Homeಮುಖಪುಟತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ಒಂದು ದಿನದ ಹಿಂದೆ ಕೂಡಾ ಬೇರೊಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ, ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಇದಾಗಿ ಒಂದೇ ದಿನದಲ್ಲಿ ಭಗೀರಥ ಮತ್ತು ಆತನ ಗೆಳೆಯರ ಗುಂಪು ಮತ್ತೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಮತ್ತೊಂದು ವಿಡಿಯೋ ಕೂಡಾ ವೈರಲ್ ಆಗಿದೆ.

“ಸಂತ್ರಸ್ತ ಬೇರೆಯೆ ಮತ್ತೊಬ್ಬ ವಿದ್ಯಾರ್ಥಿ ಎಂದು ತೋರುತ್ತಿದೆ. ತನಿಖೆ ನಡೆಯುತ್ತಿದೆ. ನಾವು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಜಿ. ಸಂದೀಪ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರಿಂದ ಘಟನೆಯ ವೀಡಿಯೊವನ್ನು ಪಡೆದಿದ್ದೇವೆ. ಆದರೆ ಸಂತ್ರಸ್ತ ವಿದ್ಯಾರ್ಥಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಮಹೀಂದ್ರಾ ವಿಶ್ವವಿದ್ಯಾಲಯದ ಪ್ರೊಫೆಸರ್ ಸುರೇಶ್ ರಕ್ಷಿತ್ ಅವರು ಹೇಳಿದ್ದಾರೆ.

“ಪ್ರಸ್ತುತ ರಜೆ ಇರುವುದರಿಂದ ಕಾಲೇಜು ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಯ ವಿವರಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ ನಾವು ಹೊಸ ವೀಡಿಯೊದ ಬಗ್ಗೆ ಗಮನ ಹರಿಸಿದ್ದು, ಭಗೀರಥ ವಿರುದ್ಧ ಅಗತ್ಯ ಕ್ರಮಕ್ಕಾಗಿ ಶಿಸ್ತು ಸಮಿತಿಯೊಂದಿಗೆ ಮಾತನಾಡಿದ್ದೇವೆ” ಎಂದು ಪ್ರೊಫೆಸರ್ ಸುರೇಶ್ ಹೇಳಿದ್ದಾರೆ.

ಹೊಸದಾಗಿ ವೈರಲ್ ಆಗುತ್ತಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿ ತೆಲಂಗಾಣ ಮುಖ್ಯಸ್ಥ ಆರ್‌.ಎಸ್‌. ಪ್ರವೀಣ್‌ಕುಮಾರ್‌, ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಬಿಜೆಪಿ ಜೊತೆ ‘ನೆರಳಿನ ಯುದ್ದ’ ಮಾಡುವ ಬದಲು ಭಗೀರಥನನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ.

ಶ್ರೀರಾಮ್ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ, ಮಂಗಳವಾರ ಕಾಲೇಜು ಆಡಳಿತ ಮಂಡಳಿಯ ದೂರಿನ ಮೇರೆಗೆ ದುಂಡಿಗಲ್ ಪೊಲೀಸರು ಬಂಡಿ ಸಂಜಯ್ ಅವರ ಮಗ ಬಂಡಿ ಭಗೀರಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ 341, 323, 504 ಮತ್ತು ತೆಲಂಗಾಣ ರಾಜ್ಯ ರ್‍ಯಾಗಿಂಗ್‌ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ, ಸಂತ್ರಸ್ತ ಶ್ರೀರಾಮ್, ತನಗೆ ಥಳಿಸಿದ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

“ನಾನು ಭಗೀರಥನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದೆ. ನಾನು ಅವಳಿಗೆ ಕರೆ ಮಾಡಿ, ಪ್ರೇಮ ನಿವೇದನೆಯ ಸಂದೇಶ ಕಳುಹಿಸಿದೆ. ವಿಷಯ ತಿಳಿದ ಭಗೀರಥ ನನ್ನನ್ನು ನೋಡಲು ಬಂದಿದ್ದು ನಮ್ಮಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾದದ ನಂತರ, ಅವರು ನನಗೆ ಕಪಾಳಮೋಕ್ಷ ಮಾಡಿದರು” ಎಂದು ಹೇಳಿದ್ದಾರೆ.

