Homeಮುಖಪುಟಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಪಕ್ಷಗಳು ಚುನಾವಣಾ ಬಾಂಡ್‌ ಮೂಲಕ ಯಾವ ಕಂಪೆನಿಗಳಿಂದ ಎಷ್ಟು ದೇಣಿಗೆ ಪಡೆದಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಜೆಡಿಎಸ್‌ ಪಕ್ಷವು ಒಟ್ಟು 89.75 ಕೋಟಿ ಚುನಾವಣಾ ಬಾಂಡ್‌ ಪಡೆದಿದ್ದು, ತೆಲಂಗಾಣ ಮೂಲದ ಕಂಪೆನಿಯಿಂದ ಚುನಾವಣಾ ಬಾಂಡ್‌ ಮೂಲಕ ಅತಿ ಹೆಚ್ಚು ದೇಣಿಗೆಯನ್ನು ಪಡೆದಿದೆ ಎನ್ನುವುದು ಬಯಲಾಗಿದೆ.

ಚುನಾವಣಾ ಆಯೋಗ ನಿನ್ನೆ ರಾಜಕೀಯ ಪಕ್ಷಗಳು 2019ರಿಂದ ಸ್ವೀಕರಿಸಿದ ಚುನಾವಣಾ ಬಾಂಡ್‌ಗಳ ಬಗ್ಗೆ ಹೊಸ ಮಾಹಿತಿಯನ್ನು ಸಾರ್ವಜನಿಕಗೊಳಿಸಿದೆ. ಇದರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಅತಿ ಹೆಚ್ಚು ದೇಣಿಗೆಗಳನ್ನು ಪಡೆದಿರುವ ಪಕ್ಷಗಳ ಬಗ್ಗೆ ಕೂಡ ಮಾಹಿತಿ ಲಭ್ಯವಾಗಿದೆ. ಚುನಾವಣಾ ಬಾಂಡ್‌ ಪಡೆದ ನಾಲ್ಕು ಪ್ರಾದೇಶಿಕ ಪಕ್ಷಗಳಲ್ಲಿ ಜೆಡಿಎಸ್‌ ಕೂಡ ಸೇರಿದೆ. ಇದಲ್ಲದೆ ತಮಿಳುನಾಡಿನ ಎಐಎಡಿಎಂಕೆ ಮತ್ತು ಡಿಎಂಕೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಡೆದಿರುವ ಚುನಾವಣಾ ಬಾಂಡ್‌ ಬಗ್ಗೆ ಕೂಡ ಮಾಹಿತಿ ಈ ಮೂಲಕ ಲಭ್ಯವಾಗಿದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL) ನಿಂದ ಅತಿ ಹೆಚ್ಚು ದೇಣಿಗೆ ಪಡೆದ ಜೆಡಿಎಸ್

ಜೆಡಿಎಸ್‌ ಪಕ್ಷವು  89.75 ಕೋಟಿರೂ. ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಯನ್ನು ಪಡೆದಿದ್ದು, ಅದರಲ್ಲಿ ಹೆಚ್ಚಿನ ಅಂದರೆ  50 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL)ನಿಂದ ಪಡೆದಿದೆ. ಕರ್ನಾಟಕದಲ್ಲಿ ಕಂಪನಿಗಳ ಕೊರತೆಯಿಲ್ಲ, ಆದರೆ ಕರ್ನಾಟಕ ಮೂಲದ ಪ್ರಾದೇಶಿಕ ಪಕ್ಷವು ಹೈದರಾಬಾದ್ ಮೂಲದ ಇನ್ಫ್ರಾ ಮೇಜರ್‌ನಿಂದ ದೇಣಿಗೆ ಪಡೆದಿರುವುದು ಅಚ್ಚರಿಯನ್ನು ಮೂಡಿಸಿದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ರಾಷ್ಟ್ರೀಯವಾಗಿ ಚುನಾವಣಾ ಬಾಂಡ್‌ಗಳ ಖರೀದಿದಾರರಲ್ಲಿ ಅಗ್ರ ಎರಡನೇ ಸ್ಥಾನದಲ್ಲಿದೆ. ಕಂಪನಿಯು 2019 ಮತ್ತು 2023ರ ನಡುವೆ 966 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. MEIL ಈಗ TV9 ನೆಟ್‌ವರ್ಕ್‌ನಲ್ಲಿ ಪ್ರಮುಖ ಪಾಲನ್ನು ಹೊಂದಿದೆ.

