Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

ಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಇದ್ದ ಒಬ್ಬ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ನಾಲ್ಕು ಮಕ್ಕಳ ಜವಾಬ್ದಾರಿ ವಹಿಸಿಕೊಳ್ಳಲು ತೆಲಗಾಂಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಮುಂದಾಗಿದ್ದಾರೆ.

ಹೈದ್ರಾಬಾದ್‌ನ ಭೌದ್ದನಗರ್ ಎಂಬಲ್ಲಿ ವಾಸವಿದ್ದ ಸಂಜಯ್ ಮತ್ತು ರಾಧ ಇಬ್ಬರೂ ಕೂಲಿಕಾರ್ಮಿಕರು. ಕಷ್ಟಪಟ್ಟು ಅಲ್ಲಿ ಇಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಇವರಿಗೆ ನಾಲ್ಕು ಜನ ಮಕ್ಕಳಿದ್ದು, ಅವರು ತಮ್ಮಂತೆ ಕೂಲಿ ಕಾರ್ಮಿಕರಾಗದೇ ಓದಿ ವಿದ್ಯಾವಂತರಾಗಬೇಕೆಂದು ಸಾಕಷ್ಟು ಕನಸು ಕಂಡಿದ್ದರು.

ಆದರೆ ಮೂರು ವರ್ಷಗಳ ಕೆಳಗೆ ಸಂಜಯ್ ಏಕಾಏಕಿ ಅನಾರೋಗ್ಯದಿಂದ ಮರಣ ಹೊಂದಿದ್ದಾನೆ. ಇದರಿಂದ ನಾಲ್ಕು ಮಕ್ಕಳ ಜವಾಬ್ದಾರಿ ತಾಯಿ ರಾಧ ಹೆಗಲಿಗೆ ಬಿದ್ದಿದೆ. ಅವರೊಬ್ಬರೆ ನಾಲ್ಕು ಮಕ್ಕಳನ್ನು ಓದಿಸುವ ಜವಾಬ್ದಾರಿ ಹೊತ್ತು ಸಾಲಕ್ಕೆ ತುತ್ತಾಗಿದ್ದಾರೆ.

ನಾಲ್ಕು ಮಕ್ಕಳನ್ನು ಒಬ್ಬರೆ ದುಡಿದು ಸಾಕುವುದು ಎಷ್ಟು ಕಷ್ಟ ಎಂದು ಎಲ್ಲರಿಗೂ ಗೊತ್ತಿದೆ. ಸಾಕಷ್ಟು ಒತ್ತಡದಲ್ಲಿದ್ದ ರಾಧರವರಿಗೂ ಅನಾರೋಗ್ಯ ಕಾಡತೊಡಗಿತ್ತು. ಇಂತಹ ಸಮಯದಲ್ಲಿ ಎರಗಿಬಂದ 21 ದಿನಗಳ ಲಾಕ್‌ಡೌನ್‌ ಅವರನ್ನು ಅಕ್ಷರಶಃ ಪ್ರಪಾತಕ್ಕೆ ತಳ್ಳಿದೆ. ಕೆಲಸವಿಲ್ಲದೇ ನಾಲ್ಕು ಜನರನ್ನು ಸಾಕುವ ಒತ್ತಡ ಅವರನ್ನು ಕೊನೆಗೂ ಸಾವಿನ ದವಡೆಗೆ ತಳ್ಳಿಬಿಟ್ಟಿದೆ.

ಮೊದಲೇ ತಂದೆ ಕಳೆದುಕೊಂಡು ದುಃಖದಲ್ಲಿದ್ದ ನಾಲ್ಕು ಮತ್ತು ತಮ್ಮ ತಾಯಿಯ ಮರಣದಿಂದ ಆಘಾತಕ್ಕೊಳಕ್ಕಾಗಿದ್ದಾರೆ. ಅವರು ಎಷ್ಟು ಬಡವರೆಂದರ ರಾಧರವರು ಮರಣ ಹೊಂದಿದಾಗ ಅವರ ಅಂತ್ಯಕ್ರಿಯೆ ಮಾಡಲು ಸಹ ಅವರ ಸಂಬಂಧಿಕರ ಬಳಿ ಹಣವಿರಲಿಲ್ಲ. ಕೊನೆಗೆ ಸ್ವಯಂ ಸೇವಾ ಸಂಸ್ಥೆಯೊಂದುಸ ಸರ್ಕಾರದ ಸಹಾಯದಿಂದ ಅಂತ್ಯಕ್ರಿಯೆ ಮಾಡಿದೆ.

ಇಂತಹ ಸಮಯದಲ್ಲಿ ತಬ್ಬಲಿಗಳಾಗಿ ದಿಕ್ಕುತೋಚದೆ ಕಂಗಲಾಗಿದ್ದ ಈ ಮಕ್ಕಳ ವಿಷಯವನ್ನು ತಿಳಿದ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ “ಈ ಘಟನೆ ನನ್ನ ಮನಸ್ಸನ್ನು ತಟ್ಟಿದೆ. ಹಾಗಾಗಿ ಆ ನಾಲ್ಕು ಜನ ಮಕ್ಕಳನ್ನು ಸರ್ಕಾರವೇ ನೋಡಿಕೊಳ್ಳಲಿದ್ದು, ಅವರನ್ನು ಶೀಘ್ರ ಜಿಲ್ಲಾಧಿಕಾರಿಗಳ ಉಸ್ತುವಾರಿಗೆ ನೀಡಬೇಕೆಂದು ತಿಳಿಸಿದ್ದಾರೆ.

ಆ ಮಕ್ಕಳ ಎಲ್ಲಾ ರೀತಿ ಜವಾಬ್ದಾರಿಯನ್ನು ಸರ್ಕಾರವೇ ಭರಿಸುವುದಾಗಿ ಹೇಳಿರುವ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಆ ಮಕ್ಕಳ ಶಿಕ್ಷಣ ಸೇರಿದಂತೆ ಇತರ ಅಗತ್ಯಗಳನ್ನು ನೋಡಿಕೊಳ್ಳುವಂತೆ ಸೂಚನೆಗಳನ್ನು ನೀಡಿದ್ದಾರೆ. ಅವರು ಕಷ್ಟಕಾಲದಲ್ಲಿ ಮಾನವೀಯತೆ ಸಾರುವ ಮೂಲಕ ಮಾದರಿಯಾಗಿದ್ದಾರೆ.

ಇತ್ತ ಕರ್ನಾಟಕದಲ್ಲಿ ಸಿಂಧನೂರಿನ ಗಂಗಮ್ಮ ಎಂಬ ಹೆಣ್ಣು ಮಗಳೊಬ್ಬಳು ಲಾಕ್‌ಡೌನ್‌ ಸಮಯದಲ್ಲಿ ಕಾಲ್ನಡಿಗೆಯಲ್ಲಿ ತನ್ನೂರಿಗೆ ಹೊರಟಿದ್ದಾಗ ಅನ್ನ ನೀರು ಸಿಗದೇ ಬಳಲಿ ಸಾವನಪ್ಪಿದ ಘಟನೆ ಇದೇ ಸಮಯದಲ್ಲಿ ಜರುಗಿದೆ.


ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...