Homeಮುಖಪುಟತೆಲಂಗಾಣ ಜಾತಿ ಸಮೀಕ್ಷೆ : ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ಜಾತಿಯವರ ಪ್ರಮಾಣ ಶೇ. 56

ತೆಲಂಗಾಣ ಜಾತಿ ಸಮೀಕ್ಷೆ : ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ಜಾತಿಯವರ ಪ್ರಮಾಣ ಶೇ. 56

- Advertisement -
- Advertisement -

ಕಳೆದ ವರ್ಷದ (2024) ನವೆಂಬರ್ ಮತ್ತು ಡಿಸೆಂಬರ್‌ ತಿಂಗಳಲ್ಲಿ ನಡೆಸಿದ ಜಾತಿ ಜನಗಣತಿಯ ಪ್ರಕಾರ, ರಾಜ್ಯದ ಒಟ್ಟು ಜನಸಂಖ್ಯೆಯ ಶೇಖಡ 56.33ರಷ್ಟು ಹಿಂದುಳಿದ ಜಾತಿಗಳಿಗೆ ಸೇರಿದ ಜನರು ಇದ್ದಾರೆ ಎಂದು ತೆಲಂಗಾಣದ ಸಚಿವ ಉತ್ತಮ್ ಕುಮಾರ್ ರೆಡ್ಡಿ ಬಹಿರಂಗಪಡಿಸಿದ್ದಾರೆ.

ಹಿಂದುಳಿದ ಜಾತಿಗಳಲ್ಲಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ ಜನರು ಒಳಗೊಂಡಿದ್ದಾರೆ.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಮತ್ತು ಜಾತಿ ಸಮೀಕ್ಷೆಯ ಪ್ರಕಾರ, ತೆಲಂಗಾಣದ ಜನಸಂಖ್ಯೆಯಲ್ಲಿ ಮುಸ್ಲಿಮರನ್ನು ಹೊರತುಪಡಿಸಿ ಶೇಖಡ 46.25ರಷ್ಟು ಹಿಂದುಳಿದ ಜಾತಿಯವರು ಇದ್ದಾರೆ. ಹಿಂದುಳಿದ ಮುಸ್ಲಿಮರ ಜನಸಂಖ್ಯೆ ಶೇಖಡ 10.08ರಷ್ಟಿದೆ.

ಜನಗಣತಿಯ ಪ್ರಕಾರ ತೆಲಂಗಾಣದ ಜಾತಿವಾರು ಜನಸಂಖ್ಯೆ

ಪರಿಶಿಷ್ಟ ಜಾತಿಗಳು – 61,84,319 (17.43%)

ಪರಿಶಿಷ್ಟ ಪಂಗಡಗಳು- 37,05,929 (10.45%)

ಹಿಂದುಳಿದ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 1,64,09,179 (46.25%)

ಹಿಂದುಳಿದ ಜಾತಿಯ ಮುಸ್ಲಿಮರು – 35,76,588 (10.08%)

ಇತರೆ ಜಾತಿಯ ಮುಸ್ಲಿಮರು – 8,80,424 (2.48%)

ಇತರೆ ಜಾತಿಗಳು (ಮುಸ್ಲಿಮರನ್ನು ಹೊರತುಪಡಿಸಿ) – 13.31%

ಮುಸ್ಲಿಮರು (ಒಟ್ಟು) – 12.56%

ಇತರೆ ಜಾತಿಗಳು (ಒಟ್ಟು) – 15.79%

ತೆಲಂಗಾಣದಲ್ಲಿ ಕನಿಷ್ಠ 162 ಸಮುದಾಯಗಳನ್ನು ಹಿಂದುಳಿದ ಜಾತಿಗಳೆಂದು ವರ್ಗೀಕರಿಸಲಾಗಿದೆ. ಅವುಗಳನ್ನು ಎ, ಬಿ, ಸಿ, ಡಿ, ಇ ಎಂದು ಐದು ಗುಂಪುಗಳಾಗಿ ಉಪ ವರ್ಗೀಕರಣ ಮಾಡಲಾಗಿದೆ. ಇದರಲ್ಲಿ ಗುಂಪು ಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯವರನ್ನು ಒಳಗೊಂಡಿದೆ ಮತ್ತು ಗುಂಪು ಇ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಯ ಮುಸ್ಲಿಮರನ್ನು ಒಳಗೊಂಡಿದೆ.

2023ರ ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದು. ಶಿಕ್ಷಣ, ಉದ್ಯೋಗ ಮತ್ತು ಕಲ್ಯಾಣ ಯೋಜನೆಗಳಲ್ಲಿ ಹಿಂದುಳಿದಿರುವ ಸಮುದಾಯಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ವಿಸ್ತರಿಸುವುದಾಗಿಯೂ ಕಾಂಗ್ರೆಸ್ ಹೇಳಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಶೇಖಡ 23 ರಿಂದ ಶೇಖಡ 42ಕ್ಕೆ ಹೆಚ್ಚಿಸುವುದಾಗಿ ಮತ್ತು ಸರ್ಕಾರಿ ನಾಗರಿಕ ನಿರ್ಮಾಣ ಮತ್ತು ನಿರ್ವಹಣಾ ಒಪ್ಪಂದಗಳಲ್ಲಿ ಶೇಖಡ 42 ಹಿಂದುಳಿದ ಜಾತಿಗಳ ಮೀಸಲಾತಿಯನ್ನು ಜಾರಿಗೆ ತರುವುದಾಗಿಯೂ ಪಕ್ಷ ಭರವಸೆ ನೀಡಿತ್ತು.

ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...