Homeಮುಖಪುಟತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ತೆಲಂಗಾಣ ಬಿಜೆಪಿ ಅಧ್ಯಕ್ಷನ ಮಗನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ‘ಮಕ್ಕಳ ಗಲಾಟೆ’ ಎಂದ ತಂದೆ!

ಒಂದು ದಿನದ ಹಿಂದೆ ಕೂಡಾ ಬೇರೊಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ವಿಡಿಯೊ ವೈರಲ್ ಆಗಿತ್ತು

- Advertisement -
- Advertisement -

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ, ವಿದ್ಯಾರ್ಥಿಯೊಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು. ಇದಾಗಿ ಒಂದೇ ದಿನದಲ್ಲಿ ಭಗೀರಥ ಮತ್ತು ಆತನ ಗೆಳೆಯರ ಗುಂಪು ಮತ್ತೊಬ್ಬ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಮತ್ತೊಂದು ವಿಡಿಯೋ ಕೂಡಾ ವೈರಲ್ ಆಗಿದೆ.

“ಸಂತ್ರಸ್ತ ಬೇರೆಯೆ ಮತ್ತೊಬ್ಬ ವಿದ್ಯಾರ್ಥಿ ಎಂದು ತೋರುತ್ತಿದೆ. ತನಿಖೆ ನಡೆಯುತ್ತಿದೆ. ನಾವು ಎಲ್ಲಾ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಬಾಲನಗರ ವಲಯದ ಉಪ ಪೊಲೀಸ್ ಆಯುಕ್ತ ಜಿ. ಸಂದೀಪ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸರಿಂದ ಘಟನೆಯ ವೀಡಿಯೊವನ್ನು ಪಡೆದಿದ್ದೇವೆ. ಆದರೆ ಸಂತ್ರಸ್ತ ವಿದ್ಯಾರ್ಥಿಯನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಮಹೀಂದ್ರಾ ವಿಶ್ವವಿದ್ಯಾಲಯದ ಪ್ರೊಫೆಸರ್ ಸುರೇಶ್ ರಕ್ಷಿತ್ ಅವರು ಹೇಳಿದ್ದಾರೆ.

“ಪ್ರಸ್ತುತ ರಜೆ ಇರುವುದರಿಂದ ಕಾಲೇಜು ನಡೆಯುತ್ತಿಲ್ಲ. ಹಾಗಾಗಿ ವಿದ್ಯಾರ್ಥಿಯ ವಿವರಗಳನ್ನು ಗುರುತಿಸಲು ಮತ್ತು ಪರಿಶೀಲಿಸಲು ನಮಗೆ ಸಾಧ್ಯವಾಗುತ್ತಿಲ್ಲ. ಆದಾಗ್ಯೂ ನಾವು ಹೊಸ ವೀಡಿಯೊದ ಬಗ್ಗೆ ಗಮನ ಹರಿಸಿದ್ದು, ಭಗೀರಥ ವಿರುದ್ಧ ಅಗತ್ಯ ಕ್ರಮಕ್ಕಾಗಿ ಶಿಸ್ತು ಸಮಿತಿಯೊಂದಿಗೆ ಮಾತನಾಡಿದ್ದೇವೆ” ಎಂದು ಪ್ರೊಫೆಸರ್ ಸುರೇಶ್ ಹೇಳಿದ್ದಾರೆ.

ಹೊಸದಾಗಿ ವೈರಲ್ ಆಗುತ್ತಿರುವ ವೀಡಿಯೋಗೆ ಪ್ರತಿಕ್ರಿಯಿಸಿರುವ ಬಿಎಸ್‌ಪಿ ತೆಲಂಗಾಣ ಮುಖ್ಯಸ್ಥ ಆರ್‌.ಎಸ್‌. ಪ್ರವೀಣ್‌ಕುಮಾರ್‌, ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಬಿಜೆಪಿ ಜೊತೆ ‘ನೆರಳಿನ ಯುದ್ದ’ ಮಾಡುವ ಬದಲು ಭಗೀರಥನನ್ನು ಬಂಧಿಸುವಂತೆ ಸವಾಲು ಹಾಕಿದ್ದಾರೆ.

ಶ್ರೀರಾಮ್ ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ವೈರಲ್ ಆದ ನಂತರ, ಮಂಗಳವಾರ ಕಾಲೇಜು ಆಡಳಿತ ಮಂಡಳಿಯ ದೂರಿನ ಮೇರೆಗೆ ದುಂಡಿಗಲ್ ಪೊಲೀಸರು ಬಂಡಿ ಸಂಜಯ್ ಅವರ ಮಗ ಬಂಡಿ ಭಗೀರಥ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಪೊಲೀಸರು ಭಾರತೀಯ ದಂಡ ಸಂಹಿತೆಯ 341, 323, 504 ಮತ್ತು ತೆಲಂಗಾಣ ರಾಜ್ಯ ರ್‍ಯಾಗಿಂಗ್‌ ನಿಷೇಧ ಕಾಯಿದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ, ಸಂತ್ರಸ್ತ ಶ್ರೀರಾಮ್, ತನಗೆ ಥಳಿಸಿದ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದು, ಅದಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಹೇಳಿ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

“ನಾನು ಭಗೀರಥನ ಸ್ನೇಹಿತನ ಸಹೋದರಿಯೊಂದಿಗೆ ಅನುಚಿತವಾಗಿ ವರ್ತಿಸಿದೆ. ನಾನು ಅವಳಿಗೆ ಕರೆ ಮಾಡಿ, ಪ್ರೇಮ ನಿವೇದನೆಯ ಸಂದೇಶ ಕಳುಹಿಸಿದೆ. ವಿಷಯ ತಿಳಿದ ಭಗೀರಥ ನನ್ನನ್ನು ನೋಡಲು ಬಂದಿದ್ದು ನಮ್ಮಿಬ್ಬರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ವಾದದ ನಂತರ, ಅವರು ನನಗೆ ಕಪಾಳಮೋಕ್ಷ ಮಾಡಿದರು” ಎಂದು ಹೇಳಿದ್ದಾರೆ.

