Homeಮುಖಪುಟತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ಒಂದು ದಿನದ ಹಿಂದೆ ಕೂಡಾ ಬೇರೊಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ, ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಇದಾಗಿ ಒಂದೇ ದಿನದಲ್ಲಿ ಭಗೀರಥ ಮತ್ತು ಆತನ ಗೆಳೆಯರ ಗುಂಪು ಮತ್ತೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಮತ್ತೊಂದು ವಿಡಿಯೋ ಕೂಡಾ ವೈರಲ್ ಆಗಿದೆ.

“ಸಂತ್ರಸ್ತ ಬೇರೆಯೆ ಮತ್ತೊಬ್ಬ ವಿದ್ಯಾರ್ಥಿ ಎಂದು ತೋರುತ್ತಿದೆ. ತನಿಖೆ ನಡೆಯುತ್ತಿದೆ. ನಾವು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಜಿ. ಸಂದೀಪ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರಿಂದ ಘಟನೆಯ ವೀಡಿಯೊವನ್ನು ಪಡೆದಿದ್ದೇವೆ. ಆದರೆ ಸಂತ್ರಸ್ತ ವಿದ್ಯಾರ್ಥಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಮಹೀಂದ್ರಾ ವಿಶ್ವವಿದ್ಯಾಲಯದ ಪ್ರೊಫೆಸರ್ ಸುರೇಶ್ ರಕ್ಷಿತ್ ಅವರು ಹೇಳಿದ್ದಾರೆ.

“ಪ್ರಸ್ತುತ ರಜೆ ಇರುವುದರಿಂದ ಕಾಲೇಜು ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಯ ವಿವರಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ ನಾವು ಹೊಸ ವೀಡಿಯೊದ ಬಗ್ಗೆ ಗಮನ ಹರಿಸಿದ್ದು, ಭಗೀರಥ ವಿರುದ್ಧ ಅಗತ್ಯ ಕ್ರಮಕ್ಕಾಗಿ ಶಿಸ್ತು ಸಮಿತಿಯೊಂದಿಗೆ ಮಾತನಾಡಿದ್ದೇವೆ” ಎಂದು ಪ್ರೊಫೆಸರ್ ಸುರೇಶ್ ಹೇಳಿದ್ದಾರೆ.

ಹೊಸದಾಗಿ ವೈರಲ್ ಆಗುತ್ತಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿ ತೆಲಂಗಾಣ ಮುಖ್ಯಸ್ಥ ಆರ್‌.ಎಸ್‌. ಪ್ರವೀಣ್‌ಕುಮಾರ್‌, ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಬಿಜೆಪಿ ಜೊತೆ ‘ನೆರಳಿನ ಯುದ್ದ’ ಮಾಡುವ ಬದಲು ಭಗೀರಥನನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ.

ಶ್ರೀರಾಮ್ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ, ಮಂಗಳವಾರ ಕಾಲೇಜು ಆಡಳಿತ ಮಂಡಳಿಯ ದೂರಿನ ಮೇರೆಗೆ ದುಂಡಿಗಲ್ ಪೊಲೀಸರು ಬಂಡಿ ಸಂಜಯ್ ಅವರ ಮಗ ಬಂಡಿ ಭಗೀರಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ 341, 323, 504 ಮತ್ತು ತೆಲಂಗಾಣ ರಾಜ್ಯ ರ್‍ಯಾಗಿಂಗ್‌ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ, ಸಂತ್ರಸ್ತ ಶ್ರೀರಾಮ್, ತನಗೆ ಥಳಿಸಿದ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

“ನಾನು ಭಗೀರಥನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದೆ. ನಾನು ಅವಳಿಗೆ ಕರೆ ಮಾಡಿ, ಪ್ರೇಮ ನಿವೇದನೆಯ ಸಂದೇಶ ಕಳುಹಿಸಿದೆ. ವಿಷಯ ತಿಳಿದ ಭಗೀರಥ ನನ್ನನ್ನು ನೋಡಲು ಬಂದಿದ್ದು ನಮ್ಮಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾದದ ನಂತರ, ಅವರು ನನಗೆ ಕಪಾಳಮೋಕ್ಷ ಮಾಡಿದರು” ಎಂದು ಹೇಳಿದ್ದಾರೆ.

