Homeಮುಖಪುಟತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ಒಂದು ದಿನದ ಹಿಂದೆ ಕೂಡಾ ಬೇರೊಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ, ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಇದಾಗಿ ಒಂದೇ ದಿನದಲ್ಲಿ ಭಗೀರಥ ಮತ್ತು ಆತನ ಗೆಳೆಯರ ಗುಂಪು ಮತ್ತೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಮತ್ತೊಂದು ವಿಡಿಯೋ ಕೂಡಾ ವೈರಲ್ ಆಗಿದೆ.

“ಸಂತ್ರಸ್ತ ಬೇರೆಯೆ ಮತ್ತೊಬ್ಬ ವಿದ್ಯಾರ್ಥಿ ಎಂದು ತೋರುತ್ತಿದೆ. ತನಿಖೆ ನಡೆಯುತ್ತಿದೆ. ನಾವು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಜಿ. ಸಂದೀಪ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರಿಂದ ಘಟನೆಯ ವೀಡಿಯೊವನ್ನು ಪಡೆದಿದ್ದೇವೆ. ಆದರೆ ಸಂತ್ರಸ್ತ ವಿದ್ಯಾರ್ಥಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಮಹೀಂದ್ರಾ ವಿಶ್ವವಿದ್ಯಾಲಯದ ಪ್ರೊಫೆಸರ್ ಸುರೇಶ್ ರಕ್ಷಿತ್ ಅವರು ಹೇಳಿದ್ದಾರೆ.

“ಪ್ರಸ್ತುತ ರಜೆ ಇರುವುದರಿಂದ ಕಾಲೇಜು ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಯ ವಿವರಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ ನಾವು ಹೊಸ ವೀಡಿಯೊದ ಬಗ್ಗೆ ಗಮನ ಹರಿಸಿದ್ದು, ಭಗೀರಥ ವಿರುದ್ಧ ಅಗತ್ಯ ಕ್ರಮಕ್ಕಾಗಿ ಶಿಸ್ತು ಸಮಿತಿಯೊಂದಿಗೆ ಮಾತನಾಡಿದ್ದೇವೆ” ಎಂದು ಪ್ರೊಫೆಸರ್ ಸುರೇಶ್ ಹೇಳಿದ್ದಾರೆ.

ಹೊಸದಾಗಿ ವೈರಲ್ ಆಗುತ್ತಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿ ತೆಲಂಗಾಣ ಮುಖ್ಯಸ್ಥ ಆರ್‌.ಎಸ್‌. ಪ್ರವೀಣ್‌ಕುಮಾರ್‌, ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಬಿಜೆಪಿ ಜೊತೆ ‘ನೆರಳಿನ ಯುದ್ದ’ ಮಾಡುವ ಬದಲು ಭಗೀರಥನನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ.

ಶ್ರೀರಾಮ್ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ, ಮಂಗಳವಾರ ಕಾಲೇಜು ಆಡಳಿತ ಮಂಡಳಿಯ ದೂರಿನ ಮೇರೆಗೆ ದುಂಡಿಗಲ್ ಪೊಲೀಸರು ಬಂಡಿ ಸಂಜಯ್ ಅವರ ಮಗ ಬಂಡಿ ಭಗೀರಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ 341, 323, 504 ಮತ್ತು ತೆಲಂಗಾಣ ರಾಜ್ಯ ರ್‍ಯಾಗಿಂಗ್‌ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ, ಸಂತ್ರಸ್ತ ಶ್ರೀರಾಮ್, ತನಗೆ ಥಳಿಸಿದ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

“ನಾನು ಭಗೀರಥನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದೆ. ನಾನು ಅವಳಿಗೆ ಕರೆ ಮಾಡಿ, ಪ್ರೇಮ ನಿವೇದನೆಯ ಸಂದೇಶ ಕಳುಹಿಸಿದೆ. ವಿಷಯ ತಿಳಿದ ಭಗೀರಥ ನನ್ನನ್ನು ನೋಡಲು ಬಂದಿದ್ದು ನಮ್ಮಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾದದ ನಂತರ, ಅವರು ನನಗೆ ಕಪಾಳಮೋಕ್ಷ ಮಾಡಿದರು” ಎಂದು ಹೇಳಿದ್ದಾರೆ.

