Homeಚಳವಳಿಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

ಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ತಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸೋಮವಾರ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ 24 ಗಂಟೆಗಳ ಗಡುವು ನೀಡಿದ ಅವರು, ಒಕ್ಕೂಟ ಸರ್ಕಾರವು ರಾಜ್ಯದಿಂದ ಭತ್ತ ಖರೀದಿಸಿ ಪ್ರತಿಕ್ರಿಯಿಸಬೇಕು, ಇಲ್ಲವೆಂದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಶೀಘ್ರದಲ್ಲೇ ಹೊಸ ಕೃಷಿ ನೀತಿಯನ್ನು ರೂಪಿಸದಿದ್ದರೆ ರೈತರು ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರು ಅಳುವಲ್ಲೆಲ್ಲಾ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲ… ಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಚಂದ್ರಶೇಖರ್‌ ರಾವ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕೆಸಿಆರ್‌ ವಿರುದ್ಧ ಟೀಕೆ: ತೆಲಂಗಾಣ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ

“ತೆಲಂಗಾಣವು ತಮ್ಮ ಹಕ್ಕನ್ನು ಕೇಳುತ್ತದೆ. ಹೊಸ ಕೃಷಿ ನೀತಿಯನ್ನು ರೂಪಿಸಿ ಎಂದು ನಾನು ಪ್ರಧಾನಿಯವರಿಗೆ ಹೇಳಲು ಬಯಸುತ್ತೇನೆ. ಅದಕ್ಕೆ ನಾವು ಸಹ ಕೊಡುಗೆ ನೀಡುತ್ತೇವೆ. ಅದನ್ನು ಮಾಡದಿದ್ದರೆ ನಿಮ್ಮನ್ನು ತೆಗೆದುಹಾಕಲಾಗುತ್ತದೆ ಮತ್ತು ಹೊಸ ಸರ್ಕಾರವು ಹೊಸ ಸಮಗ್ರ ಕೃಷಿ ನೀತಿಯನ್ನು ಮಾಡುತ್ತದೆ” ಎಂದು ಅವರು ಧರಣಿ ಸ್ಥಳದಲ್ಲಿ ಹೇಳಿದ್ದಾರೆ.

ರೈತರು ಭಿಕ್ಷುಕರಲ್ಲ, ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪಡೆಯುವ ಹಕ್ಕಿದೆ ಎಂದು ಚಂದ್ರಶೇಖರ್‌ ರಾವ್‌ ಪ್ರತಿಪಾದಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆಟಿ ರಾಮರಾವ್, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಅನೇಕ ಟಿಆರ್‌ಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಸಕ್ತ ರಬಿ ಋತುವಿನಲ್ಲಿ ಬೇಯಿಸಿದ ಅಕ್ಕಿ(parboiled rice) ಖರೀದಿಸಲು ತೆಲಂಗಾಣದ ಮನವಿಯನ್ನು ಒಕ್ಕೂಟ ನಿರಾಕರಿಸಿದ ನಂತರ ಟಿಆರ್‌ಎಸ್ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ದೆಹಲಿಯನ್ನು ತಲುಪಿದೆ. ಆದರೆ ಒಕ್ಕೂಟ ಸರ್ಕಾರವು ಹಸಿ ಅಕ್ಕಿಯನ್ನು ಮಾತ್ರ ಖರೀದಿಸಬಹುದು ಎಂದು ಹೇಳಿದ್ದು, ಭಾರತದಲ್ಲಿ ಹೆಚ್ಚಾಗಿ ಸೇವಿಸದ ಬೇಯಿಸಿದ ಅಕ್ಕಿಯನ್ನು ಅಲ್ಲ ಎಂದು ಹೇಳಿದೆ.

“ಮೋದಿ ಮತ್ತು ಪಿಯೂಷ್‌ ಗೋಯಲ್‌ ಅವರನ್ನು 24 ಗಂಟೆಗಳ ಒಳಗೆ ಭತ್ತದ ಖರೀದಿಯ ಕುರಿತು ರಾಜ್ಯದ ಬೇಡಿಕೆಗೆ ಸ್ಪಂದಿಸುವಂತೆ ನಾನು ಕೈ ಜೋಡಿಸಿ ಎಂದು ಒತ್ತಾಯಿಸುತ್ತೇನೆ. ಅದರ ನಂತರ ನಾವು ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ಚಂದ್ರಶೇಖರ್‌ ರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ ದಿನವಿಡೀ ನಡೆದ ಧರಣಿಯಲ್ಲಿ ಇದ್ದು ಚಂದ್ರಶೇಖರ್‌ ರಾವ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2014 ರಲ್ಲಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷವು ದೇಶದ ರಾಜಧಾನಿಯಲ್ಲಿ ನಡೆಸುತ್ತಿರುವ ಮೊದಲ ಪ್ರತಿಭಟನಾ ರ್‍ಯಾಲಿ ಇದಾಗಿದೆ.

ಈ ಮಧ್ಯೆ, ಬಿಜೆಪಿ ತೆಲಂಗಾಣ ಭವನದ ಪ್ರತಿಭಟನಾ ಸ್ಥಳದ ಬಳಿ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಹಲವು ಪೋಸ್ಟರ್‌ಗಳನ್ನು ಹಾಕಿದೆ.

ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪೋಸ್ಟರ್‌ನಲ್ಲಿ, “ಕೆ. ಚಂದ್ರಶೇಖರ ರಾವ್‌, ಅಕ್ಕಿ ಖರೀದಿಯಲ್ಲಿ ನಿಮ್ಮ ಸಮಸ್ಯೆ ಏನು, ಈ ಧರಣಿ ಯಾಕೆ? ಇದು ರಾಜಕೀಯಕ್ಕಾಗಿಯೆ? ಅಥವಾ ರೈತರಿಗಾಗಿಯೆ? ನಿಮಗೆ ಸಾಧ್ಯವಾದರೆ ಅಕ್ಕಿ ಖರೀದಿಸಿ, ಇಲ್ಲದಿದ್ದರೆ ಸ್ಥಾನದಿಂದ ಕೆಳಗಿಳಿಯಿರಿ” ಎಂದು ಉಲ್ಲೇಖಿಸಲಾಗಿದೆ.

ಇತ್ತೀಚೆಗೆ, ಟಿಆರ್‌ಎಸ್ ಕಾರ್ಯಕರ್ತರು ತೆಲಂಗಾಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ದೇಶದಲ್ಲಿ “ಏಕರೂಪ” ಖರೀದಿ ನೀತಿಗಾಗಿ ತಮ್ಮ ಬೇಡಿಕೆಯನ್ನು ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...