Homeಮುಖಪುಟತೆಲಂಗಾಣ | ಎಲೆಕ್ಟ್ರಿಕ್ ವಾಹನಗಳಿಗೆ 100% ರಸ್ತೆ ತೆರಿಗೆ & ನೋಂದಣಿ ಶುಲ್ಕ ವಿನಾಯಿತಿ!

ತೆಲಂಗಾಣ | ಎಲೆಕ್ಟ್ರಿಕ್ ವಾಹನಗಳಿಗೆ 100% ರಸ್ತೆ ತೆರಿಗೆ & ನೋಂದಣಿ ಶುಲ್ಕ ವಿನಾಯಿತಿ!

- Advertisement -
- Advertisement -

ರಾಜ್ಯದಲ್ಲಿ ಖರೀದಿಸುವ ಎಲ್ಲಾ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ಮತ್ತು ನೋಂದಣಿ ಶುಲ್ಕಕ್ಕೆ 100% ವಿನಾಯಿತಿಯನ್ನು ತೆಲಂಗಾಣ ಸರ್ಕಾರವು ನವೆಂಬರ್ 17 ಭಾನುವಾರ ಘೋಷಿಸಿದೆ. ಈ ನೀತಿಯು ಡಿಸೆಂಬರ್ 31, 2026 ರವರೆಗೆ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ನಾಲ್ಕು ಚಕ್ರಗಳು, ವಾಣಿಜ್ಯ ಪ್ರಯಾಣಿಕ ವಾಹನಗಳು (ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳು ಸೇರಿದಂತೆ), ಎಲೆಕ್ಟ್ರಿಕ್ ಲೈಟ್‌ವೈಟ್ ಸರಕು ವಾಹಕಗಳು, ಟ್ರ್ಯಾಕ್ಟರ್‌ಗಳು ಮತ್ತು ಬಸ್‌ಗಳಿಗೆ ಇದು ಅನ್ವಯಿಸುತ್ತದೆ.

ತೆಲಂಗಾಣದ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಅವರು ಈ ಘೋಷಣೆ ಮಾಡಿದ್ದು, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಆಗುತ್ತಿರುವ ವಾಯು ಮಾಲಿನ್ಯದ ಸಮಸ್ಯೆಯು ಹೈದರಾಬಾದ್‌ನಲ್ಲಿ ಕೂಡಾ ಆಗದಿರಲಿ ಎಂಬ ಉದ್ದೇಶಕ್ಕಾಗಿ ಈ ಉಪಕ್ರಮ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ. ಸಾರ್ವಜನಿಕರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಮಹತ್ವವನ್ನು ಸಚಿವರು ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಳಕೆದಾರರ ಅನುಕೂಲಕ್ಕಾಗಿ ಚಾರ್ಜಿಂಗ್ ಸ್ಟೇಷನ್‌ಗಳ ದೃಢವಾದ ಜಾಲವನ್ನು ಸ್ಥಾಪಿಸಲು ಸರ್ಕಾರವು ಎಲೆಕ್ಟ್ರಿಕ್ ವಾಹನ ತಯಾರಕರನ್ನು ಒತ್ತಾಯಿಸಿದೆ. ಈ ವಿನಾಯಿತಿಯು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ನಿರ್ವಹಿಸಲ್ಪಡುವ ಎಲೆಕ್ಟ್ರಿಕ್ ವಾಹನಗಳು ಮತ್ತು ತಮ್ಮ ಉದ್ಯೋಗಿಗಳನ್ನು ಸಾಗಿಸಲು ಉದ್ಯಮಗಳ ಒಡೆತನದ ಬಸ್‌ಗಳಿಗೆ (ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವುದನ್ನು ಹೊರತುಪಡಿಸಿ) ಅನ್ವಯಿಸುತ್ತದೆ.

ದೆಹಲಿ ಮತ್ತು ಗುಜರಾತ್ ನಂತರ ಎಲೆಕ್ಟ್ರಿಕ್ ವೆಹಿಕಲ್ ಮತ್ತು ಎನರ್ಜಿ ಸ್ಟೋರೇಜ್ ನೀತಿಯನ್ನು ಪ್ರಾರಂಭಿಸಿದ ದೇಶದ ಮೂರನೇ ರಾಜ್ಯವಾಗಿದೆ ತೆಲಂಗಾಣ 2020 ರಲ್ಲಿ ಹೊರಹೊಮ್ಮಿತ್ತು. ರಾಜ್ಯವು ಎಲೆಕ್ಟ್ರಿಕ್ ವಾಹನಗಳು, ಶೇಖರಣಾ ವ್ಯವಸ್ಥೆಗಳು ಮತ್ತು ಘಟಕಗಳ ತಯಾರಿಕೆಯ ಕೇಂದ್ರವಾಗಿದೆ. ರಾಜ್ಯ ಸರ್ಕಾರವು ಈ ಕ್ಷೇತ್ರದಲ್ಲಿ 4ಬಿಲಿಯನ್ ಡಾಲರ್‌ ಮೌಲ್ಯದ ಹೂಡಿಕೆಗಳನ್ನು ಆಕರ್ಷಿಸಲು ಮತ್ತು 2030 ರ ವೇಳೆಗೆ ಈ ವಲಯದಲ್ಲಿ 1,20,000 ಉದ್ಯೋಗಗಳನ್ನು ಸೃಷ್ಟಿಸಲು ಬಯಸಿದೆ.

ಇದನ್ನೂ ಓದಿ: ಮಣಿಪುರದ ಪ್ರಸ್ತುತ ಪರಿಸ್ಥಿತಿ ಕುರಿತು ರಾಷ್ಟ್ರಪತಿಗಳಿಗೆ ಖರ್ಗೆ ಪತ್ರ ಬರೆಯುತ್ತಾರೆ: ಜೈರಾಮ್ ರಮೇಶ್

ಮಣಿಪುರದ ಪ್ರಸ್ತುತ ಪರಿಸ್ಥಿತಿ ಕುರಿತು ರಾಷ್ಟ್ರಪತಿಗಳಿಗೆ ಖರ್ಗೆ ಪತ್ರ ಬರೆಯುತ್ತಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...