Homeಮುಖಪುಟಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಪಕ್ಷಗಳು ಚುನಾವಣಾ ಬಾಂಡ್‌ ಮೂಲಕ ಯಾವ ಕಂಪೆನಿಗಳಿಂದ ಎಷ್ಟು ದೇಣಿಗೆ ಪಡೆದಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಜೆಡಿಎಸ್‌ ಪಕ್ಷವು ಒಟ್ಟು 89.75 ಕೋಟಿ ಚುನಾವಣಾ ಬಾಂಡ್‌ ಪಡೆದಿದ್ದು, ತೆಲಂಗಾಣ ಮೂಲದ ಕಂಪೆನಿಯಿಂದ ಚುನಾವಣಾ ಬಾಂಡ್‌ ಮೂಲಕ ಅತಿ ಹೆಚ್ಚು ದೇಣಿಗೆಯನ್ನು ಪಡೆದಿದೆ ಎನ್ನುವುದು ಬಯಲಾಗಿದೆ.

ಚುನಾವಣಾ ಆಯೋಗ ನಿನ್ನೆ ರಾಜಕೀಯ ಪಕ್ಷಗಳು 2019ರಿಂದ ಸ್ವೀಕರಿಸಿದ ಚುನಾವಣಾ ಬಾಂಡ್‌ಗಳ ಬಗ್ಗೆ ಹೊಸ ಮಾಹಿತಿಯನ್ನು ಸಾರ್ವಜನಿಕಗೊಳಿಸಿದೆ. ಇದರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಅತಿ ಹೆಚ್ಚು ದೇಣಿಗೆಗಳನ್ನು ಪಡೆದಿರುವ ಪಕ್ಷಗಳ ಬಗ್ಗೆ ಕೂಡ ಮಾಹಿತಿ ಲಭ್ಯವಾಗಿದೆ. ಚುನಾವಣಾ ಬಾಂಡ್‌ ಪಡೆದ ನಾಲ್ಕು ಪ್ರಾದೇಶಿಕ ಪಕ್ಷಗಳಲ್ಲಿ ಜೆಡಿಎಸ್‌ ಕೂಡ ಸೇರಿದೆ. ಇದಲ್ಲದೆ ತಮಿಳುನಾಡಿನ ಎಐಎಡಿಎಂಕೆ ಮತ್ತು ಡಿಎಂಕೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಡೆದಿರುವ ಚುನಾವಣಾ ಬಾಂಡ್‌ ಬಗ್ಗೆ ಕೂಡ ಮಾಹಿತಿ ಈ ಮೂಲಕ ಲಭ್ಯವಾಗಿದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL) ನಿಂದ ಅತಿ ಹೆಚ್ಚು ದೇಣಿಗೆ ಪಡೆದ ಜೆಡಿಎಸ್

ಜೆಡಿಎಸ್‌ ಪಕ್ಷವು  89.75 ಕೋಟಿರೂ. ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಯನ್ನು ಪಡೆದಿದ್ದು, ಅದರಲ್ಲಿ ಹೆಚ್ಚಿನ ಅಂದರೆ  50 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL)ನಿಂದ ಪಡೆದಿದೆ. ಕರ್ನಾಟಕದಲ್ಲಿ ಕಂಪನಿಗಳ ಕೊರತೆಯಿಲ್ಲ, ಆದರೆ ಕರ್ನಾಟಕ ಮೂಲದ ಪ್ರಾದೇಶಿಕ ಪಕ್ಷವು ಹೈದರಾಬಾದ್ ಮೂಲದ ಇನ್ಫ್ರಾ ಮೇಜರ್‌ನಿಂದ ದೇಣಿಗೆ ಪಡೆದಿರುವುದು ಅಚ್ಚರಿಯನ್ನು ಮೂಡಿಸಿದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ರಾಷ್ಟ್ರೀಯವಾಗಿ ಚುನಾವಣಾ ಬಾಂಡ್‌ಗಳ ಖರೀದಿದಾರರಲ್ಲಿ ಅಗ್ರ ಎರಡನೇ ಸ್ಥಾನದಲ್ಲಿದೆ. ಕಂಪನಿಯು 2019 ಮತ್ತು 2023ರ ನಡುವೆ 966 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. MEIL ಈಗ TV9 ನೆಟ್‌ವರ್ಕ್‌ನಲ್ಲಿ ಪ್ರಮುಖ ಪಾಲನ್ನು ಹೊಂದಿದೆ.

