Homeಮುಖಪುಟತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

- Advertisement -
- Advertisement -

ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮಂಗಳವಾರ (ಫೆ.4) ವಿಧಾನಸಭೆಯಲ್ಲಿ ಮಂಡಿಸಿದ ಸಾಮಾಜಿಕ-ಆರ್ಥಿಕ, ರಾಜಕೀಯ, ಜಾತಿ, ಶಿಕ್ಷಣ ಮತ್ತು ಉದ್ಯೋಗ ಸಮೀಕ್ಷೆ (ಜಾತಿ ಸಮೀಕ್ಷೆ) ವರದಿಯನ್ನು ವಿಧಾನಪರಿಷತ್‌ನ ಕಾಂಗ್ರೆಸ್‌ ಸದಸ್ಯ ಚಿಂತಪಾಂಡು ನವೀನ್ ಅಲಿಯಾಸ್ ತೀನ್ಮಾರ್ ಮಲ್ಲಣ್ಣ ಸುಟ್ಟು ಹಾಕಿದ್ದಾರೆ.

ನಾನು ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದು ಹಿಂದುಳಿದ ಜಾತಿಗಳ ಭವಿಷ್ಯವನ್ನು ನಾಶ ಮಾಡುವ ಪಿತೂರಿ ಎಂದು ಮಲ್ಲಣ್ಣ ಹೇಳಿದ್ದಾರೆ. ವರದಿಯಲ್ಲಿರುವ ಅಂಕಿ ಅಂಶಗಳು ನಕಲಿ. ಹಿಂದುಳಿದ ಜಾತಿಗಳು ಇದನ್ನು ಒಪ್ಪುವುದಿಲ್ಲ. ಸಮೀಕ್ಷೆ ವೇಳೆ 40 ಲಕ್ಷ ಹಿಂದುಳಿದ ಜಾತಿಗಳ ಜನರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಮಲ್ಲಣ್ಣ ಆರೋಪಿಸಿದ್ದಾರೆ.

ಸರ್ಕಾರ ನಕಲಿ ಅಂಕಿ ಅಂಶಗಳೊಂದಿಗೆ ಹಿಂದುಳಿದ ಜಾತಿಗಳನ್ನು ದಾರಿ ತಪ್ಪಿಸಿದೆ ಮತ್ತು ವಂಚಿಸಿದೆ. ರಾಜ್ಯದ ಜನ ಸಂಖ್ಯೆಯಲ್ಲಿ ಹಿಂದುಳಿದ ಹಿಂದೂಗಳ ಸಂಖ್ಯೆ ಶೇಖಡ 60ರಷ್ಟಿದೆ. ಆದರೆ, ಸಮೀಕ್ಷೆ ಕೇವಲ 46 ಶೇಖಡ ಎಂದು ತೋರಿಸಿದೆ. ಇತರ ಜಾತಿಗಳ ಜನ ಸಂಖ್ಯೆ ಶೇಖಡ 15 ಎಂದಿದೆ. ವಾಸ್ತವದಲ್ಲಿ ಅವರು ಕೇವಲ 8 ಶೇಖಡ ಮಾತ್ರ ಇದ್ದಾರೆ ಎಂದು ಮಲ್ಲಣ್ಣ ಹೇಳಿದ್ದಾರೆ.

ಈ ಸಮೀಕ್ಷೆಯ ಹಿಂದೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಕೆ. ಜನಾ ರೆಡ್ಡಿ ಅವರ ಕೈವಾಡವಿದೆ ಎಂದು ಮಲ್ಲಣ್ಣ ಆರೋಪಿಸಿದ್ದಾರೆ.

ಮಲ್ಲಣ್ಣ ಅವರ ನಡೆಗೆ ಕಾಂಗ್ರೆಸ್ ಪಕ್ಷದ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಜಾತಿ ಸಮೀಕ್ಷೆ ವರದಿಗೆ ಬೆಂಕಿ ಹಚ್ಚಿದ್ದಕ್ಕಾಗಿ ಮತ್ತು ರೆಡ್ಡಿ ಸಮುದಾಯದ ವಿರುದ್ಧ ಮಲ್ಲಣ್ಣ ನೀಡಿರುವ ಹೇಳಿಕೆಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ (ಟಿಪಿಸಿಸಿ) ಶಿಸ್ತು ಸಮಿತಿ ಮಲ್ಲಣ್ಣ ಅವರಿಗೆ ಶೋಕಾಸ್ (ಕಾರಣ ಕೇಳಿ) ನೋಟಿಸ್ ನೀಡಿದೆ. ನಿಮ್ಮ ವಿರುದ್ದ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? ಎಂದು ಪ್ರತಿಕ್ರಿಯೆ ಕೇಳಿದೆ.

ಮಲ್ಲಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಟಿಪಿಸಿಸಿ ಅಧ್ಯಕ್ಷ ಮಹೇಶ್ ಕುಮಾರ್ ಗೌಡ್ ಅವರಿಗೆ ಹಲವಾರು ನಾಯಕರು ಮತ್ತು ಕಾರ್ಯಕರ್ತರು ಮನವಿ ಮಾಡಿದ್ದಾರೆ. ಮಲ್ಲಣ್ಣ ತಮ್ಮ ಮಿತಿಯನ್ನು ಮೀರುತ್ತಿದ್ದಾರೆ ಎಂದು ಯಾದಾದ್ರಿ ಭೋಂಗಿರ್‌ನ ಕಾಂಗ್ರೆಸ್ ಶಾಸಕ ಕುಂಭಮ್ ಅನಿಲ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಪಕ್ಷದ ನಾಯಕತ್ವ ಶೀಘ್ರದಲ್ಲೇ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಈ ನಡುವೆ ರೆಡ್ಡಿ ಸಮುದಾಯದ ಮುಖಂಡರು ಮಲ್ಲಣ್ಣ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ದೂರು ನೀಡಿದ್ದಾರೆ. ಎರಡು ದಿನಗಳ ಹಿಂದೆ ವಾರಂಗಲ್‌ನಲ್ಲಿ ಹಿಂದುಳಿದ ಜಾತಿಗಳ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಮಲ್ಲಣ್ಣ, ರೆಡ್ಡಿಗಳ ವಿರುದ್ಧ ಅಸಭ್ಯ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.

ತೀನ್ಮಾರ್ ಮಲ್ಲಣ್ಣ ಎಂದೇ ಪ್ರಸಿದ್ಧರಾಗಿರುವ ಚಿಂತಪಾಂಡು ನವೀನ್ ಅವರು ಸಾಮಾಜಿಕ ಮಾಧ್ಯಮ (ಯೂಟ್ಯೂಬ್) ಚಾನೆಲ್ ನಡೆಸುತ್ತಿದ್ದಾರೆ. ಹಿಂದಿನ ಬಿಆರ್‌ಎಸ್ ಸರ್ಕಾರದ ಕಟು ಟೀಕಾಕಾರರಾಗಿದ್ದ ಇವರು, ನಂತರ ಬಿಜೆಪಿ ಸೇರಿದ್ದರು. ನವೆಂಬರ್ 2023ರಲ್ಲಿ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಜೂನ್ 2024ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ವಾರಂಗಲ್-ನಲ್ಗೊಂಡ-ಖಮ್ಮಾಮ್ ಪದವೀಧರ ಎಂಎಲ್‌ಸಿ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು.

ತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...