Homeಮುಖಪುಟತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ಒಂದು ದಿನದ ಹಿಂದೆ ಕೂಡಾ ಬೇರೊಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ, ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಇದಾಗಿ ಒಂದೇ ದಿನದಲ್ಲಿ ಭಗೀರಥ ಮತ್ತು ಆತನ ಗೆಳೆಯರ ಗುಂಪು ಮತ್ತೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಮತ್ತೊಂದು ವಿಡಿಯೋ ಕೂಡಾ ವೈರಲ್ ಆಗಿದೆ.

“ಸಂತ್ರಸ್ತ ಬೇರೆಯೆ ಮತ್ತೊಬ್ಬ ವಿದ್ಯಾರ್ಥಿ ಎಂದು ತೋರುತ್ತಿದೆ. ತನಿಖೆ ನಡೆಯುತ್ತಿದೆ. ನಾವು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಜಿ. ಸಂದೀಪ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರಿಂದ ಘಟನೆಯ ವೀಡಿಯೊವನ್ನು ಪಡೆದಿದ್ದೇವೆ. ಆದರೆ ಸಂತ್ರಸ್ತ ವಿದ್ಯಾರ್ಥಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಮಹೀಂದ್ರಾ ವಿಶ್ವವಿದ್ಯಾಲಯದ ಪ್ರೊಫೆಸರ್ ಸುರೇಶ್ ರಕ್ಷಿತ್ ಅವರು ಹೇಳಿದ್ದಾರೆ.

“ಪ್ರಸ್ತುತ ರಜೆ ಇರುವುದರಿಂದ ಕಾಲೇಜು ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಯ ವಿವರಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ ನಾವು ಹೊಸ ವೀಡಿಯೊದ ಬಗ್ಗೆ ಗಮನ ಹರಿಸಿದ್ದು, ಭಗೀರಥ ವಿರುದ್ಧ ಅಗತ್ಯ ಕ್ರಮಕ್ಕಾಗಿ ಶಿಸ್ತು ಸಮಿತಿಯೊಂದಿಗೆ ಮಾತನಾಡಿದ್ದೇವೆ” ಎಂದು ಪ್ರೊಫೆಸರ್ ಸುರೇಶ್ ಹೇಳಿದ್ದಾರೆ.

ಹೊಸದಾಗಿ ವೈರಲ್ ಆಗುತ್ತಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿ ತೆಲಂಗಾಣ ಮುಖ್ಯಸ್ಥ ಆರ್‌.ಎಸ್‌. ಪ್ರವೀಣ್‌ಕುಮಾರ್‌, ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಬಿಜೆಪಿ ಜೊತೆ ‘ನೆರಳಿನ ಯುದ್ದ’ ಮಾಡುವ ಬದಲು ಭಗೀರಥನನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ.

ಶ್ರೀರಾಮ್ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ, ಮಂಗಳವಾರ ಕಾಲೇಜು ಆಡಳಿತ ಮಂಡಳಿಯ ದೂರಿನ ಮೇರೆಗೆ ದುಂಡಿಗಲ್ ಪೊಲೀಸರು ಬಂಡಿ ಸಂಜಯ್ ಅವರ ಮಗ ಬಂಡಿ ಭಗೀರಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ 341, 323, 504 ಮತ್ತು ತೆಲಂಗಾಣ ರಾಜ್ಯ ರ್‍ಯಾಗಿಂಗ್‌ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ, ಸಂತ್ರಸ್ತ ಶ್ರೀರಾಮ್, ತನಗೆ ಥಳಿಸಿದ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

“ನಾನು ಭಗೀರಥನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದೆ. ನಾನು ಅವಳಿಗೆ ಕರೆ ಮಾಡಿ, ಪ್ರೇಮ ನಿವೇದನೆಯ ಸಂದೇಶ ಕಳುಹಿಸಿದೆ. ವಿಷಯ ತಿಳಿದ ಭಗೀರಥ ನನ್ನನ್ನು ನೋಡಲು ಬಂದಿದ್ದು ನಮ್ಮಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾದದ ನಂತರ, ಅವರು ನನಗೆ ಕಪಾಳಮೋಕ್ಷ ಮಾಡಿದರು” ಎಂದು ಹೇಳಿದ್ದಾರೆ.

