Homeಮುಖಪುಟಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

ಲಾಕ್‌ಡೌನ್‌ ಸಮಯದಲ್ಲಿ ಅನಾಥರಾದ ನಾಲ್ಕು ಮಕ್ಕಳ ರಕ್ಷಣೆಯ ಹೊಣೆ ಹೊತ್ತ ತೆಲಂಗಾಣ ಸಿಎಂ ಕೆಸಿಆರ್

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಇದ್ದ ಒಬ್ಬ ತಾಯಿಯನ್ನು ಕಳೆದುಕೊಂಡು ಅನಾಥವಾಗಿದ್ದ ನಾಲ್ಕು ಮಕ್ಕಳ ಜವಾಬ್ದಾರಿ ವಹಿಸಿಕೊಳ್ಳಲು ತೆಲಗಾಂಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಮುಂದಾಗಿದ್ದಾರೆ.

ಹೈದ್ರಾಬಾದ್‌ನ ಭೌದ್ದನಗರ್ ಎಂಬಲ್ಲಿ ವಾಸವಿದ್ದ ಸಂಜಯ್ ಮತ್ತು ರಾಧ ಇಬ್ಬರೂ ಕೂಲಿಕಾರ್ಮಿಕರು. ಕಷ್ಟಪಟ್ಟು ಅಲ್ಲಿ ಇಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಇವರಿಗೆ ನಾಲ್ಕು ಜನ ಮಕ್ಕಳಿದ್ದು, ಅವರು ತಮ್ಮಂತೆ ಕೂಲಿ ಕಾರ್ಮಿಕರಾಗದೇ ಓದಿ ವಿದ್ಯಾವಂತರಾಗಬೇಕೆಂದು ಸಾಕಷ್ಟು ಕನಸು ಕಂಡಿದ್ದರು.

ಆದರೆ ಮೂರು ವರ್ಷಗಳ ಕೆಳಗೆ ಸಂಜಯ್ ಏಕಾಏಕಿ ಅನಾರೋಗ್ಯದಿಂದ ಮರಣ ಹೊಂದಿದ್ದಾನೆ. ಇದರಿಂದ ನಾಲ್ಕು ಮಕ್ಕಳ ಜವಾಬ್ದಾರಿ ತಾಯಿ ರಾಧ ಹೆಗಲಿಗೆ ಬಿದ್ದಿದೆ. ಅವರೊಬ್ಬರೆ ನಾಲ್ಕು ಮಕ್ಕಳನ್ನು ಓದಿಸುವ ಜವಾಬ್ದಾರಿ ಹೊತ್ತು ಸಾಲಕ್ಕೆ ತುತ್ತಾಗಿದ್ದಾರೆ.

ನಾಲ್ಕು ಮಕ್ಕಳನ್ನು ಒಬ್ಬರೆ ದುಡಿದು ಸಾಕುವುದು ಎಷ್ಟು ಕಷ್ಟ ಎಂದು ಎಲ್ಲರಿಗೂ ಗೊತ್ತಿದೆ. ಸಾಕಷ್ಟು ಒತ್ತಡದಲ್ಲಿದ್ದ ರಾಧರವರಿಗೂ ಅನಾರೋಗ್ಯ ಕಾಡತೊಡಗಿತ್ತು. ಇಂತಹ ಸಮಯದಲ್ಲಿ ಎರಗಿಬಂದ 21 ದಿನಗಳ ಲಾಕ್‌ಡೌನ್‌ ಅವರನ್ನು ಅಕ್ಷರಶಃ ಪ್ರಪಾತಕ್ಕೆ ತಳ್ಳಿದೆ. ಕೆಲಸವಿಲ್ಲದೇ ನಾಲ್ಕು ಜನರನ್ನು ಸಾಕುವ ಒತ್ತಡ ಅವರನ್ನು ಕೊನೆಗೂ ಸಾವಿನ ದವಡೆಗೆ ತಳ್ಳಿಬಿಟ್ಟಿದೆ.

