Homeಕರೋನಾ ತಲ್ಲಣತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೆ ಅಲೆಯ ಪ್ರಭಾವ ಕಡಿಮೆಯಾಗುತ್ತಿದೆ. ಸೋಂಕು ಕಾರಣಕ್ಕೆ ಹೇರಲ್ಪಟ್ಟಿದ್ದ ಲಾಕ್‌ಡೌನ್‌‌ ತೆರವುಗೊಳಿಸುವ ಪ್ರಕ್ರಿಯೆಯೂ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೆ ಪ್ರಾರಂಭವಾತ್ತಿವೆ. ಲಾಕ್‌ಡೌನ್‌‌‌ ನಿರ್ಬಂಧಗಳು ತೆರವುಗೊಳಿಸುತ್ತಿದ್ದಂತೆ ಮಾರುಕಟ್ಟೆ ಮತ್ತು ಇತರ ಪ್ರದೇಶಗಳಲ್ಲಿ ಜನಸಂದಣಿ ಹೆಚ್ಚುತ್ತಿದೆ. ಇದಕ್ಕಾಗಿ ಸೋಂಕು ಹರಡದಂತೆ ತಡೆಯಲು ರಾಜ್ಯಗಳು ಐದು ಪ್ರಮುಖ ಕಾರ್ಯತಂತ್ರಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒಕ್ಕೂಟ ಸರ್ಕಾರವು ಶನಿವಾರ ಹೇಳಿದೆ.

‘ಸೂಕ್ತ ವರ್ತನೆ, ಪರೀಕ್ಷೆ ಮಾಡುವುದು, ಪತ್ತೆ ಹಚ್ಚುವುದು, ಚಿಕಿತ್ಸೆ ನೀಡುವುದು ಮತ್ತು ಲಸಿಕೆ ನೀಡುವುದು’ ಈ ಐದು ಪ್ರಮುಖ ಕಾರ್ಯತಂತ್ರಗಳನ್ನು ರೋಗ ಹರಡುವ ಸ್ಥಳಗಳಲ್ಲಿ ಖಚಿತಪಡಿಸಬೇಕು ಎಂದು ಒಕ್ಕೂಟ ಸರ್ಕಾರ ರಾಜ್ಯಗಳಿಗೆ ಹೇಳಿದೆ.

ಇದನ್ನೂ ಓದಿ: ಕೊರೊನಾ: ವಯಸ್ಕರಿಗೆ ಬಳಸುವ ಔಷಧ ಮಕ್ಕಳಿಗೆ ಬಳಸುವಂತಿಲ್ಲ- ಒಕ್ಕೂಟ ಸರ್ಕಾರ

ಎಲ್ಲಾ ರಾಜ್ಯಗಳು ಮತ್ತು ಒಕ್ಕೂಟಾಡಳಿತ ಪ್ರದೇಶ (Union Territories) ಗಳಿಗೆ ಬರೆದಿರುವ ಪತ್ರದಲ್ಲಿ, ಒಕ್ಕೂಟ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, “ಪ್ರಸ್ತುತ ಸನ್ನಿವೇಶದಲ್ಲಿ ಕೊರೊನಾ ವಿರುದ್ಧ ನೀಡುವ ಲಸಿಕೆಯೆ ಸೋಂಕು ಹರಡವುದುದನ್ನು ತಡೆಯುವಲ್ಲಿ ನಿರ್ಣಾಯಕವಾದ ಪಾತ್ರ ವಹಿಸುತ್ತದೆ” ಎಂದು ಹೇಳಿದ್ದಾರೆ.

ಆದ್ದರಿಂದ, ಎಲ್ಲಾ ರಾಜ್ಯಗಳು ಮತ್ತು ಒಕ್ಕೂಟಾಡಳಿತ ಪ್ರದೇಶದ ಸರ್ಕಾರಗಳು ಲಸಿಕೆ ನೀಡುವ ವೇಗವನ್ನು ಹೆಚ್ಚಿಸಿ ಗರಿಷ್ಠ ಸಂಖ್ಯೆಯ ಜನರನ್ನು ಶೀಘ್ರವಾಗಿ ಒಳಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ದೆಹಲಿ ಮಾರುಕಟ್ಟೆಗಳಲ್ಲಿ ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯಾಗುತ್ತಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದ ಒಂದು ದಿನದ ನಂತರ ಒಕ್ಕೂಟ ಸರ್ಕಾರ ಈ ಪತ್ರವನ್ನು ಬರೆಯುತ್ತಿದೆ. ಮಾರ್ಗಸೂಚಿಯ ಉಲ್ಲಂಘನೆಯು ಮೂರನೇ ಅಲೆಯ ಸೋಂಕನ್ನು ತ್ವರಿತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು, ಅಂಗಡಿಯವರನ್ನು ಈ ನಿಟ್ಟಿನಲ್ಲಿ ಸಂವೇದನಾಶೀಲಗೊಳಿಸಬೇಕು. ಇದಕ್ಕಾಗಿ ಮಾರುಕಟ್ಟೆಗಳು ಮತ್ತು ಮಾರಾಟಗಾರರ ಸಂಘಗಳೊಂದಿಗೆ ಸಭೆ ನಡೆಸಬೇಕು ಎಂದು ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿತ್ತು.

ತಮಿಳುನಾಡು, ದೆಹಲಿ, ಕಾರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಾಕ್‌ಡೌನಿನ ನಿರ್ಬಂಧಗಳು ಹಂತಹಂತವಾಗಿ ತೆರವುಗೊಳ್ಳುತ್ತಿದೆ.

ತೆಲಂಗಾಣವು ರಾಜ್ಯದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌‌ನ ಎಲ್ಲಾ ನಿರ್ಬಂಧಗಳನ್ನು ಇಂದಿನಿಂದ ಸಂಪೂರ್ಣವಾಗಿ ಕಿತ್ತು ಹಾಕಲಾಗಿದೆ. ರಾಜ್ಯದಲ್ಲಿ ಗಣನೀಯವಾಗಿ ಸೋಂಕಿನ ಪ್ರಮಾಣ ಕಡಿಮೆಯಾಗಿರುವುದರಿಂದ ರಾಜ್ಯದ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ಕಳೆದ ಒಂದು ದಿನ 60,753 ಕೊರೊನಾ ಪ್ರಕರಣಗಳು ದಾಖಲಾಗಿದೆ. ಹಾಗೆಯೆ ಸೋಂಕಿನಿಂದಾಗಿ ಕಳೆದ ಒಂದು ದಿನದಲ್ಲಿ 1,647 ಸಾವುಗಳಾಗಿವೆ.

ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...