“ಇದು ಹಿಂದಿನ ಘಟನೆಯಾಗಿದ್ದು, ನಮ್ಮ ನಡುವೆ ಈಗ ಯಾವುದೇ ಸಮಸ್ಯೆಗಳಿಲ್ಲ. ನಾವೀಗ ಸ್ನೇಹಿತರಾಗಿದ್ದು, ಬ್ಯಾಚ್‌ಮೇಟ್‌ಗಳಾಗಿದ್ದೇವೆ. ಆ ಘಟನೆಯನ್ನು ನಾವೀಗ ಮರೆತಿದ್ದು, ವೀಡಿಯೊ ನಿಷ್ಪ್ರಯೋಜಕವಾಗಿದೆ. ಈಗ ವೀಡಿಯೊವನ್ನು ಏಕೆ ಮುಂದೆ ತರಲಾಗುತ್ತಿದೆ? ಇದು ಕೇವಲ ನಮ್ಮ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಮತ್ತು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಿಟ್ಟ ವಿಡಿಯೊ” ಎಂದು ವಿಡಿಯೋದಲ್ಲಿ ಶ್ರೀರಾಮ್ ಹೇಳಿದ್ದಾರೆ.

ಕರೀಂನಗರ ಸಂಸದ ಮತ್ತು ಬಿಜೆಪಿ ತೆಲಂಗಾಣ ಮುಖ್ಯಸ್ಥ ಬಂಡಿ ಸಂಜಯ್ ಅವರು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು, ‘ಮಕ್ಕಳ ಗಲಾಟೆ’ ಎಂದು ಮಂಗಳವಾರ ಹೇಳಿದ್ದು, ಘಟನೆಯನ್ನು ತಳ್ಳಿಹಾಕಿದ್ದಾರೆ.

“ನಿಮಗೆ (ಕೆಸಿಆರ್) ಧೈರ್ಯವಿದ್ದರೆ ನನ್ನೊಂದಿಗೆ ರಾಜಕೀಯ ಮಾಡಿ. ನನ್ನನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ನನ್ನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ರಾಜಕಾರಣಿಗಳಾಗದ ಹೊರತು ರಾಜಕೀಯಕ್ಕಾಗಿ ಕುಟುಂಬವನ್ನು ಗುರಿಯಾಗಿಸಿಕೊಳ್ಳಬೇಡಿ” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಘಟನೆಯು ಹಳೆಯದಾಗಿದ್ದು, ಕೆಲವು ದಿನಗಳ ಹಿಂದೆ ನಡೆದಿದೆ ಎಂದು ತರ್ಕಿಸಲು ಪ್ರಯತ್ನಿಸಿದ್ದಾರೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಸಂಜಯ್, “ಮಕ್ಕಳು ಜಗಳವಾಡಿಕೊಂಡು ತಿದ್ದಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆ ಏನು? ಅವರ ವಿರುದ್ಧ ಯಾಕೆ ಕೇಸ್ ಹಾಕಿದ್ದೀರಿ? ಅದರ ಅವಶ್ಯಕತೆ ಏನು?” ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ವಿಶ್ವವಿದ್ಯಾನಿಲಯ ಕೂಡಾ ತಪ್ಪು ಮಾಡಿದೆ ಎಂದು ಹೇಳಿಕೊಂಡಿರುವ ಬಂಡಿ ಸಂಜಯ್, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅದರ ಬಗ್ಗೆ ಪೋಷಕರಿಗೆ ತಿಳಿಸುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೀರಾ ಎಂದು ಕೇಳಿದ್ದಾರೆ.

ತನ್ನ ಮಗನ ವಿರುದ್ಧ ದಾಖಲಾದ ಪ್ರಕರಣವು ಇತರ ಸಮಸ್ಯೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಕೂಡಿದೆ ಎಂದು ಸಂಜಯ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 17 ರಂದು ಅಂಬೇಡ್ಕರ್‌‌ ಹೆಸರಿನ ನೂತನ ಸೆಕ್ರೆಟರಿಯೇಟ್ ಉದ್ಘಾಟಿಸಲಿರುವ ತೆಲಂಗಾಣ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...