MEIL ನಿಂದ JD(S) ಗೆ ಮೊದಲ ಬಾಂಡ್‌ನ್ನು ಜನವರಿ 2019ರಲ್ಲಿ ನೀಡಲಾಗಿದೆ. ಉಳಿದ 40 ಕೋಟಿ ರೂ.ಗಳು ಏಪ್ರಿಲ್ 18, 2023ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಮಧ್ಯದ ವೇಳೆ ಜೆಡಿಎಸ್‌ಗೆ ದೊರೆತಿದೆ. ಏಪ್ರಿಲ್ 21ರಂದು ತೆಲಂಗಾಣದಲ್ಲಿ ಆಡಳಿತ ಪಕ್ಷವಾಗಿದ್ದ ಕೆ. ಚಂದ್ರಶೇಖರ್ ರಾವ್ ಅವರ ಬಿಆರ್‌ಎಸ್‌ ಪಕ್ಷ ಕರ್ನಾಟಕ ಚುನಾವಣೆಯಲ್ಲಿ ಜೆಡಿಎಸ್‌ನ್ನು ಬೆಂಬಲಿಸುವುದಾಗಿ ಸಾರ್ವಜನಿಕವಾಗಿ ಘೋಷಿಸಿತ್ತು ಮತ್ತು ರಾಜ್ಯದಲ್ಲಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿತ್ತು. ಅಂತಿಮವಾಗಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ್ನು ಸೋಲಿಸಿ ಕಾಂಗ್ರೆಸ್ ಗೆದ್ದಿದೆ. ಆ ಬಳಿಕದ ಬೆಳವಣಿಗೆಯಲ್ಲಿ ಜೆಡಿಎಸ್ ಮೋದಿ ಪಾಳಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಈಗ ಎನ್‌ಡಿಎ ಭಾಗವಾಗಿದ್ದಾರೆ. ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ.

ಜೆಡಿಎಸ್ ಸಲ್ಲಿಸಿದ ಮಾಹಿತಿ ಪ್ರಕಾರ ಪಕ್ಷವು ಬೈಕಾನ್ ಲಿಮಿಟೆಡ್‌ನಿಂದ 1 ಕೋಟಿ ರೂ. ಪಡೆದಿದೆ ಎಂದು ಹೇಳುತ್ತದೆ. ಆದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ವಾರ ಹೊರಡಿಸಿದ ಬಾಂಡ್-ಖರೀದಿದಾರರ ಪಟ್ಟಿಯಲ್ಲಿ ಈ ಬಗ್ಗೆ ಮಾಹಿತಿ ಕಂಡು ಬಂದಿಲ್ಲ. ಪಕ್ಷವು ಇನ್ಫೋಸಿಸ್, ಎಂಬಸಿ ಗ್ರೂಪ್ ಆಫ್ ಕಂಪನಿಗಳು, ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್, ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈ. ಲಿಮಿಟೆಡ್., ಶಂಕರನಾರಾಯಣ ಕನ್ಸ್ಟ್ರಕ್ಷನ್ಸ್ (ಪಿ) ಲಿಮಿಟೆಡ್, JSW ಸ್ಟೀಲ್ ಲಿಮಿಟೆಡ್, ಅಮರ್ ರಾಜ್ ಗ್ರೂಪ್ಸ್ ಮತ್ತು ಆದಿತ್ಯ ಬಿರ್ಲಾ ಗ್ರೂಪ್‌ನಿಂದ ಕೂಡ ದೇಣಿಗೆಯನ್ನು ಪಡೆದುಕೊಂಡಿದೆ.

