Homeಮುಖಪುಟತೆಲಂಗಾಣ ವಿಧಾನಸಭಾ ಚುನಾವಣೆ: ಇಂದು ಮತದಾನ

ತೆಲಂಗಾಣ ವಿಧಾನಸಭಾ ಚುನಾವಣೆ: ಇಂದು ಮತದಾನ

- Advertisement -
- Advertisement -

ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 6ರವರೆಗೆ ಮುಂದುವರಿಯಲಿದೆ.

ತೆಲುಗು ರಾಜ್ಯದ 3.17 ಕೋಟಿ ಮತದಾರರು ರಾಷ್ಟ್ರೀಯ, ಪ್ರಾದೇಶಿಕ ಸೇರಿ 109 ಪಕ್ಷಗಳ 2,290 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆಯಲಿದ್ದಾರೆ. ಈ ಚುನಾವಣೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಯ ಕೆ ಚಂದ್ರಶೇಖರ ರಾವ್ ಅವರಂತಹ ಪ್ರಮುಖ ನಾಯಕರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಅಭ್ಯರ್ಥಿಗಳ ಪೈಕಿ 221 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಒಳಗೊಂಡಿದ್ದಾರೆ. 103 ಮಂದಿ ಶಾಸಕರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ರಾಜ್ಯದ್ಯಾಂತ 35, 665 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 12 ಸಾವಿರ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 2.8 ಲಕ್ಷ ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ. ಪೊಲೀಸರು ಬಿಗಿ ಬಂದೋ ಬಸ್ತ್ ಕೈಗೊಂಡಿದ್ದಾರೆ.

ತೆಲಂಗಾಣದಲ್ಲಿ ಪ್ರಪ್ರಥಮ ಬಾರಿಗೆ 80 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಹಕ್ಕು ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ. 27, 600 ಜನರು ಇದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶಗಳ ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ತಿಳಿಸಿದ್ದಾರೆ.

ಡಿಸೆಂಬರ್ 3ರಂದು ದೇಶದ ಇತರ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ಜೊತೆ ತೆಲಂಗಾಣದ ಮತ ಎಣಿಕೆಯೂ ನಡೆಯಲಿದೆ.

ಪಂಚರಾಜ್ಯ ಚುನಾವಣೆಯ ಕೊನೆಯ ಮತದಾನ :

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ಸೇರಿ ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ತೆಲಂಗಾಣ ಹೊರತು ಇತರ ನಾಲ್ಕು ರಾಜ್ಯಗಳಲ್ಲಿ ನವೆಂಬರ್ 7 ಮತ್ತು 26ರಂದು ಎರಡು ಹಂತಗಳಲ್ಲಿ ಈಗಾಗಲೇ ಮತದಾನ ನಡೆದಿದೆ. ಇಂದು ಕೊನೆಯದಾಗಿ ತೆಲಂಗಾಣದ ಮತದಾನ ನಡೆಯುತ್ತಿದೆ.

ಆಡಳಿತಾರೂಢ ಬಿಆರ್‌ಎಸ್ ಪಕ್ಷ ಎಲ್ಲಾ 119 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಕ್ರಮವಾಗಿ 111 ಮತ್ತು 8 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ಒಂದು ಸ್ಥಾನವನ್ನು ಬಿಟ್ಟು ಕೊಟ್ಟಿದೆ. ಉಳಿದ 118 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಗ್ಯಾರಂಟಿ ಕೊಟ್ಟ ಕಾಂಗ್ರೆಸ್‌ :

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ ಘೋಷಿಸಿದ್ದ ಅನ್ನಭಾಗ್ಯ, ಗೃಹಲಕ್ಷಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಈ ಐದು ಗ್ಯಾರಂಟಿಗಳು ಪಕ್ಷಕ್ಕೆ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರಣವಾಗಿತ್ತು.