ಮೊದಲೇ ತಂದೆ ಕಳೆದುಕೊಂಡು ದುಃಖದಲ್ಲಿದ್ದ ನಾಲ್ಕು ಮತ್ತು ತಮ್ಮ ತಾಯಿಯ ಮರಣದಿಂದ ಆಘಾತಕ್ಕೊಳಕ್ಕಾಗಿದ್ದಾರೆ. ಅವರು ಎಷ್ಟು ಬಡವರೆಂದರ ರಾಧರವರು ಮರಣ ಹೊಂದಿದಾಗ ಅವರ ಅಂತ್ಯಕ್ರಿಯೆ ಮಾಡಲು ಸಹ ಅವರ ಸಂಬಂಧಿಕರ ಬಳಿ ಹಣವಿರಲಿಲ್ಲ. ಕೊನೆಗೆ ಸ್ವಯಂ ಸೇವಾ ಸಂಸ್ಥೆಯೊಂದುಸ ಸರ್ಕಾರದ ಸಹಾಯದಿಂದ ಅಂತ್ಯಕ್ರಿಯೆ ಮಾಡಿದೆ.

ಇಂತಹ ಸಮಯದಲ್ಲಿ ತಬ್ಬಲಿಗಳಾಗಿ ದಿಕ್ಕುತೋಚದೆ ಕಂಗಲಾಗಿದ್ದ ಈ ಮಕ್ಕಳ ವಿಷಯವನ್ನು ತಿಳಿದ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ “ಈ ಘಟನೆ ನನ್ನ ಮನಸ್ಸನ್ನು ತಟ್ಟಿದೆ. ಹಾಗಾಗಿ ಆ ನಾಲ್ಕು ಜನ ಮಕ್ಕಳನ್ನು ಸರ್ಕಾರವೇ ನೋಡಿಕೊಳ್ಳಲಿದ್ದು, ಅವರನ್ನು ಶೀಘ್ರ ಜಿಲ್ಲಾಧಿಕಾರಿಗಳ ಉಸ್ತುವಾರಿಗೆ ನೀಡಬೇಕೆಂದು ತಿಳಿಸಿದ್ದಾರೆ.

ಆ ಮಕ್ಕಳ ಎಲ್ಲಾ ರೀತಿ ಜವಾಬ್ದಾರಿಯನ್ನು ಸರ್ಕಾರವೇ ಭರಿಸುವುದಾಗಿ ಹೇಳಿರುವ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ ಆ ಮಕ್ಕಳ ಶಿಕ್ಷಣ ಸೇರಿದಂತೆ ಇತರ ಅಗತ್ಯಗಳನ್ನು ನೋಡಿಕೊಳ್ಳುವಂತೆ ಸೂಚನೆಗಳನ್ನು ನೀಡಿದ್ದಾರೆ. ಅವರು ಕಷ್ಟಕಾಲದಲ್ಲಿ ಮಾನವೀಯತೆ ಸಾರುವ ಮೂಲಕ ಮಾದರಿಯಾಗಿದ್ದಾರೆ.

ಇತ್ತ ಕರ್ನಾಟಕದಲ್ಲಿ ಸಿಂಧನೂರಿನ ಗಂಗಮ್ಮ ಎಂಬ ಹೆಣ್ಣು ಮಗಳೊಬ್ಬಳು ಲಾಕ್‌ಡೌನ್‌ ಸಮಯದಲ್ಲಿ ಕಾಲ್ನಡಿಗೆಯಲ್ಲಿ ತನ್ನೂರಿಗೆ ಹೊರಟಿದ್ದಾಗ ಅನ್ನ ನೀರು ಸಿಗದೇ ಬಳಲಿ ಸಾವನಪ್ಪಿದ ಘಟನೆ ಇದೇ ಸಮಯದಲ್ಲಿ ಜರುಗಿದೆ.


ಇದನ್ನೂ ಓದಿ: ಮಾಧ್ಯಮಗಳೇ, ಧರ್ಮವೀರರೇ ಗಂಗಮ್ಮನ ಸಾವಿನ ಹೊಣೆಯನ್ನು ನೀವೂ ಹೊರಬೇಕಲ್ಲವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...