Homeಮುಖಪುಟಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಪಕ್ಷಗಳು ಚುನಾವಣಾ ಬಾಂಡ್‌ ಮೂಲಕ ಯಾವ ಕಂಪೆನಿಗಳಿಂದ ಎಷ್ಟು ದೇಣಿಗೆ ಪಡೆದಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಜೆಡಿಎಸ್‌ ಪಕ್ಷವು ಒಟ್ಟು 89.75 ಕೋಟಿ ಚುನಾವಣಾ ಬಾಂಡ್‌ ಪಡೆದಿದ್ದು, ತೆಲಂಗಾಣ ಮೂಲದ ಕಂಪೆನಿಯಿಂದ ಚುನಾವಣಾ ಬಾಂಡ್‌ ಮೂಲಕ ಅತಿ ಹೆಚ್ಚು ದೇಣಿಗೆಯನ್ನು ಪಡೆದಿದೆ ಎನ್ನುವುದು ಬಯಲಾಗಿದೆ.

ಚುನಾವಣಾ ಆಯೋಗ ನಿನ್ನೆ ರಾಜಕೀಯ ಪಕ್ಷಗಳು 2019ರಿಂದ ಸ್ವೀಕರಿಸಿದ ಚುನಾವಣಾ ಬಾಂಡ್‌ಗಳ ಬಗ್ಗೆ ಹೊಸ ಮಾಹಿತಿಯನ್ನು ಸಾರ್ವಜನಿಕಗೊಳಿಸಿದೆ. ಇದರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಅತಿ ಹೆಚ್ಚು ದೇಣಿಗೆಗಳನ್ನು ಪಡೆದಿರುವ ಪಕ್ಷಗಳ ಬಗ್ಗೆ ಕೂಡ ಮಾಹಿತಿ ಲಭ್ಯವಾಗಿದೆ. ಚುನಾವಣಾ ಬಾಂಡ್‌ ಪಡೆದ ನಾಲ್ಕು ಪ್ರಾದೇಶಿಕ ಪಕ್ಷಗಳಲ್ಲಿ ಜೆಡಿಎಸ್‌ ಕೂಡ ಸೇರಿದೆ. ಇದಲ್ಲದೆ ತಮಿಳುನಾಡಿನ ಎಐಎಡಿಎಂಕೆ ಮತ್ತು ಡಿಎಂಕೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಡೆದಿರುವ ಚುನಾವಣಾ ಬಾಂಡ್‌ ಬಗ್ಗೆ ಕೂಡ ಮಾಹಿತಿ ಈ ಮೂಲಕ ಲಭ್ಯವಾಗಿದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL) ನಿಂದ ಅತಿ ಹೆಚ್ಚು ದೇಣಿಗೆ ಪಡೆದ ಜೆಡಿಎಸ್

ಜೆಡಿಎಸ್‌ ಪಕ್ಷವು  89.75 ಕೋಟಿರೂ. ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಯನ್ನು ಪಡೆದಿದ್ದು, ಅದರಲ್ಲಿ ಹೆಚ್ಚಿನ ಅಂದರೆ  50 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL)ನಿಂದ ಪಡೆದಿದೆ. ಕರ್ನಾಟಕದಲ್ಲಿ ಕಂಪನಿಗಳ ಕೊರತೆಯಿಲ್ಲ, ಆದರೆ ಕರ್ನಾಟಕ ಮೂಲದ ಪ್ರಾದೇಶಿಕ ಪಕ್ಷವು ಹೈದರಾಬಾದ್ ಮೂಲದ ಇನ್ಫ್ರಾ ಮೇಜರ್‌ನಿಂದ ದೇಣಿಗೆ ಪಡೆದಿರುವುದು ಅಚ್ಚರಿಯನ್ನು ಮೂಡಿಸಿದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ರಾಷ್ಟ್ರೀಯವಾಗಿ ಚುನಾವಣಾ ಬಾಂಡ್‌ಗಳ ಖರೀದಿದಾರರಲ್ಲಿ ಅಗ್ರ ಎರಡನೇ ಸ್ಥಾನದಲ್ಲಿದೆ. ಕಂಪನಿಯು 2019 ಮತ್ತು 2023ರ ನಡುವೆ 966 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. MEIL ಈಗ TV9 ನೆಟ್‌ವರ್ಕ್‌ನಲ್ಲಿ ಪ್ರಮುಖ ಪಾಲನ್ನು ಹೊಂದಿದೆ.

