Homeಮುಖಪುಟಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ತೆಲಂಗಾಣ

ಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ತೆಲಂಗಾಣ

- Advertisement -
- Advertisement -

ರಾಜ್ಯಕ್ಕೆ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯವನ್ನು ತೆಲಂಗಾಣ ಸರ್ಕಾರ ಬುಧವಾರ(ಜು.24) ಅಂಗೀಕರಿಸಿದೆ.

ಆಂಧ್ರ ಪ್ರದೇಶ ಮರು ಸಂಘಟನೆ ಅಥವಾ ರಾಜ್ಯ ವಿಭಜನೆ ಕಾಯ್ದೆಯ ಅನ್ವಯ ಎರಡೂ ರಾಜ್ಯಗಳನ್ನು ಸಮಾನ ರೀತಿಯಲ್ಲಿ ನೋಡಬೇಕಿತ್ತು. ಆದರೆ, ಕೇಂದ್ರದ ಎನ್‌ಡಿಎ ಸರ್ಕಾರ ತನ್ನ ಮಿತ್ರ ಪಕ್ಷಗಳನ್ನು ಓಲೈಸಲು ಬಜೆಟ್‌ನಲ್ಲಿ ಆಂಧ್ರಕ್ಕೆ ಹೆಚ್ಚಿನ ಒತ್ತು ಕೊಟ್ಟಿದೆ, ತೆಲಂಗಾಣವನ್ನು ಕಡೆಗಣಿಸಿದೆ ಎಂದು ವಿಧಾನಸಭೆಯಲ್ಲಿ ಬುಧವಾರ ಆಕ್ರೋಶ ವ್ಯಕ್ತವಾಯಿತು.

ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ನಿರ್ಣಯವನ್ನು ಮಂಡಿಸಿದರು. ವಿರೋಧ ಪಕ್ಷಗಳಾದ ಭಾರತ ರಾಷ್ಟ್ರ ಸಮಿತಿ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಿರ್ಣಯವನ್ನು ಬೆಂಬಲಿಸಿತು. 2014ರಲ್ಲಿ ರಾಜ್ಯ ವಿಭಜನೆಯಾದಾಗಿನಿಂದ ತಾರತಮ್ಯ ಮುಂದುವರೆದಿದೆ ಎಂದು ವಿಧಾನಸಭೆ ಆರೋಪಿಸಿದ್ದು, ಬಜೆಟ್ ತಿರಸ್ಕರಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು.

ಆಂಧ್ರ ಪ್ರದೇಶ ಮರುಸಂಘಟನೆ ಕಾಯ್ದೆಯು ಎರಡೂ ರಾಜ್ಯಗಳ ಸ್ಥಿರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶಿಸಿದೆ ಎಂದಿರುವ ನಿರ್ಣಯ, ತೆಲಂಗಾಣದ ಅಭಿವೃದ್ಧಿಯ ಮೇಲೆ ಆಳವಾದ ಪರಿಣಾಮ ಬೀರಿರುವ ಕಾಯ್ದೆಯಲ್ಲಿನ ಭರವಸೆಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.

ತೆಲಂಗಾಣ ರಚನೆಯಾಗಿ ರಾಜ್ಯದಲ್ಲಿ ಸರ್ಕಾರ ಸ್ಥಾಪನೆಯಾದ ನಂತರ, ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಹಲವಾರು ಬಾರಿ ಪ್ರಧಾನಿ ಮತ್ತು ಇತರ ಕೇಂದ್ರ ಸಚಿವರನ್ನು ಭೇಟಿಯಾಗಿ ವಿವಿಧ ಯೋಜನೆಗಳಿಗೆ ನೆರವು ಮತ್ತು ನ್ಯಾಯಸಮ್ಮತವಾಗಿ ಹಣ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಇದುವರೆಗೆ ರಾಜ್ಯಕ್ಕೆ ನ್ಯಾಯ ಸಿಕ್ಕಿಲ್ಲ ಎಂದು ನಿರ್ಣಯ ದೂರಿದೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ತಮ್ಮ ಭಾಷಣದಲ್ಲಿ “ಕೇಂದ್ರ ಸರ್ಕಾರದ ರಾಷ್ಟ್ರೀಯ ತೆರಿಗೆ ಸಂಗ್ರಹಕ್ಕೆ ರಾಜ್ಯವು ಕೊಡುಗೆಯಾಗಿ ನೀಡುತ್ತಿರುವ ಹಣದಲ್ಲಿ ಪ್ರತಿ ರೂಪಾಯಿಗೆ ಕೇವಲ 47 ಪೈಸೆಗಳನ್ನು ಮಾತ್ರ ವಾಪಸ್ ಪಡೆಯುತ್ತಿದೆ. ಆದರೆ, ಬಿಹಾರವು ಪ್ರತಿ ರೂಪಾಯಿಗೆ 7.26 ರೂ. ವಾಪಸ್ ಪಡೆಯುತ್ತಿದೆ. ಕಳೆದ ಐದು ವರ್ಷಗಳಲ್ಲಿ ತೆಲಂಗಾಣ ರೂ. 3.68 ಲಕ್ಷ ಕೋಟಿಗೆ ಬದಲಾಗಿ ಕೇವಲ 1.48 ಲಕ್ಷ ಕೋಟಿ ರೂ. ಮಾತ್ರ ತೆರಿಗೆ ಹಣ ಪಡೆದಿದೆ” ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ತೆಲಂಗಾಣಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಜುಲೈ 27 ರಂದು ಕೇಂದ್ರ ಸರ್ಕಾರ ನಡೆಸಲಿರುವ ನೀತಿ ಆಯೋಗದ ಸಭೆಯನ್ನು ರಾಜ್ಯ ಸರ್ಕಾರ ಬಹಿಷ್ಕರಿಸಲಿದೆ ಎಂದು ರೇವಂತ್ ರೆಡ್ಡಿ ಘೋಷಿಸಿದ್ದಾರೆ.

ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳನ್ನು ನೀಡಲಾಗಿದೆ. ಈ ಕುರಿತ ವಿವರವಾದ ಲೇಖನ ಕೆಳಗಿದೆ.

ಇದನ್ನೂ ಓದಿ : ಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...