Homeಕರೋನಾ ತಲ್ಲಣತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

ತೆಲಂಗಾಣ ಸಂಪೂರ್ಣ ಅನ್‌ಲಾಕ್‌‌‌; ರಾಜ್ಯಗಳಿಗೆ ಐದು ಕಾರ್ಯತಂತ್ರಗಳನ್ನು ಸೂಚಿಸಿದ ಒಕ್ಕೂಟ ಸರ್ಕಾರ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೆ ಅಲೆಯ ಪ್ರಭಾವ ಕಡಿಮೆಯಾಗುತ್ತಿದೆ. ಸೋಂಕು ಕಾರಣಕ್ಕೆ ಹೇರಲ್ಪಟ್ಟಿದ್ದ ಲಾಕ್‌ಡೌನ್‌‌ ತೆರವುಗೊಳಿಸುವ ಪ್ರಕ್ರಿಯೆಯೂ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೆ ಪ್ರಾರಂಭವಾತ್ತಿವೆ. ಲಾಕ್‌ಡೌನ್‌‌‌ ನಿರ್ಬಂಧಗಳು ತೆರವುಗೊಳಿಸುತ್ತಿದ್ದಂತೆ ಮಾರುಕಟ್ಟೆ ಮತ್ತು ಇತರ ಪ್ರದೇಶಗಳಲ್ಲಿ ಜನಸಂದಣಿ ಹೆಚ್ಚುತ್ತಿದೆ. ಇದಕ್ಕಾಗಿ ಸೋಂಕು ಹರಡದಂತೆ ತಡೆಯಲು ರಾಜ್ಯಗಳು ಐದು ಪ್ರಮುಖ ಕಾರ್ಯತಂತ್ರಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒಕ್ಕೂಟ ಸರ್ಕಾರವು ಶನಿವಾರ ಹೇಳಿದೆ.

‘ಸೂಕ್ತ ವರ್ತನೆ, ಪರೀಕ್ಷೆ ಮಾಡುವುದು, ಪತ್ತೆ ಹಚ್ಚುವುದು, ಚಿಕಿತ್ಸೆ ನೀಡುವುದು ಮತ್ತು ಲಸಿಕೆ ನೀಡುವುದು’ ಈ ಐದು ಪ್ರಮುಖ ಕಾರ್ಯತಂತ್ರಗಳನ್ನು ರೋಗ ಹರಡುವ ಸ್ಥಳಗಳಲ್ಲಿ ಖಚಿತಪಡಿಸಬೇಕು ಎಂದು ಒಕ್ಕೂಟ ಸರ್ಕಾರ ರಾಜ್ಯಗಳಿಗೆ ಹೇಳಿದೆ.

ಇದನ್ನೂ ಓದಿ: ಕೊರೊನಾ: ವಯಸ್ಕರಿಗೆ ಬಳಸುವ ಔಷಧ ಮಕ್ಕಳಿಗೆ ಬಳಸುವಂತಿಲ್ಲ- ಒಕ್ಕೂಟ ಸರ್ಕಾರ

ಎಲ್ಲಾ ರಾಜ್ಯಗಳು ಮತ್ತು ಒಕ್ಕೂಟಾಡಳಿತ ಪ್ರದೇಶ (Union Territories) ಗಳಿಗೆ ಬರೆದಿರುವ ಪತ್ರದಲ್ಲಿ, ಒಕ್ಕೂಟ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, “ಪ್ರಸ್ತುತ ಸನ್ನಿವೇಶದಲ್ಲಿ ಕೊರೊನಾ ವಿರುದ್ಧ ನೀಡುವ ಲಸಿಕೆಯೆ ಸೋಂಕು ಹರಡವುದುದನ್ನು ತಡೆಯುವಲ್ಲಿ ನಿರ್ಣಾಯಕವಾದ ಪಾತ್ರ ವಹಿಸುತ್ತದೆ” ಎಂದು ಹೇಳಿದ್ದಾರೆ.

ಆದ್ದರಿಂದ, ಎಲ್ಲಾ ರಾಜ್ಯಗಳು ಮತ್ತು ಒಕ್ಕೂಟಾಡಳಿತ ಪ್ರದೇಶದ ಸರ್ಕಾರಗಳು ಲಸಿಕೆ ನೀಡುವ ವೇಗವನ್ನು ಹೆಚ್ಚಿಸಿ ಗರಿಷ್ಠ ಸಂಖ್ಯೆಯ ಜನರನ್ನು ಶೀಘ್ರವಾಗಿ ಒಳಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ದೆಹಲಿ ಮಾರುಕಟ್ಟೆಗಳಲ್ಲಿ ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯಾಗುತ್ತಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದ ಒಂದು ದಿನದ ನಂತರ ಒಕ್ಕೂಟ ಸರ್ಕಾರ ಈ ಪತ್ರವನ್ನು ಬರೆಯುತ್ತಿದೆ. ಮಾರ್ಗಸೂಚಿಯ ಉಲ್ಲಂಘನೆಯು ಮೂರನೇ ಅಲೆಯ ಸೋಂಕನ್ನು ತ್ವರಿತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು, ಅಂಗಡಿಯವರನ್ನು ಈ ನಿಟ್ಟಿನಲ್ಲಿ ಸಂವೇದನಾಶೀಲಗೊಳಿಸಬೇಕು. ಇದಕ್ಕಾಗಿ ಮಾರುಕಟ್ಟೆಗಳು ಮತ್ತು ಮಾರಾಟಗಾರರ ಸಂಘಗಳೊಂದಿಗೆ ಸಭೆ ನಡೆಸಬೇಕು ಎಂದು ನ್ಯಾಯಾಲಯ ಅಧಿಕಾರಿಗಳಿಗೆ ಸೂಚಿಸಿತ್ತು.

ತಮಿಳುನಾಡು, ದೆಹಲಿ, ಕಾರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಾಕ್‌ಡೌನಿನ ನಿರ್ಬಂಧಗಳು ಹಂತಹಂತವಾಗಿ ತೆರವುಗೊಳ್ಳುತ್ತಿದೆ.

ತೆಲಂಗಾಣವು ರಾಜ್ಯದಲ್ಲಿ ಹೇರಲ್ಪಟ್ಟ ಲಾಕ್‌ಡೌನ್‌‌ನ ಎಲ್ಲಾ ನಿರ್ಬಂಧಗಳನ್ನು ಇಂದಿನಿಂದ ಸಂಪೂರ್ಣವಾಗಿ ಕಿತ್ತು ಹಾಕಲಾಗಿದೆ. ರಾಜ್ಯದಲ್ಲಿ ಗಣನೀಯವಾಗಿ ಸೋಂಕಿನ ಪ್ರಮಾಣ ಕಡಿಮೆಯಾಗಿರುವುದರಿಂದ ರಾಜ್ಯದ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ.

ಭಾರತದಲ್ಲಿ ಕಳೆದ ಒಂದು ದಿನ 60,753 ಕೊರೊನಾ ಪ್ರಕರಣಗಳು ದಾಖಲಾಗಿದೆ. ಹಾಗೆಯೆ ಸೋಂಕಿನಿಂದಾಗಿ ಕಳೆದ ಒಂದು ದಿನದಲ್ಲಿ 1,647 ಸಾವುಗಳಾಗಿವೆ.

ಇದನ್ನೂ ಓದಿ: ಕೊರೊನಾ ನಿಯಮಗಳ ಉಲ್ಲಂಘನೆ, 3ನೇ ಅಲೆಗೆ ಕಾರಣವಾಗಬಹುದು: ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...