Homeಚಳವಳಿಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

ಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ತಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸೋಮವಾರ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ 24 ಗಂಟೆಗಳ ಗಡುವು ನೀಡಿದ ಅವರು, ಒಕ್ಕೂಟ ಸರ್ಕಾರವು ರಾಜ್ಯದಿಂದ ಭತ್ತ ಖರೀದಿಸಿ ಪ್ರತಿಕ್ರಿಯಿಸಬೇಕು, ಇಲ್ಲವೆಂದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಶೀಘ್ರದಲ್ಲೇ ಹೊಸ ಕೃಷಿ ನೀತಿಯನ್ನು ರೂಪಿಸದಿದ್ದರೆ ರೈತರು ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರು ಅಳುವಲ್ಲೆಲ್ಲಾ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲ… ಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಚಂದ್ರಶೇಖರ್‌ ರಾವ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕೆಸಿಆರ್‌ ವಿರುದ್ಧ ಟೀಕೆ: ತೆಲಂಗಾಣ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ

“ತೆಲಂಗಾಣವು ತಮ್ಮ ಹಕ್ಕನ್ನು ಕೇಳುತ್ತದೆ. ಹೊಸ ಕೃಷಿ ನೀತಿಯನ್ನು ರೂಪಿಸಿ ಎಂದು ನಾನು ಪ್ರಧಾನಿಯವರಿಗೆ ಹೇಳಲು ಬಯಸುತ್ತೇನೆ. ಅದಕ್ಕೆ ನಾವು ಸಹ ಕೊಡುಗೆ ನೀಡುತ್ತೇವೆ. ಅದನ್ನು ಮಾಡದಿದ್ದರೆ ನಿಮ್ಮನ್ನು ತೆಗೆದುಹಾಕಲಾಗುತ್ತದೆ ಮತ್ತು ಹೊಸ ಸರ್ಕಾರವು ಹೊಸ ಸಮಗ್ರ ಕೃಷಿ ನೀತಿಯನ್ನು ಮಾಡುತ್ತದೆ” ಎಂದು ಅವರು ಧರಣಿ ಸ್ಥಳದಲ್ಲಿ ಹೇಳಿದ್ದಾರೆ.

ರೈತರು ಭಿಕ್ಷುಕರಲ್ಲ, ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪಡೆಯುವ ಹಕ್ಕಿದೆ ಎಂದು ಚಂದ್ರಶೇಖರ್‌ ರಾವ್‌ ಪ್ರತಿಪಾದಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆಟಿ ರಾಮರಾವ್, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಅನೇಕ ಟಿಆರ್‌ಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಸಕ್ತ ರಬಿ ಋತುವಿನಲ್ಲಿ ಬೇಯಿಸಿದ ಅಕ್ಕಿ(parboiled rice) ಖರೀದಿಸಲು ತೆಲಂಗಾಣದ ಮನವಿಯನ್ನು ಒಕ್ಕೂಟ ನಿರಾಕರಿಸಿದ ನಂತರ ಟಿಆರ್‌ಎಸ್ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ದೆಹಲಿಯನ್ನು ತಲುಪಿದೆ. ಆದರೆ ಒಕ್ಕೂಟ ಸರ್ಕಾರವು ಹಸಿ ಅಕ್ಕಿಯನ್ನು ಮಾತ್ರ ಖರೀದಿಸಬಹುದು ಎಂದು ಹೇಳಿದ್ದು, ಭಾರತದಲ್ಲಿ ಹೆಚ್ಚಾಗಿ ಸೇವಿಸದ ಬೇಯಿಸಿದ ಅಕ್ಕಿಯನ್ನು ಅಲ್ಲ ಎಂದು ಹೇಳಿದೆ.

“ಮೋದಿ ಮತ್ತು ಪಿಯೂಷ್‌ ಗೋಯಲ್‌ ಅವರನ್ನು 24 ಗಂಟೆಗಳ ಒಳಗೆ ಭತ್ತದ ಖರೀದಿಯ ಕುರಿತು ರಾಜ್ಯದ ಬೇಡಿಕೆಗೆ ಸ್ಪಂದಿಸುವಂತೆ ನಾನು ಕೈ ಜೋಡಿಸಿ ಎಂದು ಒತ್ತಾಯಿಸುತ್ತೇನೆ. ಅದರ ನಂತರ ನಾವು ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ಚಂದ್ರಶೇಖರ್‌ ರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ ದಿನವಿಡೀ ನಡೆದ ಧರಣಿಯಲ್ಲಿ ಇದ್ದು ಚಂದ್ರಶೇಖರ್‌ ರಾವ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2014 ರಲ್ಲಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷವು ದೇಶದ ರಾಜಧಾನಿಯಲ್ಲಿ ನಡೆಸುತ್ತಿರುವ ಮೊದಲ ಪ್ರತಿಭಟನಾ ರ್‍ಯಾಲಿ ಇದಾಗಿದೆ.

ಈ ಮಧ್ಯೆ, ಬಿಜೆಪಿ ತೆಲಂಗಾಣ ಭವನದ ಪ್ರತಿಭಟನಾ ಸ್ಥಳದ ಬಳಿ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಹಲವು ಪೋಸ್ಟರ್‌ಗಳನ್ನು ಹಾಕಿದೆ.

ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪೋಸ್ಟರ್‌ನಲ್ಲಿ, “ಕೆ. ಚಂದ್ರಶೇಖರ ರಾವ್‌, ಅಕ್ಕಿ ಖರೀದಿಯಲ್ಲಿ ನಿಮ್ಮ ಸಮಸ್ಯೆ ಏನು, ಈ ಧರಣಿ ಯಾಕೆ? ಇದು ರಾಜಕೀಯಕ್ಕಾಗಿಯೆ? ಅಥವಾ ರೈತರಿಗಾಗಿಯೆ? ನಿಮಗೆ ಸಾಧ್ಯವಾದರೆ ಅಕ್ಕಿ ಖರೀದಿಸಿ, ಇಲ್ಲದಿದ್ದರೆ ಸ್ಥಾನದಿಂದ ಕೆಳಗಿಳಿಯಿರಿ” ಎಂದು ಉಲ್ಲೇಖಿಸಲಾಗಿದೆ.

ಇತ್ತೀಚೆಗೆ, ಟಿಆರ್‌ಎಸ್ ಕಾರ್ಯಕರ್ತರು ತೆಲಂಗಾಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ದೇಶದಲ್ಲಿ “ಏಕರೂಪ” ಖರೀದಿ ನೀತಿಗಾಗಿ ತಮ್ಮ ಬೇಡಿಕೆಯನ್ನು ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...