Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

ಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಇದ್ದ ಒಬ್ಬ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ನಾಲ್ಕು ಮಕ್ಕಳ ಜವಾಬ್ದಾರಿ ವಹಿಸಿಕೊಳ್ಳಲು ತೆಲಗಾಂಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಮುಂದಾಗಿದ್ದಾರೆ.

ಹೈದ್ರಾಬಾದ್‌ನ ಭೌದ್ದನಗರ್ ಎಂಬಲ್ಲಿ ವಾಸವಿದ್ದ ಸಂಜಯ್ ಮತ್ತು ರಾಧ ಇಬ್ಬರೂ ಕೂಲಿಕಾರ್ಮಿಕರು. ಕಷ್ಟಪಟ್ಟು ಅಲ್ಲಿ ಇಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಇವರಿಗೆ ನಾಲ್ಕು ಜನ ಮಕ್ಕಳಿದ್ದು, ಅವರು ತಮ್ಮಂತೆ ಕೂಲಿ ಕಾರ್ಮಿಕರಾಗದೇ ಓದಿ ವಿದ್ಯಾವಂತರಾಗಬೇಕೆಂದು ಸಾಕಷ್ಟು ಕನಸು ಕಂಡಿದ್ದರು.

ಆದರೆ ಮೂರು ವರ್ಷಗಳ ಕೆಳಗೆ ಸಂಜಯ್ ಏಕಾಏಕಿ ಅನಾರೋಗ್ಯದಿಂದ ಮರಣ ಹೊಂದಿದ್ದಾನೆ. ಇದರಿಂದ ನಾಲ್ಕು ಮಕ್ಕಳ ಜವಾಬ್ದಾರಿ ತಾಯಿ ರಾಧ ಹೆಗಲಿಗೆ ಬಿದ್ದಿದೆ. ಅವರೊಬ್ಬರೆ ನಾಲ್ಕು ಮಕ್ಕಳನ್ನು ಓದಿಸುವ ಜವಾಬ್ದಾರಿ ಹೊತ್ತು ಸಾಲಕ್ಕೆ ತುತ್ತಾಗಿದ್ದಾರೆ.

ನಾಲ್ಕು ಮಕ್ಕಳನ್ನು ಒಬ್ಬರೆ ದುಡಿದು ಸಾಕುವುದು ಎಷ್ಟು ಕಷ್ಟ ಎಂದು ಎಲ್ಲರಿಗೂ ಗೊತ್ತಿದೆ. ಸಾಕಷ್ಟು ಒತ್ತಡದಲ್ಲಿದ್ದ ರಾಧರವರಿಗೂ ಅನಾರೋಗ್ಯ ಕಾಡತೊಡಗಿತ್ತು. ಇಂತಹ ಸಮಯದಲ್ಲಿ ಎರಗಿಬಂದ 21 ದಿನಗಳ ಲಾಕ್‌ಡೌನ್‌ ಅವರನ್ನು ಅಕ್ಷರಶಃ ಪ್ರಪಾತಕ್ಕೆ ತಳ್ಳಿದೆ. ಕೆಲಸವಿಲ್ಲದೇ ನಾಲ್ಕು ಜನರನ್ನು ಸಾಕುವ ಒತ್ತಡ ಅವರನ್ನು ಕೊನೆಗೂ ಸಾವಿನ ದವಡೆಗೆ ತಳ್ಳಿಬಿಟ್ಟಿದೆ.

ಮೊದಲೇ ತಂದೆ ಕಳೆದುಕೊಂಡು ದುಃಖದಲ್ಲಿದ್ದ ನಾಲ್ಕು ಮತ್ತು ತಮ್ಮ ತಾಯಿಯ ಮರಣದಿಂದ ಆಘಾತಕ್ಕೊಳಕ್ಕಾಗಿದ್ದಾರೆ. ಅವರು ಎಷ್ಟು ಬಡವರೆಂದರ ರಾಧರವರು ಮರಣ ಹೊಂದಿದಾಗ ಅವರ ಅಂತ್ಯಕ್ರಿಯೆ ಮಾಡಲು ಸಹ ಅವರ ಸಂಬಂಧಿಕರ ಬಳಿ ಹಣವಿರಲಿಲ್ಲ. ಕೊನೆಗೆ ಸ್ವಯಂ ಸೇವಾ ಸಂಸ್ಥೆಯೊಂದುಸ ಸರ್ಕಾರದ ಸಹಾಯದಿಂದ ಅಂತ್ಯಕ್ರಿಯೆ ಮಾಡಿದೆ.

ಇಂತಹ ಸಮಯದಲ್ಲಿ ತಬ್ಬಲಿಗಳಾಗಿ ದಿಕ್ಕುತೋಚದೆ ಕಂಗಲಾಗಿದ್ದ ಈ ಮಕ್ಕಳ ವಿಷಯವನ್ನು ತಿಳಿದ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ “ಈ ಘಟನೆ ನನ್ನ ಮನಸ್ಸನ್ನು ತಟ್ಟಿದೆ. ಹಾಗಾಗಿ ಆ ನಾಲ್ಕು ಜನ ಮಕ್ಕಳನ್ನು ಸರ್ಕಾರವೇ ನೋಡಿಕೊಳ್ಳಲಿದ್ದು, ಅವರನ್ನು ಶೀಘ್ರ ಜಿಲ್ಲಾಧಿಕಾರಿಗಳ ಉಸ್ತುವಾರಿಗೆ ನೀಡಬೇಕೆಂದು ತಿಳಿಸಿದ್ದಾರೆ.

ಆ ಮಕ್ಕಳ ಎಲ್ಲಾ ರೀತಿ ಜವಾಬ್ದಾರಿಯನ್ನು ಸರ್ಕಾರವೇ ಭರಿಸುವುದಾಗಿ ಹೇಳಿರುವ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಆ ಮಕ್ಕಳ ಶಿಕ್ಷಣ ಸೇರಿದಂತೆ ಇತರ ಅಗತ್ಯಗಳನ್ನು ನೋಡಿಕೊಳ್ಳುವಂತೆ ಸೂಚನೆಗಳನ್ನು ನೀಡಿದ್ದಾರೆ. ಅವರು ಕಷ್ಟಕಾಲದಲ್ಲಿ ಮಾನವೀಯತೆ ಸಾರುವ ಮೂಲಕ ಮಾದರಿಯಾಗಿದ್ದಾರೆ.

ಇತ್ತ ಕರ್ನಾಟಕದಲ್ಲಿ ಸಿಂಧನೂರಿನ ಗಂಗಮ್ಮ ಎಂಬ ಹೆಣ್ಣು ಮಗಳೊಬ್ಬಳು ಲಾಕ್‌ಡೌನ್‌ ಸಮಯದಲ್ಲಿ ಕಾಲ್ನಡಿಗೆಯಲ್ಲಿ ತನ್ನೂರಿಗೆ ಹೊರಟಿದ್ದಾಗ ಅನ್ನ ನೀರು ಸಿಗದೇ ಬಳಲಿ ಸಾವನಪ್ಪಿದ ಘಟನೆ ಇದೇ ಸಮಯದಲ್ಲಿ ಜರುಗಿದೆ.


ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....