“ಇದು ಹಿಂದಿನ ಘಟನೆಯಾಗಿದ್ದು, ನಮ್ಮ ನಡುವೆ ಈಗ ಯಾವುದೇ ಸಮಸ್ಯೆಗಳಿಲ್ಲ. ನಾವೀಗ ಸ್ನೇಹಿತರಾಗಿದ್ದು, ಬ್ಯಾಚ್‌ಮೇಟ್‌ಗಳಾಗಿದ್ದೇವೆ. ಆ ಘಟನೆಯನ್ನು ನಾವೀಗ ಮರೆತಿದ್ದು, ವೀಡಿಯೊ ನಿಷ್ಪ್ರಯೋಜಕವಾಗಿದೆ. ಈಗ ವೀಡಿಯೊವನ್ನು ಏಕೆ ಮುಂದೆ ತರಲಾಗುತ್ತಿದೆ? ಇದು ಕೇವಲ ನಮ್ಮ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಮತ್ತು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಿಟ್ಟ ವಿಡಿಯೊ” ಎಂದು ವಿಡಿಯೋದಲ್ಲಿ ಶ್ರೀರಾಮ್ ಹೇಳಿದ್ದಾರೆ.

ಕರೀಂನಗರ ಸಂಸದ ಮತ್ತು ಬಿಜೆಪಿ ತೆಲಂಗಾಣ ಮುಖ್ಯಸ್ಥ ಬಂಡಿ ಸಂಜಯ್ ಅವರು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು, ‘ಮಕ್ಕಳ ಗಲಾಟೆ’ ಎಂದು ಮಂಗಳವಾರ ಹೇಳಿದ್ದು, ಘಟನೆಯನ್ನು ತಳ್ಳಿಹಾಕಿದ್ದಾರೆ.

“ನಿಮಗೆ (ಕೆಸಿಆರ್) ಧೈರ್ಯವಿದ್ದರೆ ನನ್ನೊಂದಿಗೆ ರಾಜಕೀಯ ಮಾಡಿ. ನನ್ನನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ನನ್ನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ರಾಜಕಾರಣಿಗಳಾಗದ ಹೊರತು ರಾಜಕೀಯಕ್ಕಾಗಿ ಕುಟುಂಬವನ್ನು ಗುರಿಯಾಗಿಸಿಕೊಳ್ಳಬೇಡಿ” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಘಟನೆಯು ಹಳೆಯದಾಗಿದ್ದು, ಕೆಲವು ದಿನಗಳ ಹಿಂದೆ ನಡೆದಿದೆ ಎಂದು ತರ್ಕಿಸಲು ಪ್ರಯತ್ನಿಸಿದ್ದಾರೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಸಂಜಯ್, “ಮಕ್ಕಳು ಜಗಳವಾಡಿಕೊಂಡು ತಿದ್ದಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆ ಏನು? ಅವರ ವಿರುದ್ಧ ಯಾಕೆ ಕೇಸ್ ಹಾಕಿದ್ದೀರಿ? ಅದರ ಅವಶ್ಯಕತೆ ಏನು?” ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ವಿಶ್ವವಿದ್ಯಾನಿಲಯ ಕೂಡಾ ತಪ್ಪು ಮಾಡಿದೆ ಎಂದು ಹೇಳಿಕೊಂಡಿರುವ ಬಂಡಿ ಸಂಜಯ್, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅದರ ಬಗ್ಗೆ ಪೋಷಕರಿಗೆ ತಿಳಿಸುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೀರಾ ಎಂದು ಕೇಳಿದ್ದಾರೆ.

ತನ್ನ ಮಗನ ವಿರುದ್ಧ ದಾಖಲಾದ ಪ್ರಕರಣವು ಇತರ ಸಮಸ್ಯೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಕೂಡಿದೆ ಎಂದು ಸಂಜಯ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 17 ರಂದು ಅಂಬೇಡ್ಕರ್‌‌ ಹೆಸರಿನ ನೂತನ ಸೆಕ್ರೆಟರಿಯೇಟ್ ಉದ್ಘಾಟಿಸಲಿರುವ ತೆಲಂಗಾಣ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...