Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

ಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಇದ್ದ ಒಬ್ಬ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ನಾಲ್ಕು ಮಕ್ಕಳ ಜವಾಬ್ದಾರಿ ವಹಿಸಿಕೊಳ್ಳಲು ತೆಲಗಾಂಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಮುಂದಾಗಿದ್ದಾರೆ.

ಹೈದ್ರಾಬಾದ್‌ನ ಭೌದ್ದನಗರ್ ಎಂಬಲ್ಲಿ ವಾಸವಿದ್ದ ಸಂಜಯ್ ಮತ್ತು ರಾಧ ಇಬ್ಬರೂ ಕೂಲಿಕಾರ್ಮಿಕರು. ಕಷ್ಟಪಟ್ಟು ಅಲ್ಲಿ ಇಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಇವರಿಗೆ ನಾಲ್ಕು ಜನ ಮಕ್ಕಳಿದ್ದು, ಅವರು ತಮ್ಮಂತೆ ಕೂಲಿ ಕಾರ್ಮಿಕರಾಗದೇ ಓದಿ ವಿದ್ಯಾವಂತರಾಗಬೇಕೆಂದು ಸಾಕಷ್ಟು ಕನಸು ಕಂಡಿದ್ದರು.

ಆದರೆ ಮೂರು ವರ್ಷಗಳ ಕೆಳಗೆ ಸಂಜಯ್ ಏಕಾಏಕಿ ಅನಾರೋಗ್ಯದಿಂದ ಮರಣ ಹೊಂದಿದ್ದಾನೆ. ಇದರಿಂದ ನಾಲ್ಕು ಮಕ್ಕಳ ಜವಾಬ್ದಾರಿ ತಾಯಿ ರಾಧ ಹೆಗಲಿಗೆ ಬಿದ್ದಿದೆ. ಅವರೊಬ್ಬರೆ ನಾಲ್ಕು ಮಕ್ಕಳನ್ನು ಓದಿಸುವ ಜವಾಬ್ದಾರಿ ಹೊತ್ತು ಸಾಲಕ್ಕೆ ತುತ್ತಾಗಿದ್ದಾರೆ.

ನಾಲ್ಕು ಮಕ್ಕಳನ್ನು ಒಬ್ಬರೆ ದುಡಿದು ಸಾಕುವುದು ಎಷ್ಟು ಕಷ್ಟ ಎಂದು ಎಲ್ಲರಿಗೂ ಗೊತ್ತಿದೆ. ಸಾಕಷ್ಟು ಒತ್ತಡದಲ್ಲಿದ್ದ ರಾಧರವರಿಗೂ ಅನಾರೋಗ್ಯ ಕಾಡತೊಡಗಿತ್ತು. ಇಂತಹ ಸಮಯದಲ್ಲಿ ಎರಗಿಬಂದ 21 ದಿನಗಳ ಲಾಕ್‌ಡೌನ್‌ ಅವರನ್ನು ಅಕ್ಷರಶಃ ಪ್ರಪಾತಕ್ಕೆ ತಳ್ಳಿದೆ. ಕೆಲಸವಿಲ್ಲದೇ ನಾಲ್ಕು ಜನರನ್ನು ಸಾಕುವ ಒತ್ತಡ ಅವರನ್ನು ಕೊನೆಗೂ ಸಾವಿನ ದವಡೆಗೆ ತಳ್ಳಿಬಿಟ್ಟಿದೆ.

ಮೊದಲೇ ತಂದೆ ಕಳೆದುಕೊಂಡು ದುಃಖದಲ್ಲಿದ್ದ ನಾಲ್ಕು ಮತ್ತು ತಮ್ಮ ತಾಯಿಯ ಮರಣದಿಂದ ಆಘಾತಕ್ಕೊಳಕ್ಕಾಗಿದ್ದಾರೆ. ಅವರು ಎಷ್ಟು ಬಡವರೆಂದರ ರಾಧರವರು ಮರಣ ಹೊಂದಿದಾಗ ಅವರ ಅಂತ್ಯಕ್ರಿಯೆ ಮಾಡಲು ಸಹ ಅವರ ಸಂಬಂಧಿಕರ ಬಳಿ ಹಣವಿರಲಿಲ್ಲ. ಕೊನೆಗೆ ಸ್ವಯಂ ಸೇವಾ ಸಂಸ್ಥೆಯೊಂದುಸ ಸರ್ಕಾರದ ಸಹಾಯದಿಂದ ಅಂತ್ಯಕ್ರಿಯೆ ಮಾಡಿದೆ.

ಇಂತಹ ಸಮಯದಲ್ಲಿ ತಬ್ಬಲಿಗಳಾಗಿ ದಿಕ್ಕುತೋಚದೆ ಕಂಗಲಾಗಿದ್ದ ಈ ಮಕ್ಕಳ ವಿಷಯವನ್ನು ತಿಳಿದ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ “ಈ ಘಟನೆ ನನ್ನ ಮನಸ್ಸನ್ನು ತಟ್ಟಿದೆ. ಹಾಗಾಗಿ ಆ ನಾಲ್ಕು ಜನ ಮಕ್ಕಳನ್ನು ಸರ್ಕಾರವೇ ನೋಡಿಕೊಳ್ಳಲಿದ್ದು, ಅವರನ್ನು ಶೀಘ್ರ ಜಿಲ್ಲಾಧಿಕಾರಿಗಳ ಉಸ್ತುವಾರಿಗೆ ನೀಡಬೇಕೆಂದು ತಿಳಿಸಿದ್ದಾರೆ.

ಆ ಮಕ್ಕಳ ಎಲ್ಲಾ ರೀತಿ ಜವಾಬ್ದಾರಿಯನ್ನು ಸರ್ಕಾರವೇ ಭರಿಸುವುದಾಗಿ ಹೇಳಿರುವ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಆ ಮಕ್ಕಳ ಶಿಕ್ಷಣ ಸೇರಿದಂತೆ ಇತರ ಅಗತ್ಯಗಳನ್ನು ನೋಡಿಕೊಳ್ಳುವಂತೆ ಸೂಚನೆಗಳನ್ನು ನೀಡಿದ್ದಾರೆ. ಅವರು ಕಷ್ಟಕಾಲದಲ್ಲಿ ಮಾನವೀಯತೆ ಸಾರುವ ಮೂಲಕ ಮಾದರಿಯಾಗಿದ್ದಾರೆ.

ಇತ್ತ ಕರ್ನಾಟಕದಲ್ಲಿ ಸಿಂಧನೂರಿನ ಗಂಗಮ್ಮ ಎಂಬ ಹೆಣ್ಣು ಮಗಳೊಬ್ಬಳು ಲಾಕ್‌ಡೌನ್‌ ಸಮಯದಲ್ಲಿ ಕಾಲ್ನಡಿಗೆಯಲ್ಲಿ ತನ್ನೂರಿಗೆ ಹೊರಟಿದ್ದಾಗ ಅನ್ನ ನೀರು ಸಿಗದೇ ಬಳಲಿ ಸಾವನಪ್ಪಿದ ಘಟನೆ ಇದೇ ಸಮಯದಲ್ಲಿ ಜರುಗಿದೆ.


ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...