MEIL ನಿಂದ JD(S) ಗೆ ಮೊದಲ ಬಾಂಡ್‌ನ್ನು ಜನವರಿ 2019ರಲ್ಲಿ ನೀಡಲಾಗಿದೆ. ಉಳಿದ 40 ಕೋಟಿ ರೂ.ಗಳು ಏಪ್ರಿಲ್ 18, 2023ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಮಧ್ಯದ ವೇಳೆ ಜೆಡಿಎಸ್‌ಗೆ ದೊರೆತಿದೆ. ಏಪ್ರಿಲ್ 21ರಂದು ತೆಲಂಗಾಣದಲ್ಲಿ ಆಡಳಿತ ಪಕ್ಷವಾಗಿದ್ದ ಕೆ. ಚಂದ್ರಶೇಖರ್ ರಾವ್ ಅವರ ಬಿಆರ್‌ಎಸ್‌ ಪಕ್ಷ ಕರ್ನಾಟಕ ಚುನಾವಣೆಯಲ್ಲಿ ಜೆಡಿಎಸ್‌ನ್ನು ಬೆಂಬಲಿಸುವುದಾಗಿ ಸಾರ್ವಜನಿಕವಾಗಿ ಘೋಷಿಸಿತ್ತು ಮತ್ತು ರಾಜ್ಯದಲ್ಲಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿತ್ತು. ಅಂತಿಮವಾಗಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ್ನು ಸೋಲಿಸಿ ಕಾಂಗ್ರೆಸ್ ಗೆದ್ದಿದೆ. ಆ ಬಳಿಕದ ಬೆಳವಣಿಗೆಯಲ್ಲಿ ಜೆಡಿಎಸ್ ಮೋದಿ ಪಾಳಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಈಗ ಎನ್‌ಡಿಎ ಭಾಗವಾಗಿದ್ದಾರೆ. ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ.

ಜೆಡಿಎಸ್ ಸಲ್ಲಿಸಿದ ಮಾಹಿತಿ ಪ್ರಕಾರ ಪಕ್ಷವು ಬೈಕಾನ್ ಲಿಮಿಟೆಡ್‌ನಿಂದ 1 ಕೋಟಿ ರೂ. ಪಡೆದಿದೆ ಎಂದು ಹೇಳುತ್ತದೆ. ಆದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ವಾರ ಹೊರಡಿಸಿದ ಬಾಂಡ್-ಖರೀದಿದಾರರ ಪಟ್ಟಿಯಲ್ಲಿ ಈ ಬಗ್ಗೆ ಮಾಹಿತಿ ಕಂಡು ಬಂದಿಲ್ಲ. ಪಕ್ಷವು ಇನ್ಫೋಸಿಸ್, ಎಂಬಸಿ ಗ್ರೂಪ್ ಆಫ್ ಕಂಪನಿಗಳು, ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್, ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈ. ಲಿಮಿಟೆಡ್., ಶಂಕರನಾರಾಯಣ ಕನ್ಸ್ಟ್ರಕ್ಷನ್ಸ್ (ಪಿ) ಲಿಮಿಟೆಡ್, JSW ಸ್ಟೀಲ್ ಲಿಮಿಟೆಡ್, ಅಮರ್ ರಾಜ್ ಗ್ರೂಪ್ಸ್ ಮತ್ತು ಆದಿತ್ಯ ಬಿರ್ಲಾ ಗ್ರೂಪ್‌ನಿಂದ ಕೂಡ ದೇಣಿಗೆಯನ್ನು ಪಡೆದುಕೊಂಡಿದೆ.

