Homeಮುಖಪುಟತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ

ತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ

- Advertisement -
- Advertisement -

ಚುನಾವಣಾ ಪೂರ್ಣ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ನಾಯಕ (ಈಗಿನ ಮುಖ್ಯಮಂತ್ರಿ) ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ, ಮಾದರಿ ನೀತಿ ಉಲ್ಲಂಘಿಸಿದ ಆರೋಪದಲ್ಲಿ ಅಮಾನತುಗೊಂಡಿದ್ದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರ ವಿರುದ್ಧದ ಆದೇಶವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಹಿಂಪಡೆದಿದೆ.

ಡಿಸೆಂಬರ್ 3ರಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗಲೇ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಅಂಜನಿ ಕುಮಾರ್ ಅವರು ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಹಾಗೂ ಮತ್ತೋರ್ವ ಹಿರಿಯ ಅಧಿಕಾರಿ ಮಹೇಶ್ ಭಾಗವತ್ ಅವರೊಂದಿಗೆ ಹೈದರಾಬಾದ್‌ನ ರೆಡ್ಡಿ ಅವರ ನಿವಾಸದಲ್ಲಿ ಭೇಟಿಯಾಗಿ ಪುಷ್ಪಗುಚ್ಛ ನೀಡಿದ್ದರು.

ರೆಡ್ಡಿ ಜೊತೆಗಿನ ಅಂಜನಿ ಕುಮಾರ್ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿತ್ತು. ಡಿಜಿಪಿ ಅವರು ಚುನಾವಣಾ ಕಣದಲ್ಲಿದ್ದ 2,290 ಅಭ್ಯರ್ಥಿಗಳು ಹಾಗೂ 16 ರಾಜಕೀಯ ಪಕ್ಷಗಳ ಪೈಕಿ ರಾಜಕೀಯ ಪಕ್ಷವೊಂದರ ಸ್ಟಾರ್ ಪ್ರಚಾರಕ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಲು ಆಯ್ಕೆ ಮಾಡಿಕೊಂಡಿರುವುದು ದುರುದ್ದೇಶದಿಂದ ಕೂಡಿರುವ ಸ್ಪಷ್ಟ ಸೂಚನೆಯಾಗಿದೆ. ಡಿಜಿಪಿಯ ಇಂತಹ ನಡೆಗಳು ಕಿರಿಯ ಅಧಿಕಾರಿಗಳ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಆಯೋಗ ಹೇಳಿದೆ.

ಅಂಜನಿ ಕುಮಾರ್ ಅಮಾನತುಗೊಂಡ ನಂತರ ಹಿರಿಯ ಐಪಿಎಸ್ ಅಧಿಕಾರಿ ರವಿ ಗುಪ್ತಾ ಅವರಿಗೆ ಡಿಜಿಪಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿತ್ತು. ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ತೆಲಂಗಾಣದ ಡಿಜಿಪಿ, ಪೊಲೀಸ್ ಪಡೆ ಮುಖ್ಯಸ್ಥ (ಎಚ್ಒಪಿಎಫ್) ಹುದ್ದೆಗೆ ರವಿ ಗುಪ್ತಾ ಅವರನ್ನು ಸಂಪೂರ್ಣ ಹೆಚ್ಚುವರಿ ಪ್ರಭಾರದಲ್ಲಿ ಇರಿಸಲಾಗಿದೆ ಎಂದು ತೆಲಂಗಾಣ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

1990ನೇ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಅಂಜನಿ ಕುಮಾರ್ ಒಂದು ವರ್ಷದ ಹಿಂದೆ ತೆಲಂಗಾಣದ ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಮತ ಎಣಿಕೆ ನಡೆಯುತ್ತಿರುವಾಗ ಪಕ್ಷದ ನಾಯಕರೊಬ್ಬರನ್ನು ಭೇಟಿ ಮಾಡುವ ಮೂಲಕ ಸುದ್ದಿ ಮಾಡಿದ್ದರು.

ಅವರು ಈ ಹಿಂದೆ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ, ತೆಲಂಗಾಣ ಭ್ರಷ್ಟಾಚಾರ ವಿರೋಧಿ ಬ್ಯುರೋದ (ಎಸಿಬಿ) ಮುಖ್ಯಸ್ಥರಾಗಿ, ಎಡಿಜಿಪಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ. ಈ ಹಿಂದೆ ಆಂಧ್ರಪ್ರದೇಶ ಸರ್ಕಾರ ನಕ್ಸಲ್ ನಿಗ್ರಹಕ್ಕೆ ರಚಿಸಿದ್ದ ವಿಶೇಷ ಕಾರ್ಯಪಡೆಗೆ ಅಂಜನಿ ಕುಮಾರ್ ಮುಖ್ಯಸ್ಥರಾಗಿ ಕಾರ್ಯನಿರ್ವಹಣೆ ಮಾಡಿದ್ದರು.

ತಮ್ಮ ಸೇವಾ ಅವಧಿಯಲ್ಲಿ ಅಂಜನಿ ಕುಮಾರ್ ಹಲವಾರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪೊಲೀಸ್ ಸೇವೆಗಾಗಿ ವಿಶ್ವಸಂಸ್ಥೆ ನೀಡುವ ಶಾಂತಿ ಪದಕವನ್ನು ಸಹ ಪಡೆದಿದ್ದು, ಗಣ್ಯರು, ವಿಐಪಿಗಳ ಭದ್ರತೆಯ ಉಸ್ತುವಾರಿಯನ್ನು ದಕ್ಷತೆಯಿಂದ ನೋಡಿಕೊಳ್ಳುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ; ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...