Homeಚಳವಳಿಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

ಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ತಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸೋಮವಾರ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ 24 ಗಂಟೆಗಳ ಗಡುವು ನೀಡಿದ ಅವರು, ಒಕ್ಕೂಟ ಸರ್ಕಾರವು ರಾಜ್ಯದಿಂದ ಭತ್ತ ಖರೀದಿಸಿ ಪ್ರತಿಕ್ರಿಯಿಸಬೇಕು, ಇಲ್ಲವೆಂದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಶೀಘ್ರದಲ್ಲೇ ಹೊಸ ಕೃಷಿ ನೀತಿಯನ್ನು ರೂಪಿಸದಿದ್ದರೆ ರೈತರು ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರು ಅಳುವಲ್ಲೆಲ್ಲಾ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲ… ಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಚಂದ್ರಶೇಖರ್‌ ರಾವ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕೆಸಿಆರ್‌ ವಿರುದ್ಧ ಟೀಕೆ: ತೆಲಂಗಾಣ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ

“ತೆಲಂಗಾಣವು ತಮ್ಮ ಹಕ್ಕನ್ನು ಕೇಳುತ್ತದೆ. ಹೊಸ ಕೃಷಿ ನೀತಿಯನ್ನು ರೂಪಿಸಿ ಎಂದು ನಾನು ಪ್ರಧಾನಿಯವರಿಗೆ ಹೇಳಲು ಬಯಸುತ್ತೇನೆ. ಅದಕ್ಕೆ ನಾವು ಸಹ ಕೊಡುಗೆ ನೀಡುತ್ತೇವೆ. ಅದನ್ನು ಮಾಡದಿದ್ದರೆ ನಿಮ್ಮನ್ನು ತೆಗೆದುಹಾಕಲಾಗುತ್ತದೆ ಮತ್ತು ಹೊಸ ಸರ್ಕಾರವು ಹೊಸ ಸಮಗ್ರ ಕೃಷಿ ನೀತಿಯನ್ನು ಮಾಡುತ್ತದೆ” ಎಂದು ಅವರು ಧರಣಿ ಸ್ಥಳದಲ್ಲಿ ಹೇಳಿದ್ದಾರೆ.

ರೈತರು ಭಿಕ್ಷುಕರಲ್ಲ, ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪಡೆಯುವ ಹಕ್ಕಿದೆ ಎಂದು ಚಂದ್ರಶೇಖರ್‌ ರಾವ್‌ ಪ್ರತಿಪಾದಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆಟಿ ರಾಮರಾವ್, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಅನೇಕ ಟಿಆರ್‌ಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಸಕ್ತ ರಬಿ ಋತುವಿನಲ್ಲಿ ಬೇಯಿಸಿದ ಅಕ್ಕಿ(parboiled rice) ಖರೀದಿಸಲು ತೆಲಂಗಾಣದ ಮನವಿಯನ್ನು ಒಕ್ಕೂಟ ನಿರಾಕರಿಸಿದ ನಂತರ ಟಿಆರ್‌ಎಸ್ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ದೆಹಲಿಯನ್ನು ತಲುಪಿದೆ. ಆದರೆ ಒಕ್ಕೂಟ ಸರ್ಕಾರವು ಹಸಿ ಅಕ್ಕಿಯನ್ನು ಮಾತ್ರ ಖರೀದಿಸಬಹುದು ಎಂದು ಹೇಳಿದ್ದು, ಭಾರತದಲ್ಲಿ ಹೆಚ್ಚಾಗಿ ಸೇವಿಸದ ಬೇಯಿಸಿದ ಅಕ್ಕಿಯನ್ನು ಅಲ್ಲ ಎಂದು ಹೇಳಿದೆ.

“ಮೋದಿ ಮತ್ತು ಪಿಯೂಷ್‌ ಗೋಯಲ್‌ ಅವರನ್ನು 24 ಗಂಟೆಗಳ ಒಳಗೆ ಭತ್ತದ ಖರೀದಿಯ ಕುರಿತು ರಾಜ್ಯದ ಬೇಡಿಕೆಗೆ ಸ್ಪಂದಿಸುವಂತೆ ನಾನು ಕೈ ಜೋಡಿಸಿ ಎಂದು ಒತ್ತಾಯಿಸುತ್ತೇನೆ. ಅದರ ನಂತರ ನಾವು ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ಚಂದ್ರಶೇಖರ್‌ ರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ ದಿನವಿಡೀ ನಡೆದ ಧರಣಿಯಲ್ಲಿ ಇದ್ದು ಚಂದ್ರಶೇಖರ್‌ ರಾವ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2014 ರಲ್ಲಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷವು ದೇಶದ ರಾಜಧಾನಿಯಲ್ಲಿ ನಡೆಸುತ್ತಿರುವ ಮೊದಲ ಪ್ರತಿಭಟನಾ ರ್‍ಯಾಲಿ ಇದಾಗಿದೆ.

ಈ ಮಧ್ಯೆ, ಬಿಜೆಪಿ ತೆಲಂಗಾಣ ಭವನದ ಪ್ರತಿಭಟನಾ ಸ್ಥಳದ ಬಳಿ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಹಲವು ಪೋಸ್ಟರ್‌ಗಳನ್ನು ಹಾಕಿದೆ.

ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪೋಸ್ಟರ್‌ನಲ್ಲಿ, “ಕೆ. ಚಂದ್ರಶೇಖರ ರಾವ್‌, ಅಕ್ಕಿ ಖರೀದಿಯಲ್ಲಿ ನಿಮ್ಮ ಸಮಸ್ಯೆ ಏನು, ಈ ಧರಣಿ ಯಾಕೆ? ಇದು ರಾಜಕೀಯಕ್ಕಾಗಿಯೆ? ಅಥವಾ ರೈತರಿಗಾಗಿಯೆ? ನಿಮಗೆ ಸಾಧ್ಯವಾದರೆ ಅಕ್ಕಿ ಖರೀದಿಸಿ, ಇಲ್ಲದಿದ್ದರೆ ಸ್ಥಾನದಿಂದ ಕೆಳಗಿಳಿಯಿರಿ” ಎಂದು ಉಲ್ಲೇಖಿಸಲಾಗಿದೆ.

ಇತ್ತೀಚೆಗೆ, ಟಿಆರ್‌ಎಸ್ ಕಾರ್ಯಕರ್ತರು ತೆಲಂಗಾಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ದೇಶದಲ್ಲಿ “ಏಕರೂಪ” ಖರೀದಿ ನೀತಿಗಾಗಿ ತಮ್ಮ ಬೇಡಿಕೆಯನ್ನು ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....