Homeಮುಖಪುಟತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ಚುನಾವಣೆಗಾಗಿ ಹಂಚುತ್ತಿದ್ದ 5.87 ಲಕ್ಷ ರೂ.ಗಳನ್ನು ನಾವು ವಶಪಡಿಸಿಕೊಂಡೆವು. ನಂತರ ಬಿಜೆಪಿ ಕಾರ್ಯಕರ್ತರು ಅದನ್ನು ಕಸಿದುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಸಂಬಂಧಿ ಎಸ್.ಅಂಜನ್ ರಾವ್ ಮನೆಯಿಂದ ಪೊಲೀಸರು ವಶಪಡಿಸಿಕೊಂಡ ಸುಮಾರು 18.67 ಲಕ್ಷ ರೂ. ಹಣವನ್ನು ಬಿಜೆಪಿಯ ಕಾರ್ಯಕರ್ತರು ಪೊಲೀಸರಿಂದ ಕಸಿದುಕೊಂಡಿದ್ದರಿಂದ ಸಿದ್ದಿಪೇಟೆಯ ಉಪನ್ಯಾಸಕರ ಕಾಲೋನಿಯಲ್ಲಿ ಸೋಮವಾರ ಉದ್ವಿಗ್ನತೆ ಉಂಟಾಯಿತು.

ಈ ಘಟನೆ ನವಂಬರ್ 3 ರಂದು ನಡೆಯುವ ಉಪಚುನಾವಣೆಗೆ ಸಂಬಂಧಿಸಿದಂತೆ, ಮತದಾರರನ್ನು ಸೆಳೆಯಲು ಈ ಹಣವನ್ನು ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈ ಹಣವನ್ನು ವಶಪಡಿಸಿಕೊಂಡು ಹೊರಡುತ್ತಿರುವಾಗ ಅಲ್ಲಿಗೆ ತನ್ನ ಅನುಯಾಯಿಗಳೊಂದಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ ಕೋಲಾಹಲವನ್ನು ಸೃಷ್ಟಿಸಿದರು. ಇದರಿಂದ ಪೊಲೀಸರು ಮತ್ತು ಬಿಜೆಪಿ ನಾಯಕನ ಅನುಯಾಯಿಗಳ ನಡುವೆ ಜಗಳ ನಡೆದು, ಅನುಯಾಯಿಗಳು ಕಾನ್ಸ್ಟೇಬಲ್‌ನನ್ನು ಹಿಡಿದು ಅವರ ಕೈಯಲ್ಲಿದ್ದ ಹಣದ ಚೀಲವನ್ನು ಕಿತ್ತುಕೊಂಡನಂತರ, “ಮತದಾರರ ಮೇಲೆ ಪ್ರಭಾವ ಬೀರಲು ಹಣವನ್ನು ಬಳಸಿದ್ದಾರೆಂದು ಸುಳ್ಳು ಆರೋಪಗಳನ್ನು ಮಾಡಿ ಈ ಹಣವನ್ನು ಪೊಲೀಸರೇ ಅವರ ಮನೆಯಲ್ಲಿಟ್ಟಿದ್ದಾರೆ” ಎಂದು ಅವರು ಆರೋಪಿಸಿದರು.

ಮಾರನೆ ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ಕುಮಾರ್ ರಘುನಂದನ್ ರಾವ್‌ಗೆ ಬೆಂಬಲ ನೀಡುವ ಸಲುವಾಗಿ ಸಿದ್ದಿಪೇಟೆಗೆ ಬಂದಾಗ ಅವರನ್ನೂ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಚಕಮಕಿಯ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಇದರ ನಂತರ ಸಿದ್ದಿಪೇಟೆಗೆ ಆಗಮಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, “ರಾಜ್ಯದ ಬಿಜೆಪಿ ಮುಖ್ಯಸ್ಥರ ಮೇಲೆ ಕ್ರೂರ ಹಲ್ಲೆ ಮಾಡಿ ಬಂಧಿಸಿರುವುದು ನ್ಯಾಯಸಮ್ಮತವಲ್ಲ. ಇದು ಪ್ರಜಾಪ್ರಭುತ್ವದ ನಾಚಿಕೆಗೇಡಿತನ ಕೆಲಸ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಇದರ ನಡುವೆ, ಸಿದ್ದಿಪೇಟೆ ಪೊಲೀಸ್ ಆಯುಕ್ತ ಜೋಯಲ್ ಡೇವಿಸ್, “ದುಬ್ಬಾಕ ಉಪಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಣ ನೀಡಲಾಗುತ್ತಿದೆ ಎಂಬ ಸುಳಿವಿನ ಆಧಾರದ ಮೇಲೆ 3 ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಸಿದ್ದಿಪೇಟೆ ಪುರಸಭೆ ಅಧ್ಯಕ್ಷ ಕೆ.ರಾಜನರಸು, ರಘುನಂದನ್ ರಾವ್ ಅವರ ಮಾವ ಎಸ್.ರಾಮ್ ಗೋಪಾಲ್ ರಾವ್ ಮತ್ತು ಅವರ ಸಂಬಂಧಿಕರಾದ ಎಸ್ ಅಂಜನ್ ರಾವ್ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮತದಾರರಿಗೆ ಹಣ ಹಂಚುವ ಸಲುವಾಗಿ ರಘುನಂದನ್ ರಾವ್ ಅವರ ಸಂಬಂಧಿ ಜಿತೇಂದರ್ ರಾವ್ ತಮ್ಮ ಡ್ರೈವರ್ ಮೂಲಕ ಹಣವನ್ನು ಕಳುಹಿಸಿದ್ದು ಸಣ್ಣ ಪ್ರಮಾಣದಲ್ಲಿ ವಿತರಿಸುವಂತೆ ಹೇಳಿದ್ದರು. ನಾವು ಈ ಹಣವನ್ನು ವಶಪಡಿಸಿಕೊಂಡ ನಂತರ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ 200 ಸದಸ್ಯರೊಂದಿಗೆ ಬಂದು, 20-30 ಸದಸ್ಯರು ತಕ್ಷಣ ಒಳಗೆ ಹೋಗಿ 5.87 ಲಕ್ಷ ರೂ.ಗಳನ್ನು ಕಸಿದುಕೊಂಡರು. ಎಲ್ಲವೂ ದಾಖಲಾಗಿದೆ. ಅಪರಾಧಿಗಳನ್ನು ಗುರುತಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಗಳನ್ನು ದಾಖಲಿಸಲಾಗುವುದು” ಎಂದು ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕನ ಸಂಬಂಧಿಯಾದ ರಾಮಗೋಪಾಲ್ ರಾವ್ ಮಾತನಾಡಿ, “ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆ. ನಮ್ಮ ಕುಟುಂಬದ ಸದಸ್ಯರಿಂದ ಮೊಬೈಲ್‌ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ಬೆಳವಣಿಗೆಯಲ್ಲಿ ಬಿಜೆಪಿ ನಾಯಕರಾದ ಜಿ.ವಿವೇಕ್ ಮತ್ತು ಜಿತೇಂದರ್ ರೆಡ್ಡಿ ಅವರನ್ನು ಬಂಧಿಸಿ ಮತ್ತೆ ಹೈದರಾಬಾದ್‌ಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...