2018ರಲ್ಲಿ ಜೆಡಿಎಸ್ ತನ್ನ ಹೆಚ್ಚಿನ ಚುನಾವಣಾ ಬಾಂಡ್ ಹಣವನ್ನು ಅಂದರೆ 22 ಕೋಟಿ ರೂ. ಎಂಬಸ್ಸಿ ಗ್ರೂಪ್ ಆಫ್ ಕಂಪೆನೀಸ್ ಪ್ರೈವೇಟ್‌ನಿಂದ ಪಡೆದುಕೊಂಡಿದೆ. ಇದರ ನೋಂದಾಯಿತ ಕಚೇರಿ ಬೆಂಗಳೂರಿನಲ್ಲಿದೆ. ಇದನ್ನು 1993ರಲ್ಲಿ ಸ್ಥಾಪಿಸಲಾಗಿತ್ತು. ಇದು ಭಾರತದ ಅತಿದೊಡ್ಡ ರಿಯಲ್ ಎಸ್ಟೇಟ್ ಸಂಘಟಿತ ಸಂಸ್ಥೆಗಳಲ್ಲಿ ಒಂದಾಗಿದೆ.

ಏಪ್ರಿಲ್ 17, 2018ರಂದು ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಪ್ರೈವೇಟ್‌ 25 ಲಕ್ಷ ರೂ.ವನ್ನು ಜೆಡಿಎಸ್‌ಗೆ ಚುನಾವಣಾ ಬಾಂಡ್‌ ಮೂಲಕ ನೀಡಿದೆ. ಮೇ 14, 2018ರಂದು ಬೈಕಾನ್ ಲಿಮಿಟೆಡ್ 50 ಲಕ್ಷ ರೂ.ವನ್ನು ಬಾಂಡ್ ಮೂಲಕ ನೀಡಿದೆ. ಮಾರ್ಚ್ 20, 2018ರಂದು ಜೆಡಿಎಸ್‌ ಪಕ್ಷವು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್‌ನಿಂದ 1 ಕೋಟಿ ರೂ. ಚುನಾವಣಾ ಬಾಂಡ್‌ ಮೂಲಕ ಪಡೆದುಕೊಂಡಿದೆ.

2019ರ ಸಾರ್ವತ್ರಿಕ ಚುನಾವಣೆಗಳ ಮೊದಲು ಮತ್ತು ಸಮಯದಲ್ಲಿ ಜೆಡಿಎಸ್ ಒಟ್ಟಾರೆಯಾಗಿ 25 ಕೋಟಿ ರೂ. ಚುನಾವಣಾ ಬಾಂಡ್‌ಗಳನ್ನು ಪಡೆದಿದೆ. ಜನವರಿ 9, 2019ರಂದು ಪಕ್ಷವು ,ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈವೇಟ್‌ ಲಿಮಿಟೆಡ್‌ನಿಂದ 1.5 ಕೋಟಿ ರೂ. ಚುನಾವಣಾ ಬಾಂಡ್‌ ಪಡೆದಿದೆ. ಮೆಘಾ ಇಂಜಿನಿಯರಿಂಗ್ ಮತ್ತು ಕನ್ಸ್ಟ್ರಕ್ಷನ್ಸ್ ಪ್ರೈ.ಲಿ.ಲಿಮಿಟೆಡ್ 10 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದೆ. ಮಾರ್ಚ್ 20, 2019ರಂದು ಶಂಕರನಾರಾಯಣ ಕನ್‌ಸ್ಟ್ರಕ್ಷನ್ಸ್ (ಪಿ) ಲಿಮಿಟೆಡ್‌ನಿಂದ 5 ಕೋಟಿ ರೂಪಾಯಿಗಳನ್ನು ಜೆಡಿಎಸ್‌ ಪಡೆದುಕೊಂಡಿದೆ. ಅದೇ ದಿನ ಪಕ್ಷವು ಒದಗಿಸಿದ ಮಾಹಿತಿಯಲ್ಲಿ ಬೈಕಾನ್ ಲಿಮಿಟೆಡ್‌ನಿಂದ ಮತ್ತೆ 1 ಕೋಟಿ ರೂ.ವನ್ನು ಜೆಡಿಎಸ್‌ ಚುನಾವಣಾ ಬಾಂಡ್‌ ಮೂಲಕ ಪಡೆದುಕೊಂಡಿದೆ. ಏಪ್ರಿಲ್ 6, 2019ರಂದು ಜೆಡಿಎಸ್ JSW ಸ್ಟೀಲ್ ಲಿಮಿಟೆಡ್‌ನಿಂದ 3.5 ಕೋಟಿ ರೂ.ವನ್ನು ಚುನಾವಣಾ ಬಾಂಡ್‌ ಮೂಲಕ ಪಡೆದಿದೆ ಎನ್ನುವುದು ಬಯಲಾಗಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...