Homeಮುಖಪುಟತೆಲಂಗಾಣ: 40,000 ಕೋಟಿ ಸಾಲವಿದ್ದರೂ ಅಧಿಕಾರಿಗಳಿಗೆ ಐಷಾರಾಮಿ ಕಾರು ನೀಡಿದ ಸರ್ಕಾರ

ತೆಲಂಗಾಣ: 40,000 ಕೋಟಿ ಸಾಲವಿದ್ದರೂ ಅಧಿಕಾರಿಗಳಿಗೆ ಐಷಾರಾಮಿ ಕಾರು ನೀಡಿದ ಸರ್ಕಾರ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ತೆಲಂಗಾಣದಲ್ಲಿ ಮೂವತ್ತೆರಡು ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ನೇಮಿಸಲಾಗಿದ್ದು, ಇವರಿಗೆ ಸರ್ಕಾರದ ವತಿಯಿಂದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ 32 ಐಷಾರಾಮಿ ಕಿಯಾ ಕಾರ್ನಿವಲ್ ಕಾರುಗಳನ್ನು ಖರೀದಿಸಿದ್ದಾರೆ.

ಈ ಪ್ರತಿಯೊಂದು ಕಾರಿಗೆ 25 ರಿಂದ 30 ಲಕ್ಷ ವೆಚ್ಚವಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗದೊಂದಿಗೆ ಹೋರಾಡಲು ರಾಜ್ಯವು ಸುಮಾರು 40,000 ಕೋಟಿ ಸಾಲಕ್ಕೆ ತುತ್ತಾಗಿದ್ದು, ಈ ಸಮಯದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಪ್ರತಿಪಕ್ಷ ನಾಯಕರು  ಆಕ್ರೋಶ ಹೊರಹಾಕಿದ್ದಾರೆ.

ಹೈದರಾಬಾದ್‌ನಲ್ಲಿರುವ ಮುಖ್ಯಮಂತ್ರಿಯವರ ನಿವಾಸವಾದ ಪ್ರಗತಿ ಭವನದಲ್ಲಿ, ತೆಲಂಗಾಣ ಸಾರಿಗೆ ಸಚಿವ ಪುವ್ವಾಡ ಅಜಯ್ ಕುಮಾರ್ ಕಾರುಗಳಿಗೆ ಹಸಿರು ನಿಶಾನೆ ನೀಡಿದ್ದಾರೆ. ರಾಜ್ಯ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕಾರುಗಳನ್ನು ಈ ಹಿಂದೆಯೇ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ವಾಹನಗಳನ್ನು ಪರಿಶೀಲಿಸಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP
ರಾಜ್ಯ ಸರ್ಕಾರದ ಈ ಕ್ರಮವನ್ನು ರಾಜ್ಯದಲ್ಲಿ ಅಧಿಕಾರಶಾಹಿಗಳನ್ನು ಸಮಾಧಾನಪಡಿಸುವ ಮುಖ್ಯಮಂತ್ರಿ ರಾವ್ ಅವರ ಈ ಕ್ರಮ ಮತ್ತು “ಕ್ರಿಮಿನಲ್ ವಂಚನೆ” ಎಂದು ಬಿಜೆಪಿ ಆರೋಪಿಸಿದೆ.

“32 ಅಲ್ಟ್ರಾ ಐಷಾರಾಮಿ ವಾಹನಗಳನ್ನು ಖರೀದಿಸಲು 11 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಖರ್ಚು ಮಾಡುವುದನ್ನು ಮುಖ್ಯಮಂತ್ರಿ ರಾವ್ ಹೇಗೆ ಸಮರ್ಥಿಸಬಹುದು?” ಎಂದು ಬಿಜೆಪಿ ವಕ್ತಾರ ಕೃಷ್ಣ ಸಾಗರ್ ರಾವ್ ಪ್ರಶ್ನಿಸಿದ್ದಾರೆ.

“ಮುಖ್ಯಮಂತ್ರಿಗಳು ಅಪಾಯಕಾರಿ ಸಾಂಕ್ರಾಮಿಕದ ಮಧ್ಯದಲ್ಲಿ ಸಾರ್ವಜನಿಕರ ಹಣವನ್ನು ಅಪಾರವಾಗಿ ವ್ಯರ್ಥ ಮಾಡುತ್ತಿದ್ದಾರೆ. ಇತ್ತ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಅನೇಕ ಬಡ ಜನರು ಸಾಲದ ಹೊರೆಯಿಂದ ಸಾಯುತ್ತಿದ್ದಾರೆ. ಸರ್ಕಾರದ ಈ ನಿರ್ಧಾರ ಭಯಾನಕ ಮತ್ತು ಯೋಚಿಸಲಾಗದು’ ಎಂದಿರುವ ಬಿಜೆಪಿ ನಾಯಕರು, ಈ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಅಥವಾ ಸಾರ್ವಜನಿಕ ಸಾರಿಗೆಗಾಗಿ ಬಸ್ಸುಗಳನ್ನು ಖರೀದಿಸಲು ಖರ್ಚು ಮಾಡುವ ಬದಲು ಅಧಿಕಾರಶಾಹಿಗಳಿಗೆ ಕಾರುಗಳನ್ನು ಖರೀದಿಸುವ ಮೂಲಕ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರರು ಆರೋಪಿಸಿದ್ದಾರೆ.


ಇದನ್ನೂ ಓದಿ: ಇಂದು ಚೆಗುವಾರ ಜನ್ಮ ದಿನ: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...