Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

ಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಇದ್ದ ಒಬ್ಬ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ನಾಲ್ಕು ಮಕ್ಕಳ ಜವಾಬ್ದಾರಿ ವಹಿಸಿಕೊಳ್ಳಲು ತೆಲಗಾಂಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಮುಂದಾಗಿದ್ದಾರೆ.

ಹೈದ್ರಾಬಾದ್‌ನ ಭೌದ್ದನಗರ್ ಎಂಬಲ್ಲಿ ವಾಸವಿದ್ದ ಸಂಜಯ್ ಮತ್ತು ರಾಧ ಇಬ್ಬರೂ ಕೂಲಿಕಾರ್ಮಿಕರು. ಕಷ್ಟಪಟ್ಟು ಅಲ್ಲಿ ಇಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಇವರಿಗೆ ನಾಲ್ಕು ಜನ ಮಕ್ಕಳಿದ್ದು, ಅವರು ತಮ್ಮಂತೆ ಕೂಲಿ ಕಾರ್ಮಿಕರಾಗದೇ ಓದಿ ವಿದ್ಯಾವಂತರಾಗಬೇಕೆಂದು ಸಾಕಷ್ಟು ಕನಸು ಕಂಡಿದ್ದರು.

ಆದರೆ ಮೂರು ವರ್ಷಗಳ ಕೆಳಗೆ ಸಂಜಯ್ ಏಕಾಏಕಿ ಅನಾರೋಗ್ಯದಿಂದ ಮರಣ ಹೊಂದಿದ್ದಾನೆ. ಇದರಿಂದ ನಾಲ್ಕು ಮಕ್ಕಳ ಜವಾಬ್ದಾರಿ ತಾಯಿ ರಾಧ ಹೆಗಲಿಗೆ ಬಿದ್ದಿದೆ. ಅವರೊಬ್ಬರೆ ನಾಲ್ಕು ಮಕ್ಕಳನ್ನು ಓದಿಸುವ ಜವಾಬ್ದಾರಿ ಹೊತ್ತು ಸಾಲಕ್ಕೆ ತುತ್ತಾಗಿದ್ದಾರೆ.

ನಾಲ್ಕು ಮಕ್ಕಳನ್ನು ಒಬ್ಬರೆ ದುಡಿದು ಸಾಕುವುದು ಎಷ್ಟು ಕಷ್ಟ ಎಂದು ಎಲ್ಲರಿಗೂ ಗೊತ್ತಿದೆ. ಸಾಕಷ್ಟು ಒತ್ತಡದಲ್ಲಿದ್ದ ರಾಧರವರಿಗೂ ಅನಾರೋಗ್ಯ ಕಾಡತೊಡಗಿತ್ತು. ಇಂತಹ ಸಮಯದಲ್ಲಿ ಎರಗಿಬಂದ 21 ದಿನಗಳ ಲಾಕ್‌ಡೌನ್‌ ಅವರನ್ನು ಅಕ್ಷರಶಃ ಪ್ರಪಾತಕ್ಕೆ ತಳ್ಳಿದೆ. ಕೆಲಸವಿಲ್ಲದೇ ನಾಲ್ಕು ಜನರನ್ನು ಸಾಕುವ ಒತ್ತಡ ಅವರನ್ನು ಕೊನೆಗೂ ಸಾವಿನ ದವಡೆಗೆ ತಳ್ಳಿಬಿಟ್ಟಿದೆ.

ಮೊದಲೇ ತಂದೆ ಕಳೆದುಕೊಂಡು ದುಃಖದಲ್ಲಿದ್ದ ನಾಲ್ಕು ಮತ್ತು ತಮ್ಮ ತಾಯಿಯ ಮರಣದಿಂದ ಆಘಾತಕ್ಕೊಳಕ್ಕಾಗಿದ್ದಾರೆ. ಅವರು ಎಷ್ಟು ಬಡವರೆಂದರ ರಾಧರವರು ಮರಣ ಹೊಂದಿದಾಗ ಅವರ ಅಂತ್ಯಕ್ರಿಯೆ ಮಾಡಲು ಸಹ ಅವರ ಸಂಬಂಧಿಕರ ಬಳಿ ಹಣವಿರಲಿಲ್ಲ. ಕೊನೆಗೆ ಸ್ವಯಂ ಸೇವಾ ಸಂಸ್ಥೆಯೊಂದುಸ ಸರ್ಕಾರದ ಸಹಾಯದಿಂದ ಅಂತ್ಯಕ್ರಿಯೆ ಮಾಡಿದೆ.

ಇಂತಹ ಸಮಯದಲ್ಲಿ ತಬ್ಬಲಿಗಳಾಗಿ ದಿಕ್ಕುತೋಚದೆ ಕಂಗಲಾಗಿದ್ದ ಈ ಮಕ್ಕಳ ವಿಷಯವನ್ನು ತಿಳಿದ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ “ಈ ಘಟನೆ ನನ್ನ ಮನಸ್ಸನ್ನು ತಟ್ಟಿದೆ. ಹಾಗಾಗಿ ಆ ನಾಲ್ಕು ಜನ ಮಕ್ಕಳನ್ನು ಸರ್ಕಾರವೇ ನೋಡಿಕೊಳ್ಳಲಿದ್ದು, ಅವರನ್ನು ಶೀಘ್ರ ಜಿಲ್ಲಾಧಿಕಾರಿಗಳ ಉಸ್ತುವಾರಿಗೆ ನೀಡಬೇಕೆಂದು ತಿಳಿಸಿದ್ದಾರೆ.

ಆ ಮಕ್ಕಳ ಎಲ್ಲಾ ರೀತಿ ಜವಾಬ್ದಾರಿಯನ್ನು ಸರ್ಕಾರವೇ ಭರಿಸುವುದಾಗಿ ಹೇಳಿರುವ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಆ ಮಕ್ಕಳ ಶಿಕ್ಷಣ ಸೇರಿದಂತೆ ಇತರ ಅಗತ್ಯಗಳನ್ನು ನೋಡಿಕೊಳ್ಳುವಂತೆ ಸೂಚನೆಗಳನ್ನು ನೀಡಿದ್ದಾರೆ. ಅವರು ಕಷ್ಟಕಾಲದಲ್ಲಿ ಮಾನವೀಯತೆ ಸಾರುವ ಮೂಲಕ ಮಾದರಿಯಾಗಿದ್ದಾರೆ.

ಇತ್ತ ಕರ್ನಾಟಕದಲ್ಲಿ ಸಿಂಧನೂರಿನ ಗಂಗಮ್ಮ ಎಂಬ ಹೆಣ್ಣು ಮಗಳೊಬ್ಬಳು ಲಾಕ್‌ಡೌನ್‌ ಸಮಯದಲ್ಲಿ ಕಾಲ್ನಡಿಗೆಯಲ್ಲಿ ತನ್ನೂರಿಗೆ ಹೊರಟಿದ್ದಾಗ ಅನ್ನ ನೀರು ಸಿಗದೇ ಬಳಲಿ ಸಾವನಪ್ಪಿದ ಘಟನೆ ಇದೇ ಸಮಯದಲ್ಲಿ ಜರುಗಿದೆ.


ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...