Homeಚಳವಳಿಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

ಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ತಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸೋಮವಾರ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ 24 ಗಂಟೆಗಳ ಗಡುವು ನೀಡಿದ ಅವರು, ಒಕ್ಕೂಟ ಸರ್ಕಾರವು ರಾಜ್ಯದಿಂದ ಭತ್ತ ಖರೀದಿಸಿ ಪ್ರತಿಕ್ರಿಯಿಸಬೇಕು, ಇಲ್ಲವೆಂದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಶೀಘ್ರದಲ್ಲೇ ಹೊಸ ಕೃಷಿ ನೀತಿಯನ್ನು ರೂಪಿಸದಿದ್ದರೆ ರೈತರು ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರು ಅಳುವಲ್ಲೆಲ್ಲಾ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲ… ಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಚಂದ್ರಶೇಖರ್‌ ರಾವ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕೆಸಿಆರ್‌ ವಿರುದ್ಧ ಟೀಕೆ: ತೆಲಂಗಾಣ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ

“ತೆಲಂಗಾಣವು ತಮ್ಮ ಹಕ್ಕನ್ನು ಕೇಳುತ್ತದೆ. ಹೊಸ ಕೃಷಿ ನೀತಿಯನ್ನು ರೂಪಿಸಿ ಎಂದು ನಾನು ಪ್ರಧಾನಿಯವರಿಗೆ ಹೇಳಲು ಬಯಸುತ್ತೇನೆ. ಅದಕ್ಕೆ ನಾವು ಸಹ ಕೊಡುಗೆ ನೀಡುತ್ತೇವೆ. ಅದನ್ನು ಮಾಡದಿದ್ದರೆ ನಿಮ್ಮನ್ನು ತೆಗೆದುಹಾಕಲಾಗುತ್ತದೆ ಮತ್ತು ಹೊಸ ಸರ್ಕಾರವು ಹೊಸ ಸಮಗ್ರ ಕೃಷಿ ನೀತಿಯನ್ನು ಮಾಡುತ್ತದೆ” ಎಂದು ಅವರು ಧರಣಿ ಸ್ಥಳದಲ್ಲಿ ಹೇಳಿದ್ದಾರೆ.

ರೈತರು ಭಿಕ್ಷುಕರಲ್ಲ, ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪಡೆಯುವ ಹಕ್ಕಿದೆ ಎಂದು ಚಂದ್ರಶೇಖರ್‌ ರಾವ್‌ ಪ್ರತಿಪಾದಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆಟಿ ರಾಮರಾವ್, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಅನೇಕ ಟಿಆರ್‌ಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಸಕ್ತ ರಬಿ ಋತುವಿನಲ್ಲಿ ಬೇಯಿಸಿದ ಅಕ್ಕಿ(parboiled rice) ಖರೀದಿಸಲು ತೆಲಂಗಾಣದ ಮನವಿಯನ್ನು ಒಕ್ಕೂಟ ನಿರಾಕರಿಸಿದ ನಂತರ ಟಿಆರ್‌ಎಸ್ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ದೆಹಲಿಯನ್ನು ತಲುಪಿದೆ. ಆದರೆ ಒಕ್ಕೂಟ ಸರ್ಕಾರವು ಹಸಿ ಅಕ್ಕಿಯನ್ನು ಮಾತ್ರ ಖರೀದಿಸಬಹುದು ಎಂದು ಹೇಳಿದ್ದು, ಭಾರತದಲ್ಲಿ ಹೆಚ್ಚಾಗಿ ಸೇವಿಸದ ಬೇಯಿಸಿದ ಅಕ್ಕಿಯನ್ನು ಅಲ್ಲ ಎಂದು ಹೇಳಿದೆ.

“ಮೋದಿ ಮತ್ತು ಪಿಯೂಷ್‌ ಗೋಯಲ್‌ ಅವರನ್ನು 24 ಗಂಟೆಗಳ ಒಳಗೆ ಭತ್ತದ ಖರೀದಿಯ ಕುರಿತು ರಾಜ್ಯದ ಬೇಡಿಕೆಗೆ ಸ್ಪಂದಿಸುವಂತೆ ನಾನು ಕೈ ಜೋಡಿಸಿ ಎಂದು ಒತ್ತಾಯಿಸುತ್ತೇನೆ. ಅದರ ನಂತರ ನಾವು ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ಚಂದ್ರಶೇಖರ್‌ ರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ ದಿನವಿಡೀ ನಡೆದ ಧರಣಿಯಲ್ಲಿ ಇದ್ದು ಚಂದ್ರಶೇಖರ್‌ ರಾವ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2014 ರಲ್ಲಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷವು ದೇಶದ ರಾಜಧಾನಿಯಲ್ಲಿ ನಡೆಸುತ್ತಿರುವ ಮೊದಲ ಪ್ರತಿಭಟನಾ ರ್‍ಯಾಲಿ ಇದಾಗಿದೆ.

ಈ ಮಧ್ಯೆ, ಬಿಜೆಪಿ ತೆಲಂಗಾಣ ಭವನದ ಪ್ರತಿಭಟನಾ ಸ್ಥಳದ ಬಳಿ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಹಲವು ಪೋಸ್ಟರ್‌ಗಳನ್ನು ಹಾಕಿದೆ.

ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪೋಸ್ಟರ್‌ನಲ್ಲಿ, “ಕೆ. ಚಂದ್ರಶೇಖರ ರಾವ್‌, ಅಕ್ಕಿ ಖರೀದಿಯಲ್ಲಿ ನಿಮ್ಮ ಸಮಸ್ಯೆ ಏನು, ಈ ಧರಣಿ ಯಾಕೆ? ಇದು ರಾಜಕೀಯಕ್ಕಾಗಿಯೆ? ಅಥವಾ ರೈತರಿಗಾಗಿಯೆ? ನಿಮಗೆ ಸಾಧ್ಯವಾದರೆ ಅಕ್ಕಿ ಖರೀದಿಸಿ, ಇಲ್ಲದಿದ್ದರೆ ಸ್ಥಾನದಿಂದ ಕೆಳಗಿಳಿಯಿರಿ” ಎಂದು ಉಲ್ಲೇಖಿಸಲಾಗಿದೆ.

ಇತ್ತೀಚೆಗೆ, ಟಿಆರ್‌ಎಸ್ ಕಾರ್ಯಕರ್ತರು ತೆಲಂಗಾಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ದೇಶದಲ್ಲಿ “ಏಕರೂಪ” ಖರೀದಿ ನೀತಿಗಾಗಿ ತಮ್ಮ ಬೇಡಿಕೆಯನ್ನು ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...