Homeಮುಖಪುಟತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ತೆಲಂಗಾಣ ಉಪಚುನಾವಣೆ: ಪೊಲೀಸರು ವಶಪಡಿಸಿಕೊಂಡ ಹಣ ಕಸಿದು ದುರ್ವರ್ತನೆ ತೋರಿದ ಬಿಜೆಪಿ ಕಾರ್ಯಕರ್ತರು!

ಚುನಾವಣೆಗಾಗಿ ಹಂಚುತ್ತಿದ್ದ 5.87 ಲಕ್ಷ ರೂ.ಗಳನ್ನು ನಾವು ವಶಪಡಿಸಿಕೊಂಡೆವು. ನಂತರ ಬಿಜೆಪಿ ಕಾರ್ಯಕರ್ತರು ಅದನ್ನು ಕಸಿದುಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಸಂಬಂಧಿ ಎಸ್.ಅಂಜನ್ ರಾವ್ ಮನೆಯಿಂದ ಪೊಲೀಸರು ವಶಪಡಿಸಿಕೊಂಡ ಸುಮಾರು 18.67 ಲಕ್ಷ ರೂ. ಹಣವನ್ನು ಬಿಜೆಪಿಯ ಕಾರ್ಯಕರ್ತರು ಪೊಲೀಸರಿಂದ ಕಸಿದುಕೊಂಡಿದ್ದರಿಂದ ಸಿದ್ದಿಪೇಟೆಯ ಉಪನ್ಯಾಸಕರ ಕಾಲೋನಿಯಲ್ಲಿ ಸೋಮವಾರ ಉದ್ವಿಗ್ನತೆ ಉಂಟಾಯಿತು.

ಈ ಘಟನೆ ನವಂಬರ್ 3 ರಂದು ನಡೆಯುವ ಉಪಚುನಾವಣೆಗೆ ಸಂಬಂಧಿಸಿದಂತೆ, ಮತದಾರರನ್ನು ಸೆಳೆಯಲು ಈ ಹಣವನ್ನು ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈ ಹಣವನ್ನು ವಶಪಡಿಸಿಕೊಂಡು ಹೊರಡುತ್ತಿರುವಾಗ ಅಲ್ಲಿಗೆ ತನ್ನ ಅನುಯಾಯಿಗಳೊಂದಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ ಕೋಲಾಹಲವನ್ನು ಸೃಷ್ಟಿಸಿದರು. ಇದರಿಂದ ಪೊಲೀಸರು ಮತ್ತು ಬಿಜೆಪಿ ನಾಯಕನ ಅನುಯಾಯಿಗಳ ನಡುವೆ ಜಗಳ ನಡೆದು, ಅನುಯಾಯಿಗಳು ಕಾನ್ಸ್ಟೇಬಲ್‌ನನ್ನು ಹಿಡಿದು ಅವರ ಕೈಯಲ್ಲಿದ್ದ ಹಣದ ಚೀಲವನ್ನು ಕಿತ್ತುಕೊಂಡನಂತರ, “ಮತದಾರರ ಮೇಲೆ ಪ್ರಭಾವ ಬೀರಲು ಹಣವನ್ನು ಬಳಸಿದ್ದಾರೆಂದು ಸುಳ್ಳು ಆರೋಪಗಳನ್ನು ಮಾಡಿ ಈ ಹಣವನ್ನು ಪೊಲೀಸರೇ ಅವರ ಮನೆಯಲ್ಲಿಟ್ಟಿದ್ದಾರೆ” ಎಂದು ಅವರು ಆರೋಪಿಸಿದರು.

ಮಾರನೆ ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್‌ಕುಮಾರ್ ರಘುನಂದನ್ ರಾವ್‌ಗೆ ಬೆಂಬಲ ನೀಡುವ ಸಲುವಾಗಿ ಸಿದ್ದಿಪೇಟೆಗೆ ಬಂದಾಗ ಅವರನ್ನೂ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಚಕಮಕಿಯ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮತದಾರರಿಗೆ ಹಣ ಹಂಚುತ್ತಿರುವ ಬಿಜೆಪಿ?