“ಇದು ಹಿಂದಿನ ಘಟನೆಯಾಗಿದ್ದು, ನಮ್ಮ ನಡುವೆ ಈಗ ಯಾವುದೇ ಸಮಸ್ಯೆಗಳಿಲ್ಲ. ನಾವೀಗ ಸ್ನೇಹಿತರಾಗಿದ್ದು, ಬ್ಯಾಚ್‌ಮೇಟ್‌ಗಳಾಗಿದ್ದೇವೆ. ಆ ಘಟನೆಯನ್ನು ನಾವೀಗ ಮರೆತಿದ್ದು, ವೀಡಿಯೊ ನಿಷ್ಪ್ರಯೋಜಕವಾಗಿದೆ. ಈಗ ವೀಡಿಯೊವನ್ನು ಏಕೆ ಮುಂದೆ ತರಲಾಗುತ್ತಿದೆ? ಇದು ಕೇವಲ ನಮ್ಮ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಮತ್ತು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಿಟ್ಟ ವಿಡಿಯೊ” ಎಂದು ವಿಡಿಯೋದಲ್ಲಿ ಶ್ರೀರಾಮ್ ಹೇಳಿದ್ದಾರೆ.

ಕರೀಂನಗರ ಸಂಸದ ಮತ್ತು ಬಿಜೆಪಿ ತೆಲಂಗಾಣ ಮುಖ್ಯಸ್ಥ ಬಂಡಿ ಸಂಜಯ್ ಅವರು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು, ‘ಮಕ್ಕಳ ಗಲಾಟೆ’ ಎಂದು ಮಂಗಳವಾರ ಹೇಳಿದ್ದು, ಘಟನೆಯನ್ನು ತಳ್ಳಿಹಾಕಿದ್ದಾರೆ.

“ನಿಮಗೆ (ಕೆಸಿಆರ್) ಧೈರ್ಯವಿದ್ದರೆ ನನ್ನೊಂದಿಗೆ ರಾಜಕೀಯ ಮಾಡಿ. ನನ್ನನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ನನ್ನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ರಾಜಕಾರಣಿಗಳಾಗದ ಹೊರತು ರಾಜಕೀಯಕ್ಕಾಗಿ ಕುಟುಂಬವನ್ನು ಗುರಿಯಾಗಿಸಿಕೊಳ್ಳಬೇಡಿ” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಘಟನೆಯು ಹಳೆಯದಾಗಿದ್ದು, ಕೆಲವು ದಿನಗಳ ಹಿಂದೆ ನಡೆದಿದೆ ಎಂದು ತರ್ಕಿಸಲು ಪ್ರಯತ್ನಿಸಿದ್ದಾರೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಸಂಜಯ್, “ಮಕ್ಕಳು ಜಗಳವಾಡಿಕೊಂಡು ತಿದ್ದಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆ ಏನು? ಅವರ ವಿರುದ್ಧ ಯಾಕೆ ಕೇಸ್ ಹಾಕಿದ್ದೀರಿ? ಅದರ ಅವಶ್ಯಕತೆ ಏನು?” ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ವಿಶ್ವವಿದ್ಯಾನಿಲಯ ಕೂಡಾ ತಪ್ಪು ಮಾಡಿದೆ ಎಂದು ಹೇಳಿಕೊಂಡಿರುವ ಬಂಡಿ ಸಂಜಯ್, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅದರ ಬಗ್ಗೆ ಪೋಷಕರಿಗೆ ತಿಳಿಸುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೀರಾ ಎಂದು ಕೇಳಿದ್ದಾರೆ.

ತನ್ನ ಮಗನ ವಿರುದ್ಧ ದಾಖಲಾದ ಪ್ರಕರಣವು ಇತರ ಸಮಸ್ಯೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಕೂಡಿದೆ ಎಂದು ಸಂಜಯ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 17 ರಂದು ಅಂಬೇಡ್ಕರ್‌‌ ಹೆಸರಿನ ನೂತನ ಸೆಕ್ರೆಟರಿಯೇಟ್ ಉದ್ಘಾಟಿಸಲಿರುವ ತೆಲಂಗಾಣ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...