Homeಚಳವಳಿಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

ಪ್ರಧಾನಿ ಮೋದಿಗೆ 24 ಗಂಟೆಗಳ ಗಡುವು ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್!

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ತಮ್ಮ ರಾಜ್ಯದ ರೈತರಿಂದ ಅಕ್ಕಿ ಖರೀದಿಸುವ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸೋಮವಾರ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ 24 ಗಂಟೆಗಳ ಗಡುವು ನೀಡಿದ ಅವರು, ಒಕ್ಕೂಟ ಸರ್ಕಾರವು ರಾಜ್ಯದಿಂದ ಭತ್ತ ಖರೀದಿಸಿ ಪ್ರತಿಕ್ರಿಯಿಸಬೇಕು, ಇಲ್ಲವೆಂದರೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಚಂದ್ರಶೇಖರ ರಾವ್‌ ಹೇಳಿದ್ದಾರೆ.

ಶೀಘ್ರದಲ್ಲೇ ಹೊಸ ಕೃಷಿ ನೀತಿಯನ್ನು ರೂಪಿಸದಿದ್ದರೆ ರೈತರು ಸರ್ಕಾರವನ್ನು ಬೀಳಿಸುತ್ತಾರೆ ಎಂದು ಅವರು ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ರೈತರೊಂದಿಗೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ನಾನು ಪ್ರಧಾನಿ ಮೋದಿಯವರಿಗೆ ಎಚ್ಚರಿಕೆ ನೀಡುತ್ತೇನೆ. ರೈತರು ಅಳುವಲ್ಲೆಲ್ಲಾ ಸರ್ಕಾರ ಅಧಿಕಾರ ಕಳೆದುಕೊಳ್ಳುತ್ತದೆ ಎಂಬುದಕ್ಕೆ ಭಾರತೀಯ ಇತಿಹಾಸ ಸಾಕ್ಷಿಯಾಗಿದೆ. ಯಾರೂ ಶಾಶ್ವತರಲ್ಲ… ಅಧಿಕಾರದಲ್ಲಿದ್ದಾಗ ರೈತರಿಗೆ ಅನ್ಯಾಯ ಮಾಡಬೇಡಿ” ಎಂದು ಚಂದ್ರಶೇಖರ್‌ ರಾವ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕೆಸಿಆರ್‌ ವಿರುದ್ಧ ಟೀಕೆ: ತೆಲಂಗಾಣ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ ಬಂಧನ

“ತೆಲಂಗಾಣವು ತಮ್ಮ ಹಕ್ಕನ್ನು ಕೇಳುತ್ತದೆ. ಹೊಸ ಕೃಷಿ ನೀತಿಯನ್ನು ರೂಪಿಸಿ ಎಂದು ನಾನು ಪ್ರಧಾನಿಯವರಿಗೆ ಹೇಳಲು ಬಯಸುತ್ತೇನೆ. ಅದಕ್ಕೆ ನಾವು ಸಹ ಕೊಡುಗೆ ನೀಡುತ್ತೇವೆ. ಅದನ್ನು ಮಾಡದಿದ್ದರೆ ನಿಮ್ಮನ್ನು ತೆಗೆದುಹಾಕಲಾಗುತ್ತದೆ ಮತ್ತು ಹೊಸ ಸರ್ಕಾರವು ಹೊಸ ಸಮಗ್ರ ಕೃಷಿ ನೀತಿಯನ್ನು ಮಾಡುತ್ತದೆ” ಎಂದು ಅವರು ಧರಣಿ ಸ್ಥಳದಲ್ಲಿ ಹೇಳಿದ್ದಾರೆ.

