Homeಮುಖಪುಟಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ತೆಲಂಗಾಣ

ಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ತೆಲಂಗಾಣ

- Advertisement -
- Advertisement -

ರಾಜ್ಯಕ್ಕೆ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯವನ್ನು ತೆಲಂಗಾಣ ಸರ್ಕಾರ ಬುಧವಾರ(ಜು.24) ಅಂಗೀಕರಿಸಿದೆ.

ಆಂಧ್ರ ಪ್ರದೇಶ ಮರು ಸಂಘಟನೆ ಅಥವಾ ರಾಜ್ಯ ವಿಭಜನೆ ಕಾಯ್ದೆಯ ಅನ್ವಯ ಎರಡೂ ರಾಜ್ಯಗಳನ್ನು ಸಮಾನ ರೀತಿಯಲ್ಲಿ ನೋಡಬೇಕಿತ್ತು. ಆದರೆ, ಕೇಂದ್ರದ ಎನ್‌ಡಿಎ ಸರ್ಕಾರ ತನ್ನ ಮಿತ್ರ ಪಕ್ಷಗಳನ್ನು ಓಲೈಸಲು ಬಜೆಟ್‌ನಲ್ಲಿ ಆಂಧ್ರಕ್ಕೆ ಹೆಚ್ಚಿನ ಒತ್ತು ಕೊಟ್ಟಿದೆ, ತೆಲಂಗಾಣವನ್ನು ಕಡೆಗಣಿಸಿದೆ ಎಂದು ವಿಧಾನಸಭೆಯಲ್ಲಿ ಬುಧವಾರ ಆಕ್ರೋಶ ವ್ಯಕ್ತವಾಯಿತು.

ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ನಿರ್ಣಯವನ್ನು ಮಂಡಿಸಿದರು. ವಿರೋಧ ಪಕ್ಷಗಳಾದ ಭಾರತ ರಾಷ್ಟ್ರ ಸಮಿತಿ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಿರ್ಣಯವನ್ನು ಬೆಂಬಲಿಸಿತು. 2014ರಲ್ಲಿ ರಾಜ್ಯ ವಿಭಜನೆಯಾದಾಗಿನಿಂದ ತಾರತಮ್ಯ ಮುಂದುವರೆದಿದೆ ಎಂದು ವಿಧಾನಸಭೆ ಆರೋಪಿಸಿದ್ದು, ಬಜೆಟ್ ತಿರಸ್ಕರಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು.

ಆಂಧ್ರ ಪ್ರದೇಶ ಮರುಸಂಘಟನೆ ಕಾಯ್ದೆಯು ಎರಡೂ ರಾಜ್ಯಗಳ ಸ್ಥಿರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶಿಸಿದೆ ಎಂದಿರುವ ನಿರ್ಣಯ, ತೆಲಂಗಾಣದ ಅಭಿವೃದ್ಧಿಯ ಮೇಲೆ ಆಳವಾದ ಪರಿಣಾಮ ಬೀರಿರುವ ಕಾಯ್ದೆಯಲ್ಲಿನ ಭರವಸೆಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.

ತೆಲಂಗಾಣ ರಚನೆಯಾಗಿ ರಾಜ್ಯದಲ್ಲಿ ಸರ್ಕಾರ ಸ್ಥಾಪನೆಯಾದ ನಂತರ, ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಹಲವಾರು ಬಾರಿ ಪ್ರಧಾನಿ ಮತ್ತು ಇತರ ಕೇಂದ್ರ ಸಚಿವರನ್ನು ಭೇಟಿಯಾಗಿ ವಿವಿಧ ಯೋಜನೆಗಳಿಗೆ ನೆರವು ಮತ್ತು ನ್ಯಾಯಸಮ್ಮತವಾಗಿ ಹಣ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಇದುವರೆಗೆ ರಾಜ್ಯಕ್ಕೆ ನ್ಯಾಯ ಸಿಕ್ಕಿಲ್ಲ ಎಂದು ನಿರ್ಣಯ ದೂರಿದೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ತಮ್ಮ ಭಾಷಣದಲ್ಲಿ “ಕೇಂದ್ರ ಸರ್ಕಾರದ ರಾಷ್ಟ್ರೀಯ ತೆರಿಗೆ ಸಂಗ್ರಹಕ್ಕೆ ರಾಜ್ಯವು ಕೊಡುಗೆಯಾಗಿ ನೀಡುತ್ತಿರುವ ಹಣದಲ್ಲಿ ಪ್ರತಿ ರೂಪಾಯಿಗೆ ಕೇವಲ 47 ಪೈಸೆಗಳನ್ನು ಮಾತ್ರ ವಾಪಸ್ ಪಡೆಯುತ್ತಿದೆ. ಆದರೆ, ಬಿಹಾರವು ಪ್ರತಿ ರೂಪಾಯಿಗೆ 7.26 ರೂ. ವಾಪಸ್ ಪಡೆಯುತ್ತಿದೆ. ಕಳೆದ ಐದು ವರ್ಷಗಳಲ್ಲಿ ತೆಲಂಗಾಣ ರೂ. 3.68 ಲಕ್ಷ ಕೋಟಿಗೆ ಬದಲಾಗಿ ಕೇವಲ 1.48 ಲಕ್ಷ ಕೋಟಿ ರೂ. ಮಾತ್ರ ತೆರಿಗೆ ಹಣ ಪಡೆದಿದೆ” ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ತೆಲಂಗಾಣಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಜುಲೈ 27 ರಂದು ಕೇಂದ್ರ ಸರ್ಕಾರ ನಡೆಸಲಿರುವ ನೀತಿ ಆಯೋಗದ ಸಭೆಯನ್ನು ರಾಜ್ಯ ಸರ್ಕಾರ ಬಹಿಷ್ಕರಿಸಲಿದೆ ಎಂದು ರೇವಂತ್ ರೆಡ್ಡಿ ಘೋಷಿಸಿದ್ದಾರೆ.

ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳನ್ನು ನೀಡಲಾಗಿದೆ. ಈ ಕುರಿತ ವಿವರವಾದ ಲೇಖನ ಕೆಳಗಿದೆ.

ಇದನ್ನೂ ಓದಿ : ಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...