“ಇದು ಹಿಂದಿನ ಘಟನೆಯಾಗಿದ್ದು, ನಮ್ಮ ನಡುವೆ ಈಗ ಯಾವುದೇ ಸಮಸ್ಯೆಗಳಿಲ್ಲ. ನಾವೀಗ ಸ್ನೇಹಿತರಾಗಿದ್ದು, ಬ್ಯಾಚ್‌ಮೇಟ್‌ಗಳಾಗಿದ್ದೇವೆ. ಆ ಘಟನೆಯನ್ನು ನಾವೀಗ ಮರೆತಿದ್ದು, ವೀಡಿಯೊ ನಿಷ್ಪ್ರಯೋಜಕವಾಗಿದೆ. ಈಗ ವೀಡಿಯೊವನ್ನು ಏಕೆ ಮುಂದೆ ತರಲಾಗುತ್ತಿದೆ? ಇದು ಕೇವಲ ನಮ್ಮ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಲು ಮತ್ತು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡಲು ಬಿಟ್ಟ ವಿಡಿಯೊ” ಎಂದು ವಿಡಿಯೋದಲ್ಲಿ ಶ್ರೀರಾಮ್ ಹೇಳಿದ್ದಾರೆ.

ಕರೀಂನಗರ ಸಂಸದ ಮತ್ತು ಬಿಜೆಪಿ ತೆಲಂಗಾಣ ಮುಖ್ಯಸ್ಥ ಬಂಡಿ ಸಂಜಯ್ ಅವರು ತಮ್ಮ ಪುತ್ರನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು, ‘ಮಕ್ಕಳ ಗಲಾಟೆ’ ಎಂದು ಮಂಗಳವಾರ ಹೇಳಿದ್ದು, ಘಟನೆಯನ್ನು ತಳ್ಳಿಹಾಕಿದ್ದಾರೆ.

“ನಿಮಗೆ (ಕೆಸಿಆರ್) ಧೈರ್ಯವಿದ್ದರೆ ನನ್ನೊಂದಿಗೆ ರಾಜಕೀಯ ಮಾಡಿ. ನನ್ನನ್ನು ನಿಭಾಯಿಸಲು ಸಾಧ್ಯವಾಗದ ಕಾರಣ ನನ್ನ ಮಗನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅವರು ರಾಜಕಾರಣಿಗಳಾಗದ ಹೊರತು ರಾಜಕೀಯಕ್ಕಾಗಿ ಕುಟುಂಬವನ್ನು ಗುರಿಯಾಗಿಸಿಕೊಳ್ಳಬೇಡಿ” ಎಂದು ಬಂಡಿ ಸಂಜಯ್ ಹೇಳಿದ್ದಾರೆ. ಘಟನೆಯು ಹಳೆಯದಾಗಿದ್ದು, ಕೆಲವು ದಿನಗಳ ಹಿಂದೆ ನಡೆದಿದೆ ಎಂದು ತರ್ಕಿಸಲು ಪ್ರಯತ್ನಿಸಿದ್ದಾರೆ.

ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಉದ್ದೇಶಪೂರ್ವಕವಾಗಿ ತಮ್ಮ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿರುವ ಸಂಜಯ್, “ಮಕ್ಕಳು ಜಗಳವಾಡಿಕೊಂಡು ತಿದ್ದಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆ ಏನು? ಅವರ ವಿರುದ್ಧ ಯಾಕೆ ಕೇಸ್ ಹಾಕಿದ್ದೀರಿ? ಅದರ ಅವಶ್ಯಕತೆ ಏನು?” ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ವಿಶ್ವವಿದ್ಯಾನಿಲಯ ಕೂಡಾ ತಪ್ಪು ಮಾಡಿದೆ ಎಂದು ಹೇಳಿಕೊಂಡಿರುವ ಬಂಡಿ ಸಂಜಯ್, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಅದರ ಬಗ್ಗೆ ಪೋಷಕರಿಗೆ ತಿಳಿಸುವ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಿದ್ದೀರಾ ಎಂದು ಕೇಳಿದ್ದಾರೆ.

ತನ್ನ ಮಗನ ವಿರುದ್ಧ ದಾಖಲಾದ ಪ್ರಕರಣವು ಇತರ ಸಮಸ್ಯೆಗಳನ್ನು ದಿಕ್ಕು ತಪ್ಪಿಸುವ ಉದ್ದೇಶದಿಂದ ಕೂಡಿದೆ ಎಂದು ಸಂಜಯ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 17 ರಂದು ಅಂಬೇಡ್ಕರ್‌‌ ಹೆಸರಿನ ನೂತನ ಸೆಕ್ರೆಟರಿಯೇಟ್ ಉದ್ಘಾಟಿಸಲಿರುವ ತೆಲಂಗಾಣ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...