ಇದರ ನಂತರ ಸಿದ್ದಿಪೇಟೆಗೆ ಆಗಮಿಸಿದ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, “ರಾಜ್ಯದ ಬಿಜೆಪಿ ಮುಖ್ಯಸ್ಥರ ಮೇಲೆ ಕ್ರೂರ ಹಲ್ಲೆ ಮಾಡಿ ಬಂಧಿಸಿರುವುದು ನ್ಯಾಯಸಮ್ಮತವಲ್ಲ. ಇದು ಪ್ರಜಾಪ್ರಭುತ್ವದ ನಾಚಿಕೆಗೇಡಿತನ ಕೆಲಸ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಾರುತಿ ಮಾನ್ಪಡೆಯವರ ಸಾವಿಗೆ ಸರ್ಕಾರವೇ ನೇರ ಹೊಣೆ: ಐಕ್ಯ ಹೋರಾಟ ಸಮಿತಿ

ಇದರ ನಡುವೆ, ಸಿದ್ದಿಪೇಟೆ ಪೊಲೀಸ್ ಆಯುಕ್ತ ಜೋಯಲ್ ಡೇವಿಸ್, “ದುಬ್ಬಾಕ ಉಪಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಹಣ ನೀಡಲಾಗುತ್ತಿದೆ ಎಂಬ ಸುಳಿವಿನ ಆಧಾರದ ಮೇಲೆ 3 ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಸಿದ್ದಿಪೇಟೆ ಪುರಸಭೆ ಅಧ್ಯಕ್ಷ ಕೆ.ರಾಜನರಸು, ರಘುನಂದನ್ ರಾವ್ ಅವರ ಮಾವ ಎಸ್.ರಾಮ್ ಗೋಪಾಲ್ ರಾವ್ ಮತ್ತು ಅವರ ಸಂಬಂಧಿಕರಾದ ಎಸ್ ಅಂಜನ್ ರಾವ್ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಮತದಾರರಿಗೆ ಹಣ ಹಂಚುವ ಸಲುವಾಗಿ ರಘುನಂದನ್ ರಾವ್ ಅವರ ಸಂಬಂಧಿ ಜಿತೇಂದರ್ ರಾವ್ ತಮ್ಮ ಡ್ರೈವರ್ ಮೂಲಕ ಹಣವನ್ನು ಕಳುಹಿಸಿದ್ದು ಸಣ್ಣ ಪ್ರಮಾಣದಲ್ಲಿ ವಿತರಿಸುವಂತೆ ಹೇಳಿದ್ದರು. ನಾವು ಈ ಹಣವನ್ನು ವಶಪಡಿಸಿಕೊಂಡ ನಂತರ ಬಿಜೆಪಿ ಅಭ್ಯರ್ಥಿ ರಘುನಂದನ್ ರಾವ್ 200 ಸದಸ್ಯರೊಂದಿಗೆ ಬಂದು, 20-30 ಸದಸ್ಯರು ತಕ್ಷಣ ಒಳಗೆ ಹೋಗಿ 5.87 ಲಕ್ಷ ರೂ.ಗಳನ್ನು ಕಸಿದುಕೊಂಡರು. ಎಲ್ಲವೂ ದಾಖಲಾಗಿದೆ. ಅಪರಾಧಿಗಳನ್ನು ಗುರುತಿಸಿ, ಅವರ ವಿರುದ್ಧ ಕ್ರಿಮಿನಲ್ ಪ್ರಕರಗಳನ್ನು ದಾಖಲಿಸಲಾಗುವುದು” ಎಂದು ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ನಾಯಕನ ಸಂಬಂಧಿಯಾದ ರಾಮಗೋಪಾಲ್ ರಾವ್ ಮಾತನಾಡಿ, “ಪೊಲೀಸರು ಮನೆ ಮೇಲೆ ದಾಳಿ ನಡೆಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆ. ನಮ್ಮ ಕುಟುಂಬದ ಸದಸ್ಯರಿಂದ ಮೊಬೈಲ್‌ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ” ಎಂದು ಆರೋಪಿಸಿದರು.

ಈ ಬೆಳವಣಿಗೆಯಲ್ಲಿ ಬಿಜೆಪಿ ನಾಯಕರಾದ ಜಿ.ವಿವೇಕ್ ಮತ್ತು ಜಿತೇಂದರ್ ರೆಡ್ಡಿ ಅವರನ್ನು ಬಂಧಿಸಿ ಮತ್ತೆ ಹೈದರಾಬಾದ್‌ಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಮನುಸ್ಮೃತಿ ಬಗ್ಗೆ ಟೀಕೆ: ಪ್ರತಿಭಟನೆಗೆ ತೆರಳುತ್ತಿದ್ದ ನಟಿ ಖುಷ್ಬೂ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...