Homeಮುಖಪುಟತೆಲಂಗಾಣ| ಸರ್ಕಾರಿ ಶಾಲೆಗಳಲ್ಲಿ 'ಮುಖ್ಯಮಂತ್ರಿ ಉಪಹಾರ ಯೋಜನೆ' ಘೋಷಿಸಿದ ರೇವಂತ್ ರೆಡ್ಡಿ

ತೆಲಂಗಾಣ| ಸರ್ಕಾರಿ ಶಾಲೆಗಳಲ್ಲಿ ‘ಮುಖ್ಯಮಂತ್ರಿ ಉಪಹಾರ ಯೋಜನೆ’ ಘೋಷಿಸಿದ ರೇವಂತ್ ರೆಡ್ಡಿ

- Advertisement -
- Advertisement -

ತಮಿಳುನಾಡಿನ ‘ಪ್ರವರ್ತಕ’ ಉಪಕ್ರಮ ಯೋಜನೆಯಿಂದ ಪ್ರೇರಿತರಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ತಮ್ಮ ಸರ್ಕಾರ ರಾಜ್ಯದಲ್ಲಿ ‘ಮುಖ್ಯಮಂತ್ರಿ ಉಪಹಾರ ಯೋಜನೆ’ ಯನ್ನು ಪರಿಚಯಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘೋಷಿಸಿದರು.

ಶುಕ್ರವಾರ ಚೆನ್ನೈನಲ್ಲಿ ನಡೆದ “ತಮಿಳುನಾಡು ಶಿಕ್ಷಣದಲ್ಲಿ ಶ್ರೇಷ್ಠತೆ” ಕಾರ್ಯಕ್ರಮದಲ್ಲಿ ಮಾತನಾಡಿದ ರೇವಂತ್ ರೆಡ್ಡಿ, ಈ ಯೋಜನೆಯು 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಶಾಲಾ ಹಾಜರಾತಿಯನ್ನು ಸುಧಾರಿಸುತ್ತದೆ, ಶಾಲೆ ಬಿಡುವುದನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು. ಈ ಕಾರ್ಯಕ್ರಮವನ್ನು ‘ಹೃದಯಸ್ಪರ್ಶಿ’ ಎಂದು ಬಣ್ಣಿಸಿದ ಅವರು, ಇದನ್ನು ಕಲ್ಪಿಸಿದ್ದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಶ್ಲಾಘಿಸಿದರು.

“ತಮ್ಮ ಪೋಷಕರು ಕೆಲಸಕ್ಕೆ ಬೇಗನೆ ಹೋದಾಗ ಶಾಲಾ ಮಕ್ಕಳು ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಈ ಯೋಜನೆಯನ್ನು ಜಾರಿಗೆ ತಂದ ಸಿಎಂ ಸ್ಟಾಲಿನ್ ಅವರಿಂದ ನಾನು ಸ್ಫೂರ್ತಿ ಪಡೆಯುತ್ತಿದ್ದೇನೆ. ಮುಂದಿನ ಶೈಕ್ಷಣಿಕ ವರ್ಷದಿಂದ ತೆಲಂಗಾಣ ಈ ಕ್ರಾಂತಿಕಾರಿ ಉಪಕ್ರಮವನ್ನು ಪುನರಾವರ್ತಿಸಲಿದೆ” ಎಂದು ರೆಡ್ಡಿ ಹೇಳಿದರು.

ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೇವಂತ್ ರೆಡ್ಡಿ ವಿಶೇಷ ಆಹ್ವಾನಿತ ಮತ್ತು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮವು ದ್ರಾವಿಡ ಮಾದರಿ ಆಡಳಿತದ ಅಡಿಯಲ್ಲಿ ವಿವಿಧ ವಿದ್ಯಾರ್ಥಿ ಕೇಂದ್ರಿತ ಯೋಜನೆಗಳ ಮೂಲಕ ಶಿಕ್ಷಣದಲ್ಲಿ ತಮಿಳುನಾಡಿನ ಪ್ರಗತಿಯನ್ನು ತೋರಿಸುತ್ತಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸ್ಟಾಲಿನ್, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಹಾಗೂ ತೆಲಂಗಾಣದಲ್ಲಿ ಉಪಾಹಾರ ಯೋಜನೆಯನ್ನು ಘೋಷಿಸಿದ್ದಕ್ಕಾಗಿ ರೆಡ್ಡಿಗೆ ಧನ್ಯವಾದ ಅರ್ಪಿಸಿದರು. “ಪುದುಮೈ ಪೆನ್, ನಾನ್ ಮುಧಲ್ವನ್ ಮತ್ತು ತಮಿಳು ಪುತಲ್ವನ್‌ನಂತಹ ನಮ್ಮ ಪ್ರಮುಖ ಯೋಜನೆಗಳನ್ನು ಶ್ಲಾಘಿಸುವ ಮೂಲಕ, ಶಿಕ್ಷಣದಲ್ಲಿ ತಮಿಳುನಾಡಿನ ಪ್ರವರ್ತಕ ಮಾರ್ಗವು ಇಡೀ ಭಾರತಕ್ಕೆ ದಾರಿಯನ್ನು ಬೆಳಗಿಸುತ್ತಿದೆ ಎಂದು ನೀವು ಪುನರುಚ್ಚರಿಸಿದ್ದೀರಿ” ಎಂದು ಸ್ಟಾಲಿನ್ ಬರೆದಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಆದೇಶ ಹೊರಡಿಸಿದ ತೆಲಂಗಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ "ಸಂಪೂರ್ಣ ಯುದ್ಧ" ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. "ಇರಾನ್‌ನಲ್ಲಿ ಹೊಸ ನಾಯಕತ್ವವನ್ನು...