MEIL ನಿಂದ JD(S) ಗೆ ಮೊದಲ ಬಾಂಡ್‌ನ್ನು ಜನವರಿ 2019ರಲ್ಲಿ ನೀಡಲಾಗಿದೆ. ಉಳಿದ 40 ಕೋಟಿ ರೂ.ಗಳು ಏಪ್ರಿಲ್ 18, 2023ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಮಧ್ಯದ ವೇಳೆ ಜೆಡಿಎಸ್‌ಗೆ ದೊರೆತಿದೆ. ಏಪ್ರಿಲ್ 21ರಂದು ತೆಲಂಗಾಣದಲ್ಲಿ ಆಡಳಿತ ಪಕ್ಷವಾಗಿದ್ದ ಕೆ. ಚಂದ್ರಶೇಖರ್ ರಾವ್ ಅವರ ಬಿಆರ್‌ಎಸ್‌ ಪಕ್ಷ ಕರ್ನಾಟಕ ಚುನಾವಣೆಯಲ್ಲಿ ಜೆಡಿಎಸ್‌ನ್ನು ಬೆಂಬಲಿಸುವುದಾಗಿ ಸಾರ್ವಜನಿಕವಾಗಿ ಘೋಷಿಸಿತ್ತು ಮತ್ತು ರಾಜ್ಯದಲ್ಲಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿತ್ತು. ಅಂತಿಮವಾಗಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ್ನು ಸೋಲಿಸಿ ಕಾಂಗ್ರೆಸ್ ಗೆದ್ದಿದೆ. ಆ ಬಳಿಕದ ಬೆಳವಣಿಗೆಯಲ್ಲಿ ಜೆಡಿಎಸ್ ಮೋದಿ ಪಾಳಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಈಗ ಎನ್‌ಡಿಎ ಭಾಗವಾಗಿದ್ದಾರೆ. ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ.

ಜೆಡಿಎಸ್ ಸಲ್ಲಿಸಿದ ಮಾಹಿತಿ ಪ್ರಕಾರ ಪಕ್ಷವು ಬೈಕಾನ್ ಲಿಮಿಟೆಡ್‌ನಿಂದ 1 ಕೋಟಿ ರೂ. ಪಡೆದಿದೆ ಎಂದು ಹೇಳುತ್ತದೆ. ಆದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ವಾರ ಹೊರಡಿಸಿದ ಬಾಂಡ್-ಖರೀದಿದಾರರ ಪಟ್ಟಿಯಲ್ಲಿ ಈ ಬಗ್ಗೆ ಮಾಹಿತಿ ಕಂಡು ಬಂದಿಲ್ಲ. ಪಕ್ಷವು ಇನ್ಫೋಸಿಸ್, ಎಂಬಸಿ ಗ್ರೂಪ್ ಆಫ್ ಕಂಪನಿಗಳು, ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್, ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈ. ಲಿಮಿಟೆಡ್., ಶಂಕರನಾರಾಯಣ ಕನ್ಸ್ಟ್ರಕ್ಷನ್ಸ್ (ಪಿ) ಲಿಮಿಟೆಡ್, JSW ಸ್ಟೀಲ್ ಲಿಮಿಟೆಡ್, ಅಮರ್ ರಾಜ್ ಗ್ರೂಪ್ಸ್ ಮತ್ತು ಆದಿತ್ಯ ಬಿರ್ಲಾ ಗ್ರೂಪ್‌ನಿಂದ ಕೂಡ ದೇಣಿಗೆಯನ್ನು ಪಡೆದುಕೊಂಡಿದೆ.

