. ಹೀಗೆ ಹಲವು ಭರವಸೆಗಳನ್ನು ಆಢಳಿತರೂಡ ಬಿಆರ್‌ಎಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ.

ಬಿಜೆಪಿ ವಾಗ್ದಾನ ಏನು?

ಬಿಜೆಪಿ ಪಕ್ಷ ಸಮಾನ ನಾಗರಿಕ ಸಂಹಿತೆ ಜಾರಿ, ಉಜ್ವಲ ಯೋಜನೆಯಡಿ ಉಚಿತ ಎಲ್‌ಪಿಜಿ ಸಿಲಿಂಡರ್ ವಿತರಣೆ, ಕೃಷ್ಣ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಬರಬೇಕಿರುವ ನ್ಯಾಯಯುತ ಪಾಲು ದೊರಕಿಸುವುದು, ಧರ್ಮಾಧಾರಿತ ಮೀಸಲು ರದ್ದು, ತೈಲದ ಮೇಲಿನ ವ್ಯಾಟ್‌ ತೆರಿಗೆ ಕಡಿತ ಹೀಗೆ ಹಲವು ಭರವಸೆಗಳನ್ನು ಕೊಟ್ಟಿದೆ.

ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದೇನು?

ಲೋಕ್‌ಪೋಲ್‌ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ 69-72 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಆಢಳಿತರೂಡ ಬಿಆರ್‌ಎಸ್‌ 36-39, ಎಐಎಂಐಎಂ 5-6, ಬಿಜೆಪಿ 2-3, ಇತರರು 0-1 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಬಹುದು ಎಂದಿದೆ.

ಸೌತ್ ಫಸ್ಟ್ ಮಾಡಿರುವ ಸಮೀಕ್ಷೆಯು ಕೂಡ ಕಾಂಗ್ರೆಸ್‌ ಗೆಲುವು ದಾಖಲಿಸಲಿದೆ ಎಂದಿದೆ. ಕಾಂಗ್ರೆಸ್‌ 57-62, ಬಿಆರ್‌ಎಸ್‌ 41-46, ಎಐಎಂಐಎಂ 6-7, ಬಿಜೆಪಿ, 3-6 ಮತ್ತು ಇತರರು 1-2 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.

ಇದನ್ನೂ ಓದಿ : ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...