Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

ಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಇದ್ದ ಒಬ್ಬ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ನಾಲ್ಕು ಮಕ್ಕಳ ಜವಾಬ್ದಾರಿ ವಹಿಸಿಕೊಳ್ಳಲು ತೆಲಗಾಂಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಮುಂದಾಗಿದ್ದಾರೆ.

ಹೈದ್ರಾಬಾದ್‌ನ ಭೌದ್ದನಗರ್ ಎಂಬಲ್ಲಿ ವಾಸವಿದ್ದ ಸಂಜಯ್ ಮತ್ತು ರಾಧ ಇಬ್ಬರೂ ಕೂಲಿಕಾರ್ಮಿಕರು. ಕಷ್ಟಪಟ್ಟು ಅಲ್ಲಿ ಇಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಇವರಿಗೆ ನಾಲ್ಕು ಜನ ಮಕ್ಕಳಿದ್ದು, ಅವರು ತಮ್ಮಂತೆ ಕೂಲಿ ಕಾರ್ಮಿಕರಾಗದೇ ಓದಿ ವಿದ್ಯಾವಂತರಾಗಬೇಕೆಂದು ಸಾಕಷ್ಟು ಕನಸು ಕಂಡಿದ್ದರು.

ಆದರೆ ಮೂರು ವರ್ಷಗಳ ಕೆಳಗೆ ಸಂಜಯ್ ಏಕಾಏಕಿ ಅನಾರೋಗ್ಯದಿಂದ ಮರಣ ಹೊಂದಿದ್ದಾನೆ. ಇದರಿಂದ ನಾಲ್ಕು ಮಕ್ಕಳ ಜವಾಬ್ದಾರಿ ತಾಯಿ ರಾಧ ಹೆಗಲಿಗೆ ಬಿದ್ದಿದೆ. ಅವರೊಬ್ಬರೆ ನಾಲ್ಕು ಮಕ್ಕಳನ್ನು ಓದಿಸುವ ಜವಾಬ್ದಾರಿ ಹೊತ್ತು ಸಾಲಕ್ಕೆ ತುತ್ತಾಗಿದ್ದಾರೆ.

ನಾಲ್ಕು ಮಕ್ಕಳನ್ನು ಒಬ್ಬರೆ ದುಡಿದು ಸಾಕುವುದು ಎಷ್ಟು ಕಷ್ಟ ಎಂದು ಎಲ್ಲರಿಗೂ ಗೊತ್ತಿದೆ. ಸಾಕಷ್ಟು ಒತ್ತಡದಲ್ಲಿದ್ದ ರಾಧರವರಿಗೂ ಅನಾರೋಗ್ಯ ಕಾಡತೊಡಗಿತ್ತು. ಇಂತಹ ಸಮಯದಲ್ಲಿ ಎರಗಿಬಂದ 21 ದಿನಗಳ ಲಾಕ್‌ಡೌನ್‌ ಅವರನ್ನು ಅಕ್ಷರಶಃ ಪ್ರಪಾತಕ್ಕೆ ತಳ್ಳಿದೆ. ಕೆಲಸವಿಲ್ಲದೇ ನಾಲ್ಕು ಜನರನ್ನು ಸಾಕುವ ಒತ್ತಡ ಅವರನ್ನು ಕೊನೆಗೂ ಸಾವಿನ ದವಡೆಗೆ ತಳ್ಳಿಬಿಟ್ಟಿದೆ.

ಮೊದಲೇ ತಂದೆ ಕಳೆದುಕೊಂಡು ದುಃಖದಲ್ಲಿದ್ದ ನಾಲ್ಕು ಮತ್ತು ತಮ್ಮ ತಾಯಿಯ ಮರಣದಿಂದ ಆಘಾತಕ್ಕೊಳಕ್ಕಾಗಿದ್ದಾರೆ. ಅವರು ಎಷ್ಟು ಬಡವರೆಂದರ ರಾಧರವರು ಮರಣ ಹೊಂದಿದಾಗ ಅವರ ಅಂತ್ಯಕ್ರಿಯೆ ಮಾಡಲು ಸಹ ಅವರ ಸಂಬಂಧಿಕರ ಬಳಿ ಹಣವಿರಲಿಲ್ಲ. ಕೊನೆಗೆ ಸ್ವಯಂ ಸೇವಾ ಸಂಸ್ಥೆಯೊಂದುಸ ಸರ್ಕಾರದ ಸಹಾಯದಿಂದ ಅಂತ್ಯಕ್ರಿಯೆ ಮಾಡಿದೆ.

ಇಂತಹ ಸಮಯದಲ್ಲಿ ತಬ್ಬಲಿಗಳಾಗಿ ದಿಕ್ಕುತೋಚದೆ ಕಂಗಲಾಗಿದ್ದ ಈ ಮಕ್ಕಳ ವಿಷಯವನ್ನು ತಿಳಿದ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ “ಈ ಘಟನೆ ನನ್ನ ಮನಸ್ಸನ್ನು ತಟ್ಟಿದೆ. ಹಾಗಾಗಿ ಆ ನಾಲ್ಕು ಜನ ಮಕ್ಕಳನ್ನು ಸರ್ಕಾರವೇ ನೋಡಿಕೊಳ್ಳಲಿದ್ದು, ಅವರನ್ನು ಶೀಘ್ರ ಜಿಲ್ಲಾಧಿಕಾರಿಗಳ ಉಸ್ತುವಾರಿಗೆ ನೀಡಬೇಕೆಂದು ತಿಳಿಸಿದ್ದಾರೆ.

ಆ ಮಕ್ಕಳ ಎಲ್ಲಾ ರೀತಿ ಜವಾಬ್ದಾರಿಯನ್ನು ಸರ್ಕಾರವೇ ಭರಿಸುವುದಾಗಿ ಹೇಳಿರುವ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಆ ಮಕ್ಕಳ ಶಿಕ್ಷಣ ಸೇರಿದಂತೆ ಇತರ ಅಗತ್ಯಗಳನ್ನು ನೋಡಿಕೊಳ್ಳುವಂತೆ ಸೂಚನೆಗಳನ್ನು ನೀಡಿದ್ದಾರೆ. ಅವರು ಕಷ್ಟಕಾಲದಲ್ಲಿ ಮಾನವೀಯತೆ ಸಾರುವ ಮೂಲಕ ಮಾದರಿಯಾಗಿದ್ದಾರೆ.

ಇತ್ತ ಕರ್ನಾಟಕದಲ್ಲಿ ಸಿಂಧನೂರಿನ ಗಂಗಮ್ಮ ಎಂಬ ಹೆಣ್ಣು ಮಗಳೊಬ್ಬಳು ಲಾಕ್‌ಡೌನ್‌ ಸಮಯದಲ್ಲಿ ಕಾಲ್ನಡಿಗೆಯಲ್ಲಿ ತನ್ನೂರಿಗೆ ಹೊರಟಿದ್ದಾಗ ಅನ್ನ ನೀರು ಸಿಗದೇ ಬಳಲಿ ಸಾವನಪ್ಪಿದ ಘಟನೆ ಇದೇ ಸಮಯದಲ್ಲಿ ಜರುಗಿದೆ.


ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...