Homeಕರೋನಾ ತಲ್ಲಣತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೆ ಅಲೆಯ ಪ್ರಭಾವ ಕಡಿಮೆಯಾಗುತ್ತಿದೆ. ಸೋಂಕು ಕಾರಣಕ್ಕೆ ಹೇರಲ್ಪಟ್ಟಿದ್ದ ಲಾಕ್‌ಡೌನ್‌‌ ತೆರವುಗೊಳಿಸುವ ಪ್ರಕ್ರಿಯೆಯೂ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೆ ಪ್ರಾರಂಭವಾತ್ತಿವೆ. ಲಾಕ್‌ಡೌನ್‌‌‌ ನಿರ್ಬಂಧಗಳು ತೆರವುಗೊಳಿಸುತ್ತಿದ್ದಂತೆ ಮಾರುಕಟ್ಟೆ ಮತ್ತು ಇತರ ಪ್ರದೇಶಗಳಲ್ಲಿ ಜನಸಂದಣಿ ಹೆಚ್ಚುತ್ತಿದೆ. ಇದಕ್ಕಾಗಿ ಸೋಂಕು ಹರಡದಂತೆ ತಡೆಯಲು ರಾಜ್ಯಗಳು ಐದು ಪ್ರಮುಖ ಕಾರ್ಯತಂತ್ರಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒಕ್ಕೂಟ ಸರ್ಕಾರವು ಶನಿವಾರ ಹೇಳಿದೆ.

‘ಸೂಕ್ತ ವರ್ತನೆ, ಪರೀಕ್ಷೆ ಮಾಡುವುದು, ಪತ್ತೆ ಹಚ್ಚುವುದು, ಚಿಕಿತ್ಸೆ ನೀಡುವುದು ಮತ್ತು ಲಸಿಕೆ ನೀಡುವುದು’ ಈ ಐದು ಪ್ರಮುಖ ಕಾರ್ಯತಂತ್ರಗಳನ್ನು ರೋಗ ಹರಡುವ ಸ್ಥಳಗಳಲ್ಲಿ ಖಚಿತಪಡಿಸಬೇಕು ಎಂದು ಒಕ್ಕೂಟ ಸರ್ಕಾರ ರಾಜ್ಯಗಳಿಗೆ ಹೇಳಿದೆ.

ಇದನ್ನೂ ಓದಿ: ಕೊರೊನಾ: ವಯಸ್ಕರಿಗೆ ಬಳಸುವ ಔಷಧ ಮಕ್ಕಳಿಗೆ ಬಳಸುವಂತಿಲ್ಲ- ಒಕ್ಕೂಟ ಸರ್ಕಾರ

ಎಲ್ಲಾ ರಾಜ್ಯಗಳು ಮತ್ತು ಒಕ್ಕೂಟಾಡಳಿತ ಪ್ರದೇಶ (Union Territories) ಗಳಿಗೆ ಬರೆದಿರುವ ಪತ್ರದಲ್ಲಿ, ಒಕ್ಕೂಟ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, “ಪ್ರಸ್ತುತ ಸನ್ನಿವೇಶದಲ್ಲಿ ಕೊರೊನಾ ವಿರುದ್ಧ ನೀಡುವ ಲಸಿಕೆಯೆ ಸೋಂಕು ಹರಡವುದುದನ್ನು ತಡೆಯುವಲ್ಲಿ ನಿರ್ಣಾಯಕವಾದ ಪಾತ್ರ ವಹಿಸುತ್ತದೆ” ಎಂದು ಹೇಳಿದ್ದಾರೆ.

ಆದ್ದರಿಂದ, ಎಲ್ಲಾ ರಾಜ್ಯಗಳು ಮತ್ತು ಒಕ್ಕೂಟಾಡಳಿತ ಪ್ರದೇಶದ ಸರ್ಕಾರಗಳು ಲಸಿಕೆ ನೀಡುವ ವೇಗವನ್ನು ಹೆಚ್ಚಿಸಿ ಗರಿಷ್ಠ ಸಂಖ್ಯೆಯ ಜನರನ್ನು ಶೀಘ್ರವಾಗಿ ಒಳಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ದೆಹಲಿ ಮಾರುಕಟ್ಟೆಗಳಲ್ಲಿ ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯಾಗುತ್ತಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದ ಒಂದು ದಿನದ ನಂತರ ಒಕ್ಕೂಟ ಸರ್ಕಾರ ಈ ಪತ್ರವನ್ನು ಬರೆಯುತ್ತಿದೆ. ಮಾರ್ಗಸೂಚಿಯ ಉಲ್ಲಂಘನೆಯು ಮೂರನೇ ಅಲೆಯ ಸೋಂಕನ್ನು ತ್ವರಿತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು, ಅಂಗಡಿಯವರನ್ನು ಈ ನಿಟ್ಟಿನಲ್ಲಿ ಸಂವೇದನಾಶೀಲಗೊಳಿಸಬೇಕು. ಇದಕ್ಕಾಗಿ ಮಾರುಕಟ್ಟೆಗಳು ಮತ್ತು ಮಾರಾಟಗಾರರ ಸಂಘಗಳೊಂದಿಗೆ ಸಭೆ ನಡೆಸಬೇಕು ಎಂದು ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿತ್ತು.

ತಮಿಳುನಾಡು, ದೆಹಲಿ, ಕಾರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಾಕ್‌ಡೌನಿನ ನಿರ್ಬಂಧಗಳು ಹಂತಹಂತವಾಗಿ ತೆರವುಗೊಳ್ಳುತ್ತಿದೆ.

ತೆಲಂಗಾಣವು ರಾಜ್ಯದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌‌ನ ಎಲ್ಲಾ ನಿರ್ಬಂಧಗಳನ್ನು ಇಂದಿನಿಂದ ಸಂಪೂರ್ಣವಾಗಿ ಕಿತ್ತು ಹಾಕಲಾಗಿದೆ. ರಾಜ್ಯದಲ್ಲಿ ಗಣನೀಯವಾಗಿ ಸೋಂಕಿನ ಪ್ರಮಾಣ ಕಡಿಮೆಯಾಗಿರುವುದರಿಂದ ರಾಜ್ಯದ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ಕಳೆದ ಒಂದು ದಿನ 60,753 ಕೊರೊನಾ ಪ್ರಕರಣಗಳು ದಾಖಲಾಗಿದೆ. ಹಾಗೆಯೆ ಸೋಂಕಿನಿಂದಾಗಿ ಕಳೆದ ಒಂದು ದಿನದಲ್ಲಿ 1,647 ಸಾವುಗಳಾಗಿವೆ.

ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....