2018ರಲ್ಲಿ ಜೆಡಿಎಸ್ ತನ್ನ ಹೆಚ್ಚಿನ ಚುನಾವಣಾ ಬಾಂಡ್ ಹಣವನ್ನು ಅಂದರೆ 22 ಕೋಟಿ ರೂ. ಎಂಬಸ್ಸಿ ಗ್ರೂಪ್ ಆಫ್ ಕಂಪೆನೀಸ್ ಪ್ರೈವೇಟ್‌ನಿಂದ ಪಡೆದುಕೊಂಡಿದೆ. ಇದರ ನೋಂದಾಯಿತ ಕಚೇರಿ ಬೆಂಗಳೂರಿನಲ್ಲಿದೆ. ಇದನ್ನು 1993ರಲ್ಲಿ ಸ್ಥಾಪಿಸಲಾಗಿತ್ತು. ಇದು ಭಾರತದ ಅತಿದೊಡ್ಡ ರಿಯಲ್ ಎಸ್ಟೇಟ್ ಸಂಘಟಿತ ಸಂಸ್ಥೆಗಳಲ್ಲಿ ಒಂದಾಗಿದೆ.

ಏಪ್ರಿಲ್ 17, 2018ರಂದು ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಪ್ರೈವೇಟ್‌ 25 ಲಕ್ಷ ರೂ.ವನ್ನು ಜೆಡಿಎಸ್‌ಗೆ ಚುನಾವಣಾ ಬಾಂಡ್‌ ಮೂಲಕ ನೀಡಿದೆ. ಮೇ 14, 2018ರಂದು ಬೈಕಾನ್ ಲಿಮಿಟೆಡ್ 50 ಲಕ್ಷ ರೂ.ವನ್ನು ಬಾಂಡ್ ಮೂಲಕ ನೀಡಿದೆ. ಮಾರ್ಚ್ 20, 2018ರಂದು ಜೆಡಿಎಸ್‌ ಪಕ್ಷವು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್‌ನಿಂದ 1 ಕೋಟಿ ರೂ. ಚುನಾವಣಾ ಬಾಂಡ್‌ ಮೂಲಕ ಪಡೆದುಕೊಂಡಿದೆ.

2019ರ ಸಾರ್ವತ್ರಿಕ ಚುನಾವಣೆಗಳ ಮೊದಲು ಮತ್ತು ಸಮಯದಲ್ಲಿ ಜೆಡಿಎಸ್ ಒಟ್ಟಾರೆಯಾಗಿ 25 ಕೋಟಿ ರೂ. ಚುನಾವಣಾ ಬಾಂಡ್‌ಗಳನ್ನು ಪಡೆದಿದೆ. ಜನವರಿ 9, 2019ರಂದು ಪಕ್ಷವು ,ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈವೇಟ್‌ ಲಿಮಿಟೆಡ್‌ನಿಂದ 1.5 ಕೋಟಿ ರೂ. ಚುನಾವಣಾ ಬಾಂಡ್‌ ಪಡೆದಿದೆ. ಮೆಘಾ ಇಂಜಿನಿಯರಿಂಗ್ ಮತ್ತು ಕನ್ಸ್ಟ್ರಕ್ಷನ್ಸ್ ಪ್ರೈ.ಲಿ.ಲಿಮಿಟೆಡ್ 10 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದೆ. ಮಾರ್ಚ್ 20, 2019ರಂದು ಶಂಕರನಾರಾಯಣ ಕನ್‌ಸ್ಟ್ರಕ್ಷನ್ಸ್ (ಪಿ) ಲಿಮಿಟೆಡ್‌ನಿಂದ 5 ಕೋಟಿ ರೂಪಾಯಿಗಳನ್ನು ಜೆಡಿಎಸ್‌ ಪಡೆದುಕೊಂಡಿದೆ. ಅದೇ ದಿನ ಪಕ್ಷವು ಒದಗಿಸಿದ ಮಾಹಿತಿಯಲ್ಲಿ ಬೈಕಾನ್ ಲಿಮಿಟೆಡ್‌ನಿಂದ ಮತ್ತೆ 1 ಕೋಟಿ ರೂ.ವನ್ನು ಜೆಡಿಎಸ್‌ ಚುನಾವಣಾ ಬಾಂಡ್‌ ಮೂಲಕ ಪಡೆದುಕೊಂಡಿದೆ. ಏಪ್ರಿಲ್ 6, 2019ರಂದು ಜೆಡಿಎಸ್ JSW ಸ್ಟೀಲ್ ಲಿಮಿಟೆಡ್‌ನಿಂದ 3.5 ಕೋಟಿ ರೂ.ವನ್ನು ಚುನಾವಣಾ ಬಾಂಡ್‌ ಮೂಲಕ ಪಡೆದಿದೆ ಎನ್ನುವುದು ಬಯಲಾಗಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...