2018ರಲ್ಲಿ ಜೆಡಿಎಸ್ ತನ್ನ ಹೆಚ್ಚಿನ ಚುನಾವಣಾ ಬಾಂಡ್ ಹಣವನ್ನು ಅಂದರೆ 22 ಕೋಟಿ ರೂ. ಎಂಬಸ್ಸಿ ಗ್ರೂಪ್ ಆಫ್ ಕಂಪೆನೀಸ್ ಪ್ರೈವೇಟ್‌ನಿಂದ ಪಡೆದುಕೊಂಡಿದೆ. ಇದರ ನೋಂದಾಯಿತ ಕಚೇರಿ ಬೆಂಗಳೂರಿನಲ್ಲಿದೆ. ಇದನ್ನು 1993ರಲ್ಲಿ ಸ್ಥಾಪಿಸಲಾಗಿತ್ತು. ಇದು ಭಾರತದ ಅತಿದೊಡ್ಡ ರಿಯಲ್ ಎಸ್ಟೇಟ್ ಸಂಘಟಿತ ಸಂಸ್ಥೆಗಳಲ್ಲಿ ಒಂದಾಗಿದೆ.

ಏಪ್ರಿಲ್ 17, 2018ರಂದು ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಪ್ರೈವೇಟ್‌ 25 ಲಕ್ಷ ರೂ.ವನ್ನು ಜೆಡಿಎಸ್‌ಗೆ ಚುನಾವಣಾ ಬಾಂಡ್‌ ಮೂಲಕ ನೀಡಿದೆ. ಮೇ 14, 2018ರಂದು ಬೈಕಾನ್ ಲಿಮಿಟೆಡ್ 50 ಲಕ್ಷ ರೂ.ವನ್ನು ಬಾಂಡ್ ಮೂಲಕ ನೀಡಿದೆ. ಮಾರ್ಚ್ 20, 2018ರಂದು ಜೆಡಿಎಸ್‌ ಪಕ್ಷವು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್‌ನಿಂದ 1 ಕೋಟಿ ರೂ. ಚುನಾವಣಾ ಬಾಂಡ್‌ ಮೂಲಕ ಪಡೆದುಕೊಂಡಿದೆ.

2019ರ ಸಾರ್ವತ್ರಿಕ ಚುನಾವಣೆಗಳ ಮೊದಲು ಮತ್ತು ಸಮಯದಲ್ಲಿ ಜೆಡಿಎಸ್ ಒಟ್ಟಾರೆಯಾಗಿ 25 ಕೋಟಿ ರೂ. ಚುನಾವಣಾ ಬಾಂಡ್‌ಗಳನ್ನು ಪಡೆದಿದೆ. ಜನವರಿ 9, 2019ರಂದು ಪಕ್ಷವು ,ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈವೇಟ್‌ ಲಿಮಿಟೆಡ್‌ನಿಂದ 1.5 ಕೋಟಿ ರೂ. ಚುನಾವಣಾ ಬಾಂಡ್‌ ಪಡೆದಿದೆ. ಮೆಘಾ ಇಂಜಿನಿಯರಿಂಗ್ ಮತ್ತು ಕನ್ಸ್ಟ್ರಕ್ಷನ್ಸ್ ಪ್ರೈ.ಲಿ.ಲಿಮಿಟೆಡ್ 10 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದೆ. ಮಾರ್ಚ್ 20, 2019ರಂದು ಶಂಕರನಾರಾಯಣ ಕನ್‌ಸ್ಟ್ರಕ್ಷನ್ಸ್ (ಪಿ) ಲಿಮಿಟೆಡ್‌ನಿಂದ 5 ಕೋಟಿ ರೂಪಾಯಿಗಳನ್ನು ಜೆಡಿಎಸ್‌ ಪಡೆದುಕೊಂಡಿದೆ. ಅದೇ ದಿನ ಪಕ್ಷವು ಒದಗಿಸಿದ ಮಾಹಿತಿಯಲ್ಲಿ ಬೈಕಾನ್ ಲಿಮಿಟೆಡ್‌ನಿಂದ ಮತ್ತೆ 1 ಕೋಟಿ ರೂ.ವನ್ನು ಜೆಡಿಎಸ್‌ ಚುನಾವಣಾ ಬಾಂಡ್‌ ಮೂಲಕ ಪಡೆದುಕೊಂಡಿದೆ. ಏಪ್ರಿಲ್ 6, 2019ರಂದು ಜೆಡಿಎಸ್ JSW ಸ್ಟೀಲ್ ಲಿಮಿಟೆಡ್‌ನಿಂದ 3.5 ಕೋಟಿ ರೂ.ವನ್ನು ಚುನಾವಣಾ ಬಾಂಡ್‌ ಮೂಲಕ ಪಡೆದಿದೆ ಎನ್ನುವುದು ಬಯಲಾಗಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...