ಇದೇ ಗ್ಯಾರಂಟಿ ದಾಳವನ್ನು ತೆಲುಗು ರಾಜ್ಯದಲ್ಲೂ ಕಾಂಗ್ರೆಸ್ ಉರುಳಿಸಿದೆ. ತೆಲಂಗಾಣದಲ್ಲೂ, ಪ್ರತಿ ತಿಂಗಳು ಅತ್ತೆಗೆ 4,000 ರೂ., ಸೊಸೆಗೆ 2,500 ರೂ. ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ), ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ, 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್, ಹೀಗೆ 6 ಗ್ಯಾರಂಟಿಗಳನ್ನು ಘೋಷಿಸಿದೆ.

ಬಿಆರ್‌ಎಸ್‌ ಭರವಸೆ ಏನು?

ಸಾಮಾಜಿಕ ಭದ್ರತಾ ಪಿಂಚಣಿ ಮೊತ್ತ ಏರಿಕೆ, ರೈತರಿಗೆ ‘ರೈತಬಂಧು’ ಹೂಡಿಕೆ ಯೋಜನೆಯಡಿ ಆರ್ಥಿಕ ನೆರವು, 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ, ಬಿಪಿಎಲ್‌ ವರ್ಗದ 93 ಲಕ್ಷ ಕುಟುಂಬಗಳಿಗೆ 5 ಲಕ್ಷ ರೂ.ಗಳ ಜೀವವಿಮೆ. ವಿಕಲಾಂಗರಿಗೆ ನೀಡುತ್ತಿರುವ ಪಿಂಚಣಿ ಮೊತ್ತ 4,016 ರೂ. ನಿಂದ ಮುಂದಿನ ಐದು ವರ್ಷಗಳಲ್ಲಿ 6,016 ರೂ.ಗೆ ಏರಿಕೆ. ಹೀಗೆ ಹಲವು ಭರವಸೆಗಳನ್ನು ಆಢಳಿತರೂಡ ಬಿಆರ್‌ಎಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ.

ಬಿಜೆಪಿ ವಾಗ್ದಾನ ಏನು?

ಬಿಜೆಪಿ ಪಕ್ಷ ಸಮಾನ ನಾಗರಿಕ ಸಂಹಿತೆ ಜಾರಿ, ಉಜ್ವಲ ಯೋಜನೆಯಡಿ ಉಚಿತ ಎಲ್‌ಪಿಜಿ ಸಿಲಿಂಡರ್ ವಿತರಣೆ, ಕೃಷ್ಣ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಬರಬೇಕಿರುವ ನ್ಯಾಯಯುತ ಪಾಲು ದೊರಕಿಸುವುದು, ಧರ್ಮಾಧಾರಿತ ಮೀಸಲು ರದ್ದು, ತೈಲದ ಮೇಲಿನ ವ್ಯಾಟ್‌ ತೆರಿಗೆ ಕಡಿತ ಹೀಗೆ ಹಲವು ಭರವಸೆಗಳನ್ನು ಕೊಟ್ಟಿದೆ.

ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದೇನು?

ಲೋಕ್‌ಪೋಲ್‌ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ 69-72 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಆಢಳಿತರೂಡ ಬಿಆರ್‌ಎಸ್‌ 36-39, ಎಐಎಂಐಎಂ 5-6, ಬಿಜೆಪಿ 2-3, ಇತರರು 0-1 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಬಹುದು ಎಂದಿದೆ.

ಸೌತ್ ಫಸ್ಟ್ ಮಾಡಿರುವ ಸಮೀಕ್ಷೆಯು ಕೂಡ ಕಾಂಗ್ರೆಸ್‌ ಗೆಲುವು ದಾಖಲಿಸಲಿದೆ ಎಂದಿದೆ. ಕಾಂಗ್ರೆಸ್‌ 57-62, ಬಿಆರ್‌ಎಸ್‌ 41-46, ಎಐಎಂಐಎಂ 6-7, ಬಿಜೆಪಿ, 3-6 ಮತ್ತು ಇತರರು 1-2 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.

ಇದನ್ನೂ ಓದಿ : ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...