ರೈತರು ಭಿಕ್ಷುಕರಲ್ಲ, ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಪಡೆಯುವ ಹಕ್ಕಿದೆ ಎಂದು ಚಂದ್ರಶೇಖರ್‌ ರಾವ್‌ ಪ್ರತಿಪಾದಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಮತ್ತು ಸಚಿವ ಕೆಟಿ ರಾಮರಾವ್, ಸಚಿವರು, ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳು ಸೇರಿದಂತೆ ಅನೇಕ ಟಿಆರ್‌ಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಪ್ರಸಕ್ತ ರಬಿ ಋತುವಿನಲ್ಲಿ ಬೇಯಿಸಿದ ಅಕ್ಕಿ(parboiled rice) ಖರೀದಿಸಲು ತೆಲಂಗಾಣದ ಮನವಿಯನ್ನು ಒಕ್ಕೂಟ ನಿರಾಕರಿಸಿದ ನಂತರ ಟಿಆರ್‌ಎಸ್ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ದೆಹಲಿಯನ್ನು ತಲುಪಿದೆ. ಆದರೆ ಒಕ್ಕೂಟ ಸರ್ಕಾರವು ಹಸಿ ಅಕ್ಕಿಯನ್ನು ಮಾತ್ರ ಖರೀದಿಸಬಹುದು ಎಂದು ಹೇಳಿದ್ದು, ಭಾರತದಲ್ಲಿ ಹೆಚ್ಚಾಗಿ ಸೇವಿಸದ ಬೇಯಿಸಿದ ಅಕ್ಕಿಯನ್ನು ಅಲ್ಲ ಎಂದು ಹೇಳಿದೆ.

“ಮೋದಿ ಮತ್ತು ಪಿಯೂಷ್‌ ಗೋಯಲ್‌ ಅವರನ್ನು 24 ಗಂಟೆಗಳ ಒಳಗೆ ಭತ್ತದ ಖರೀದಿಯ ಕುರಿತು ರಾಜ್ಯದ ಬೇಡಿಕೆಗೆ ಸ್ಪಂದಿಸುವಂತೆ ನಾನು ಕೈ ಜೋಡಿಸಿ ಎಂದು ಒತ್ತಾಯಿಸುತ್ತೇನೆ. ಅದರ ನಂತರ ನಾವು ಪ್ರತಿಭಟನೆಗೆ ಕರೆ ನೀಡುತ್ತೇವೆ” ಎಂದು ಚಂದ್ರಶೇಖರ್‌ ರಾವ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಕೂಡ ದಿನವಿಡೀ ನಡೆದ ಧರಣಿಯಲ್ಲಿ ಇದ್ದು ಚಂದ್ರಶೇಖರ್‌ ರಾವ್‌ ಅವರಿಗೆ ಬೆಂಬಲ ವ್ಯಕ್ತಪಡಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2014 ರಲ್ಲಿ ತೆಲಂಗಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷವು ದೇಶದ ರಾಜಧಾನಿಯಲ್ಲಿ ನಡೆಸುತ್ತಿರುವ ಮೊದಲ ಪ್ರತಿಭಟನಾ ರ್‍ಯಾಲಿ ಇದಾಗಿದೆ.

ಈ ಮಧ್ಯೆ, ಬಿಜೆಪಿ ತೆಲಂಗಾಣ ಭವನದ ಪ್ರತಿಭಟನಾ ಸ್ಥಳದ ಬಳಿ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಹಲವು ಪೋಸ್ಟರ್‌ಗಳನ್ನು ಹಾಕಿದೆ.

ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪೋಸ್ಟರ್‌ನಲ್ಲಿ, “ಕೆ. ಚಂದ್ರಶೇಖರ ರಾವ್‌, ಅಕ್ಕಿ ಖರೀದಿಯಲ್ಲಿ ನಿಮ್ಮ ಸಮಸ್ಯೆ ಏನು, ಈ ಧರಣಿ ಯಾಕೆ? ಇದು ರಾಜಕೀಯಕ್ಕಾಗಿಯೆ? ಅಥವಾ ರೈತರಿಗಾಗಿಯೆ? ನಿಮಗೆ ಸಾಧ್ಯವಾದರೆ ಅಕ್ಕಿ ಖರೀದಿಸಿ, ಇಲ್ಲದಿದ್ದರೆ ಸ್ಥಾನದಿಂದ ಕೆಳಗಿಳಿಯಿರಿ” ಎಂದು ಉಲ್ಲೇಖಿಸಲಾಗಿದೆ.

ಇತ್ತೀಚೆಗೆ, ಟಿಆರ್‌ಎಸ್ ಕಾರ್ಯಕರ್ತರು ತೆಲಂಗಾಣದಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ದೇಶದಲ್ಲಿ “ಏಕರೂಪ” ಖರೀದಿ ನೀತಿಗಾಗಿ ತಮ್ಮ ಬೇಡಿಕೆಯನ್ನು ಒತ್ತಾಯಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಹಿಜಾಬ್ ರಾಜಕೀಯ: ಬಿಜೆಪಿ ಮೇಲೆ ತೆಲಂಗಾಣ ಸಿಎಂ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...