Homeಮುಖಪುಟತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ಚುನಾವಣೆಗಾಗಿ ಹಂಚುತ್ತಿದ್ದ 5.87 ಲಕ್ಷ ರೂ.ಗಳನ್ನು ನಾವು ವಶಪಡಿಸಿಕೊಂಡೆವು. ನಂತರ ಬಿಜೆಪಿ ಕಾರ್ಯಕರ್ತರು ಅದನ್ನು ಕಸಿದುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಸಂಬಂಧಿ ಎಸ್.ಅಂಜನ್ ರಾವ್ ಮನೆಯಿಂದ ಪೊಲೀಸರು ವಶಪಡಿಸಿಕೊಂಡ ಸುಮಾರು 18.67 ಲಕ್ಷ ರೂ. ಹಣವನ್ನು ಬಿಜೆಪಿಯ ಕಾರ್ಯಕರ್ತರು ಪೊಲೀಸರಿಂದ ಕಸಿದುಕೊಂಡಿದ್ದರಿಂದ ಸಿದ್ದಿಪೇಟೆಯ ಉಪನ್ಯಾಸಕರ ಕಾಲೋನಿಯಲ್ಲಿ ಸೋಮವಾರ ಉದ್ವಿಗ್ನತೆ ಉಂಟಾಯಿತು.

ಈ ಘಟನೆ ನವಂಬರ್ 3 ರಂದು ನಡೆಯುವ ಉಪಚುನಾವಣೆಗೆ ಸಂಬಂಧಿಸಿದಂತೆ, ಮತದಾರರನ್ನು ಸೆಳೆಯಲು ಈ ಹಣವನ್ನು ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈ ಹಣವನ್ನು ವಶಪಡಿಸಿಕೊಂಡು ಹೊರಡುತ್ತಿರುವಾಗ ಅಲ್ಲಿಗೆ ತನ್ನ ಅನುಯಾಯಿಗಳೊಂದಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ ಕೋಲಾಹಲವನ್ನು ಸೃಷ್ಟಿಸಿದರು. ಇದರಿಂದ ಪೊಲೀಸರು ಮತ್ತು ಬಿಜೆಪಿ ನಾಯಕನ ಅನುಯಾಯಿಗಳ ನಡುವೆ ಜಗಳ ನಡೆದು, ಅನುಯಾಯಿಗಳು ಕಾನ್ಸ್ಟೇಬಲ್‌ನನ್ನು ಹಿಡಿದು ಅವರ ಕೈಯಲ್ಲಿದ್ದ ಹಣದ ಚೀಲವನ್ನು ಕಿತ್ತುಕೊಂಡನಂತರ, “ಮತದಾರರ ಮೇಲೆ ಪ್ರಭಾವ ಬೀರಲು ಹಣವನ್ನು ಬಳಸಿದ್ದಾರೆಂದು ಸುಳ್ಳು ಆರೋಪಗಳನ್ನು ಮಾಡಿ ಈ ಹಣವನ್ನು ಪೊಲೀಸರೇ ಅವರ ಮನೆಯಲ್ಲಿಟ್ಟಿದ್ದಾರೆ” ಎಂದು ಅವರು ಆರೋಪಿಸಿದರು.

ಮಾರನೆ ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ಕುಮಾರ್ ರಘುನಂದನ್ ರಾವ್‌ಗೆ ಬೆಂಬಲ ನೀಡುವ ಸಲುವಾಗಿ ಸಿದ್ದಿಪೇಟೆಗೆ ಬಂದಾಗ ಅವರನ್ನೂ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಚಕಮಕಿಯ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಇದರ ನಂತರ ಸಿದ್ದಿಪೇಟೆಗೆ ಆಗಮಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, “ರಾಜ್ಯದ ಬಿಜೆಪಿ ಮುಖ್ಯಸ್ಥರ ಮೇಲೆ ಕ್ರೂರ ಹಲ್ಲೆ ಮಾಡಿ ಬಂಧಿಸಿರುವುದು ನ್ಯಾಯಸಮ್ಮತವಲ್ಲ. ಇದು ಪ್ರಜಾಪ್ರಭುತ್ವದ ನಾಚಿಕೆಗೇಡಿತನ ಕೆಲಸ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಇದರ ನಡುವೆ, ಸಿದ್ದಿಪೇಟೆ ಪೊಲೀಸ್ ಆಯುಕ್ತ ಜೋಯಲ್ ಡೇವಿಸ್, “ದುಬ್ಬಾಕ ಉಪಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಣ ನೀಡಲಾಗುತ್ತಿದೆ ಎಂಬ ಸುಳಿವಿನ ಆಧಾರದ ಮೇಲೆ 3 ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಸಿದ್ದಿಪೇಟೆ ಪುರಸಭೆ ಅಧ್ಯಕ್ಷ ಕೆ.ರಾಜನರಸು, ರಘುನಂದನ್ ರಾವ್ ಅವರ ಮಾವ ಎಸ್.ರಾಮ್ ಗೋಪಾಲ್ ರಾವ್ ಮತ್ತು ಅವರ ಸಂಬಂಧಿಕರಾದ ಎಸ್ ಅಂಜನ್ ರಾವ್ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮತದಾರರಿಗೆ ಹಣ ಹಂಚುವ ಸಲುವಾಗಿ ರಘುನಂದನ್ ರಾವ್ ಅವರ ಸಂಬಂಧಿ ಜಿತೇಂದರ್ ರಾವ್ ತಮ್ಮ ಡ್ರೈವರ್ ಮೂಲಕ ಹಣವನ್ನು ಕಳುಹಿಸಿದ್ದು ಸಣ್ಣ ಪ್ರಮಾಣದಲ್ಲಿ ವಿತರಿಸುವಂತೆ ಹೇಳಿದ್ದರು. ನಾವು ಈ ಹಣವನ್ನು ವಶಪಡಿಸಿಕೊಂಡ ನಂತರ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ 200 ಸದಸ್ಯರೊಂದಿಗೆ ಬಂದು, 20-30 ಸದಸ್ಯರು ತಕ್ಷಣ ಒಳಗೆ ಹೋಗಿ 5.87 ಲಕ್ಷ ರೂ.ಗಳನ್ನು ಕಸಿದುಕೊಂಡರು. ಎಲ್ಲವೂ ದಾಖಲಾಗಿದೆ. ಅಪರಾಧಿಗಳನ್ನು ಗುರುತಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಗಳನ್ನು ದಾಖಲಿಸಲಾಗುವುದು” ಎಂದು ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕನ ಸಂಬಂಧಿಯಾದ ರಾಮಗೋಪಾಲ್ ರಾವ್ ಮಾತನಾಡಿ, “ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆ. ನಮ್ಮ ಕುಟುಂಬದ ಸದಸ್ಯರಿಂದ ಮೊಬೈಲ್‌ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ಬೆಳವಣಿಗೆಯಲ್ಲಿ ಬಿಜೆಪಿ ನಾಯಕರಾದ ಜಿ.ವಿವೇಕ್ ಮತ್ತು ಜಿತೇಂದರ್ ರೆಡ್ಡಿ ಅವರನ್ನು ಬಂಧಿಸಿ ಮತ್ತೆ ಹೈದರಾಬಾದ್‌ಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...