Homeಮುಖಪುಟತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ

ತೆಲಂಗಾಣ ಡಿಜಿಪಿ ಅಂಜನಿ ಕುಮಾರ್ ಅಮಾನತು ಆದೇಶ ಹಿಂಪಡೆದ ಚುನಾವಣಾ ಆಯೋಗ

- Advertisement -
- Advertisement -

ಚುನಾವಣಾ ಪೂರ್ಣ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ನಾಯಕ (ಈಗಿನ ಮುಖ್ಯಮಂತ್ರಿ) ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ, ಮಾದರಿ ನೀತಿ ಉಲ್ಲಂಘಿಸಿದ ಆರೋಪದಲ್ಲಿ ಅಮಾನತುಗೊಂಡಿದ್ದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಂಜನಿ ಕುಮಾರ್ ಅವರ ವಿರುದ್ಧದ ಆದೇಶವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಹಿಂಪಡೆದಿದೆ.

ಡಿಸೆಂಬರ್ 3ರಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗಲೇ ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಅಂಜನಿ ಕುಮಾರ್ ಅವರು ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಹಾಗೂ ಮತ್ತೋರ್ವ ಹಿರಿಯ ಅಧಿಕಾರಿ ಮಹೇಶ್ ಭಾಗವತ್ ಅವರೊಂದಿಗೆ ಹೈದರಾಬಾದ್‌ನ ರೆಡ್ಡಿ ಅವರ ನಿವಾಸದಲ್ಲಿ ಭೇಟಿಯಾಗಿ ಪುಷ್ಪಗುಚ್ಛ ನೀಡಿದ್ದರು.

ರೆಡ್ಡಿ ಜೊತೆಗಿನ ಅಂಜನಿ ಕುಮಾರ್ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿ ವಿವಾದಕ್ಕೆ ಕಾರಣವಾಗಿತ್ತು. ಡಿಜಿಪಿ ಅವರು ಚುನಾವಣಾ ಕಣದಲ್ಲಿದ್ದ 2,290 ಅಭ್ಯರ್ಥಿಗಳು ಹಾಗೂ 16 ರಾಜಕೀಯ ಪಕ್ಷಗಳ ಪೈಕಿ ರಾಜಕೀಯ ಪಕ್ಷವೊಂದರ ಸ್ಟಾರ್ ಪ್ರಚಾರಕ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಲು ಆಯ್ಕೆ ಮಾಡಿಕೊಂಡಿರುವುದು ದುರುದ್ದೇಶದಿಂದ ಕೂಡಿರುವ ಸ್ಪಷ್ಟ ಸೂಚನೆಯಾಗಿದೆ. ಡಿಜಿಪಿಯ ಇಂತಹ ನಡೆಗಳು ಕಿರಿಯ ಅಧಿಕಾರಿಗಳ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಆಯೋಗ ಹೇಳಿದೆ.

ಅಂಜನಿ ಕುಮಾರ್ ಅಮಾನತುಗೊಂಡ ನಂತರ ಹಿರಿಯ ಐಪಿಎಸ್ ಅಧಿಕಾರಿ ರವಿ ಗುಪ್ತಾ ಅವರಿಗೆ ಡಿಜಿಪಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿತ್ತು. ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ತೆಲಂಗಾಣದ ಡಿಜಿಪಿ, ಪೊಲೀಸ್ ಪಡೆ ಮುಖ್ಯಸ್ಥ (ಎಚ್ಒಪಿಎಫ್) ಹುದ್ದೆಗೆ ರವಿ ಗುಪ್ತಾ ಅವರನ್ನು ಸಂಪೂರ್ಣ ಹೆಚ್ಚುವರಿ ಪ್ರಭಾರದಲ್ಲಿ ಇರಿಸಲಾಗಿದೆ ಎಂದು ತೆಲಂಗಾಣ ಮುಖ್ಯ ಕಾರ್ಯದರ್ಶಿ ಎ. ಶಾಂತಿ ಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

1990ನೇ ಬ್ಯಾಚ್‌ ಐಪಿಎಸ್ ಅಧಿಕಾರಿಯಾಗಿರುವ ಅಂಜನಿ ಕುಮಾರ್ ಒಂದು ವರ್ಷದ ಹಿಂದೆ ತೆಲಂಗಾಣದ ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಮತ ಎಣಿಕೆ ನಡೆಯುತ್ತಿರುವಾಗ ಪಕ್ಷದ ನಾಯಕರೊಬ್ಬರನ್ನು ಭೇಟಿ ಮಾಡುವ ಮೂಲಕ ಸುದ್ದಿ ಮಾಡಿದ್ದರು.

ಅವರು ಈ ಹಿಂದೆ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ, ತೆಲಂಗಾಣ ಭ್ರಷ್ಟಾಚಾರ ವಿರೋಧಿ ಬ್ಯುರೋದ (ಎಸಿಬಿ) ಮುಖ್ಯಸ್ಥರಾಗಿ, ಎಡಿಜಿಪಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ. ಈ ಹಿಂದೆ ಆಂಧ್ರಪ್ರದೇಶ ಸರ್ಕಾರ ನಕ್ಸಲ್ ನಿಗ್ರಹಕ್ಕೆ ರಚಿಸಿದ್ದ ವಿಶೇಷ ಕಾರ್ಯಪಡೆಗೆ ಅಂಜನಿ ಕುಮಾರ್ ಮುಖ್ಯಸ್ಥರಾಗಿ ಕಾರ್ಯನಿರ್ವಹಣೆ ಮಾಡಿದ್ದರು.

ತಮ್ಮ ಸೇವಾ ಅವಧಿಯಲ್ಲಿ ಅಂಜನಿ ಕುಮಾರ್ ಹಲವಾರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪೊಲೀಸ್ ಸೇವೆಗಾಗಿ ವಿಶ್ವಸಂಸ್ಥೆ ನೀಡುವ ಶಾಂತಿ ಪದಕವನ್ನು ಸಹ ಪಡೆದಿದ್ದು, ಗಣ್ಯರು, ವಿಐಪಿಗಳ ಭದ್ರತೆಯ ಉಸ್ತುವಾರಿಯನ್ನು ದಕ್ಷತೆಯಿಂದ ನೋಡಿಕೊಳ್ಳುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ; ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...