Homeಮುಖಪುಟತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

ತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

- Advertisement -
- Advertisement -

ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದಾರೆ. ನಿಂದನೆ ಹೇಳಿಕೆ ಹೊರಬಿದ್ದ ನಂತರ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆಗಳು ನಡೆದಿದ್ದು, ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ರಾಜ್‌ ಸಿಂಗ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ.

ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ರಾಜ್‌ಸಿಂಗ್‌ಗೆ ನೋಟೀಸ್ ನೀಡಿದ್ದು, “ನೀವು ಸಂವಿಧಾನವನ್ನು ಉಲ್ಲಂಘಿಸಿದ್ದೀರಿ. ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ. ಮುಂದಿನ ವಿಚಾರಣೆ ಬಾಕಿಯಿದೆ, ನಿಮ್ಮನ್ನು ಪಕ್ಷದಿಂದ ಹಾಗೂ ಎಲ್ಲಾ ಜವಾಬ್ದಾರಿಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೂ ಮುನ್ನ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಕಾರ್ಯಕರ್ತರು ರಾಜಾ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಹೈದರಾಬಾದ್ ಪೊಲೀಸ್ ಮುಖ್ಯಸ್ಥರ ಕಚೇರಿ ಎದುರು ಧರಣಿ ನಡೆಸಿದರು. ತಮ್ಮ ಉದ್ರೇಕಕಾರಿ ಭಾಷಣಗಳಿಂದ ಆಗಾಗ್ಗೆ ಸುದ್ದಿಯಲ್ಲಿರುವ ರಾಜಾ ಅವರನ್ನು 24 ಗಂಟೆಗಳ ಒಳಗೆ ಬಂಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಅವರು ಎಚ್ಚರಿಸಿದ್ದರು.

ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೊವನ್ನು ಬಿಜೆಪಿ ಶಾಸಕ ರಾಜಾ ಸಿಂಗ್ ಬಿಡುಗಡೆ ಮಾಡಿದ ನಂತರದಲ್ಲಿ ಪ್ರತಿಭಟನೆಗಳು ನಡೆದಿವೆ. ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಎದುರು ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ಜರುಗಿವೆ.

 

ನಗರದ ಗೋಶಾಮಹಲ್‌ನ ಶಾಸಕ ಟಿ ರಾಜಾ ಸಿಂಗ್‌ ಕಳೆದ ವಾರ ಕಾಮಿಡಿ ಪ್ರೊಗ್ರಾಂಗೆ ಅಡ್ಡಿಪಡಿಸಲು ಯತ್ನಿಸಿದ್ದರು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲು ಒತ್ತಾಯಿಸಿದ್ದರು. ಸುಮಾರು 50 ಮಂದಿ ಬೆಂಬಲಿಗರೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಅಡ್ಡಿಪಡಿಸಲು ಪ್ರಯತ್ನಿಸಿದ್ದರು. ಪೊಲೀಸರು ಕ್ರಮ ಜರುಗಿಸಿದ ಬಳಿಕ, ಕಾರ್ಯಕ್ರಮ ಸುಗಮವಾಗಿ ನಡೆಯಿತು.

ಪ್ರವಾದಿ ನಿಂದನೆಗೆ ಮತ್ತೊಂದು ಫ್ರಿಂಜ್ ಸೇರ್ಪಡೆ!

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿತ್ತು. ಈಗ ಆ ಸಾಲಿಗೆ ಟಿ.ರಾಜಾ ಸಿಂಗ್ ಸೇರ್ಪಡೆಯಾಗಿದ್ದಾರೆ.

ನೂಪುರ್‌‌ ವಿದ್ಯಮಾನದ ಸಂದರ್ಭದಲ್ಲಿ ಬಿಜೆಪಿ, “ಇಂತಹ ಜನರನ್ನು ಅಥವಾ ತತ್ವವನ್ನು ನಾವು ಪ್ರಚಾರ ಮಾಡುವುದಿಲ್ಲ” ಎಂದಿತ್ತು.

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಇಲ್ಲಿ ಪ್ರತಿಯೊಂದು ಧರ್ಮವೂ ಅರಳಿವೆ. ಪ್ರವರ್ಧಮಾನಕ್ಕೆ ಬಂದಿವೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ತಿಳಿಸಿತ್ತು.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸುವ ಹಕ್ಕನ್ನು ನೀಡುತ್ತದೆ” ಎಂದು ಸ್ಪಷ್ಟಪಡಿಸಿತ್ತು.

ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದವು. ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದವು.

ಇದನ್ನೂ ಓದಿರಿ: ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿ, ತಮ್ಮ ವಿರೋಧವನ್ನು ತಿಳಿಸಿದ್ದವು. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿತ್ತು. ಜೊತೆಗೆ ಪಕ್ಷದ ವಕ್ತಾರರ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿದ್ದವು.

ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಪ್ರವಾದಿ ನಿಂದನೆ ಮಾಡಿದವರನ್ನು ‘ಪ್ರಿಂಜ್ ಎಲಿಮೆಂಟ್ಸ್‌’ (ಕೊನೆಯ ಎಳಸುಗಳು) ಎಂದು ಸರ್ಕಾರ ಕರೆದಿತ್ತು. ಆ ಸಾಲಿಗೆ ಈಗ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಸೇರ್ಪಡೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...