“ಇದು ಹಿಂದಿನ ಘಟನೆಯಾಗಿದ್ದು, ನಮ್ಮ ನಡುವೆ ಈಗ ಯಾವುದೇ ಸಮಸ್ಯೆಗಳಿಲ್ಲ. ನಾವೀಗ ಸ್ನೇಹಿತರಾಗಿದ್ದು, ಬ್ಯಾಚ್‌ಮೇಟ್‌ಗಳಾಗಿದ್ದೇವೆ. ಆ ಘಟನೆಯನ್ನು ನಾವೀಗ ಮರೆತಿದ್ದು, ವೀಡಿಯೊ ನಿಷ್ಪ್ರಯೋಜಕವಾಗಿದೆ. ಈಗ ವೀಡಿಯೊವನ್ನು ಏಕೆ ಮುಂದೆ ತರಲಾಗುತ್ತಿದೆ? ಇದು ಕೇವಲ ನಮ್ಮ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಮತ್ತು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಿಟ್ಟ ವಿಡಿಯೊ” ಎಂದು ವಿಡಿಯೋದಲ್ಲಿ ಶ್ರೀರಾಮ್ ಹೇಳಿದ್ದಾರೆ.

ಕರೀಂನಗರ ಸಂಸದ ಮತ್ತು ಬಿಜೆಪಿ ತೆಲಂಗಾಣ ಮುಖ್ಯಸ್ಥ ಬಂಡಿ ಸಂಜಯ್ ಅವರು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು, ‘ಮಕ್ಕಳ ಗಲಾಟೆ’ ಎಂದು ಮಂಗಳವಾರ ಹೇಳಿದ್ದು, ಘಟನೆಯನ್ನು ತಳ್ಳಿಹಾಕಿದ್ದಾರೆ.

“ನಿಮಗೆ (ಕೆಸಿಆರ್) ಧೈರ್ಯವಿದ್ದರೆ ನನ್ನೊಂದಿಗೆ ರಾಜಕೀಯ ಮಾಡಿ. ನನ್ನನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ನನ್ನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ರಾಜಕಾರಣಿಗಳಾಗದ ಹೊರತು ರಾಜಕೀಯಕ್ಕಾಗಿ ಕುಟುಂಬವನ್ನು ಗುರಿಯಾಗಿಸಿಕೊಳ್ಳಬೇಡಿ” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಘಟನೆಯು ಹಳೆಯದಾಗಿದ್ದು, ಕೆಲವು ದಿನಗಳ ಹಿಂದೆ ನಡೆದಿದೆ ಎಂದು ತರ್ಕಿಸಲು ಪ್ರಯತ್ನಿಸಿದ್ದಾರೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಸಂಜಯ್, “ಮಕ್ಕಳು ಜಗಳವಾಡಿಕೊಂಡು ತಿದ್ದಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆ ಏನು? ಅವರ ವಿರುದ್ಧ ಯಾಕೆ ಕೇಸ್ ಹಾಕಿದ್ದೀರಿ? ಅದರ ಅವಶ್ಯಕತೆ ಏನು?” ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ವಿಶ್ವವಿದ್ಯಾನಿಲಯ ಕೂಡಾ ತಪ್ಪು ಮಾಡಿದೆ ಎಂದು ಹೇಳಿಕೊಂಡಿರುವ ಬಂಡಿ ಸಂಜಯ್, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅದರ ಬಗ್ಗೆ ಪೋಷಕರಿಗೆ ತಿಳಿಸುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೀರಾ ಎಂದು ಕೇಳಿದ್ದಾರೆ.

ತನ್ನ ಮಗನ ವಿರುದ್ಧ ದಾಖಲಾದ ಪ್ರಕರಣವು ಇತರ ಸಮಸ್ಯೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಕೂಡಿದೆ ಎಂದು ಸಂಜಯ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 17 ರಂದು ಅಂಬೇಡ್ಕರ್‌‌ ಹೆಸರಿನ ನೂತನ ಸೆಕ್ರೆಟರಿಯೇಟ್ ಉದ್ಘಾಟಿಸಲಿರುವ ತೆಲಂಗಾಣ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...